ಉಪೇಂದ್ರ ಅವರನ್ನು ಸೂಪರ್ ಸ್ಟಾರ್ ಮತ್ತು ರಿಯಲ್ ಸ್ಟಾರ್ ಎಂದು ಕರೆಯಲಾಗುತ್ತದೆ. ಹಾಗೆಯೇ ಇವರು ಒಬ್ಬ ಅದ್ಭುತ ನಿರ್ದೇಶಕ ಹಾಗೂ ನಟ ಆಗಿದ್ದಾರೆ. ಇವರ ಬುದ್ಧಿವಂತಿಕೆ ಬಹಳ ಭಿನ್ನವಾಗಿದೆ. ಹಾಗೆಯೇ ಇವರ ನಟನೆಯನ್ನು ಸಹ ಯಾರಿಗೂ ಮಾಡಲು ಬರುವುದಿಲ್ಲ. ಹಾಗೆಯೇ ಇವರು ಹಾಡುಗಳನ್ನು ಸಹ ಹಾಡಿದ್ದಾರೆ. ಇವರ ನಿರ್ದೇಶನದ ಓಂ ಎನ್ನುವ ಚಿತ್ರ ಈಗಲೂ ಓಡುತ್ತದೆ ಈ ಎಂದರೂ ತಪ್ಪಿಲ್ಲ. ಆದ್ದರಿಂದ ನಾವು ಇಲ್ಲಿ ಅವರ ತಂದೆಯ ಹುಟ್ಟು ಹಬ್ಬದ ಆಚರಣೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಇವರು ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಕುಂದಾಪುರದ ಸಮೀಪದಲ್ಲಿರುವ ಕೋಟೇಶ್ವರದಲ್ಲಿ ಜನಿಸಿದರು. ಇವರು ತಮ್ಮ ಮತ್ತು ಇತರರ ಚಿತ್ರಗಳಿಗೆ ಹಾಡುಗಳನ್ನು ರಚಿಸಿದ್ದಾರೆ. 1992ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದಕ್ಕೂ ಮುಂಚೆ ಕಾಶೀನಾಥ್ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ನಾಯಕನಟರಾಗಿ ಇವರ ಮೊದಲ ಚಿತ್ರ 1994ರಲ್ಲಿ ಬಿಡುಗಡೆಯಾದ H20. ಇವರ ಬಾಳಸಂಗಾತಿ ಪ್ರಿಯಾಂಕ ಉಪೇಂದ್ರ. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಬಸವನಗುಡಿಯ ಎ.ಪಿ.ಎಸ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವಾಗ ನಿರ್ದೇಶನದ ಗೀಟನ್ನು ಅಂಟಿಸಿಕೊಂಡ ಉಪ್ಪಿ ಕನ್ನಡದ ಹೆಸರಾಂತ ನಿರ್ದೇಶಕ ಕಾಶಿನಾಥ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದರು.1998ರಲ್ಲಿ ತೆರೆಗೆ ಬಂದ ಎ ಚಿತ್ರವನ್ನು ನಿರ್ದೇಶಿಸಿ ಸ್ವತಃ ತಾವೇ ನಟಿಸಿ ನಾಯಕನಾಗಿಯೂ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾದರು. ಮುಂದೆ ತೆರೆಗೆ ಬಂದ ಉಪೇಂದ್ರ ಚಿತ್ರವು ಹಲವಾರು ದಾಖಲೆಗಳನ್ನು ಬರೆಯಿತು. ಇವೆರಡು ಚಿತ್ರಗಳು ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗು ಚಿತ್ರರಂಗದಲ್ಲಿಯೂ ಶತದಿನ ಪೂರೈಸಿದವು.

ಇಲ್ಲಿಂದ ಮುಂದೆ 10 ವರ್ಷಗಳ ಕಾಲ ನಿರ್ದೇಶನವನ್ನು ಬದಿಗಿಟ್ಟ ಉಪ್ಪಿ ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದರು. ಮುಂದೆ ಇವರು 2010ರಲ್ಲಿ ನಿರ್ದೇಶಿಸಿದ ಸೂಪರ್ ಮತ್ತು 2015ರಲ್ಲಿ ನಿರ್ದೇಶಿಸಿದ ಉಪ್ಪಿ 2 ಚಿತ್ರಗಳು ಶತದಿನ ಪೂರೈಸಿದವು. 2018 ಮಾರ್ಚ್ ನಲ್ಲಿ ಪ್ರಜಾಕೀಯ ಪಕ್ಷ ಸ್ಥಾಪಿಸಿ ರಾಜಕೀಯವಾಗಿಯೂ ಸಕ್ರಿಯವಾಗಿದ್ದಾರೆ. ತಮ್ಮ ವಿಶಿಷ್ಟ ಆಲೋಚನಾ ಲಹರಿಗಳು, ವಿಭಿನ್ನ ನಟನಾ ಶೈಲಿಗಳಿಂದ ಭಿನ್ನವಾಗಿ ನಿಲ್ಲುವ ಇವರು ಕನ್ನಡ ಚಿತ್ರರಂಗ ಕಂಡ ಅದ್ಭುತ ಪ್ರತಿಭೆ ಆಗಿದ್ದಾರೆ. ಇವರಿಗೆ ತಂದೆ ಮತ್ತು ತಾಯಿ ಇದ್ದು ಇತ್ತೀಚೆಗೆ ತಮ್ಮ 80ನೇ ತಂದೆಯ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *