ಆ್ಯಂಕರ್ ಅನುಶ್ರೀಗೆ ಶಿವಣ್ಣ ಕೊಟ್ಟ ಕಾಸ್ಟ್ಲಿ ಗಿಫ್ಟ್ ಏನು ಗೊತ್ತಾ, ಅನುಶ್ರೀ ಫುಲ್ ಫಿದಾ

0 0

ಆ್ಯಂಕರ್ ಅನುಶ್ರೀ ಎಂದರೆ ಎಲ್ಲರಿಗೂ ಗೊತ್ತು, ಅವರು ಮಾತು ಬಲು ಹುರುಪು. ಅಷ್ಟು ಸುಪ್ರಸಿದ್ಧಿ ಪಡೆದ ಅನುಶ್ರೀ ಬದುಕಿನ ಕಥೆ ಜನರಿಗೆ ತಿಳಿದಿಲ್ಲ. ಮಂಗಳೂರಿನ ಒಂದು ಮೂಲೆಯಿಂದ ಆಂಕರ್‌ ಆಗಬೇಕು ಅನ್ನುವ ಕನಸು ಹೊತ್ತು ಬೆಂಗಳೂರಿಗೆ ಬಂದಿಳಿದವರು ಅನುಶ್ರೀ. ಅನುಶ್ರೀ ದೂರದರ್ಶನದಲ್ಲಿ ಕನ್ನಡವಾಹಿನಿಗಳಲ್ಲಿ ಕಾರ್ಯಕ್ರಮ ನಿರೂಪಕಿ. ಅವರು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಹಾಗೂ ಇತರ ಪ್ರಶಸ್ತಿಗಳು ದೊರಕಿದೆ. ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಕನ್ನಡ ಕಿರುತೆರೆ ಲೋಕದಲ್ಲಿ ಆ್ಯಂಕರ್​ ಅನುಶ್ರೀ ಅವರು ಟಾಪ್​ ನಿರೂಪಕಿ ಆಗಿ ಮಿಂಚುತ್ತಿದ್ದಾರೆ. ಅನೇಕ ಸಿನಿಮಾ ಕಾರ್ಯಕ್ರಮಗಳನ್ನೂ ಅವರು ನಡೆಸಿಕೊಡುತ್ತಾರೆ.

ಅನುಶ್ರೀ ಇದ್ದರೆ ಕಾರ್ಯಕ್ರಮ ಕಳೆಕಟ್ಟುತ್ತದೆಂಬ ನಂಬಿಕೆ ಸಿನಿಮಾ ಮಂದಿಗೆ. ನಟಿ, ನೃತ್ಯಗಾರ್ತಿ ಆಗಿರುವ ಅನುಶ್ರೀಗೆ ಕಾರ್ಯಕ್ರಮ ನಿರೂಪಣೆ ಚೆನ್ನಾಗಿ ಕೈ ಹಿಡಿದಿದೆ. ಅದ್ಭುತ ಮಾತುಗಾತಿಯಾಗಿರುವ ಅನುಶ್ರೀ, ಪುನೀತ್ ರಾಜ್‌ಕುಮಾರ್ ಅವರ ದೊಡ್ಡ ಅಭಿಮಾನಿ. ಅಪ್ಪು ಮಾತ್ರವೇ ಅಲ್ಲದೆ ಶಿವರಾಜ್ ಕುಮಾರ್ ಅವರ ಬಗ್ಗೆಯೂ ಬಹಳ ಗೌರವ, ಅಭಿಮಾನವನ್ನು ಅನುಶ್ರೀ ಹೊಂದಿದ್ದಾರೆ. ದೊಡ್ಮನೆಯ ಸದಸ್ಯರ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಅನುಶ್ರೀಯನ್ನು ದೊಡ್ಮನೆಯವರು ಸಹ ತಮ್ಮ ಸ್ವಂತದವರಂತೆಯೇ ಕಾಣುತ್ತಾರೆ. ಇದೀಗ ದೊಡ್ಮನೆಯ ಹಿರಿಯ ಸದಸ್ಯ ಶಿವರಾಜ್ ಕುಮಾರ್ ಭಾಗವಹಿಸಿರುವ ಡಿಕೆಡಿ ಶೋ ಅನ್ನು ಅನುಶ್ರೀ ಅವರೇ ನಿರೂಪಣೆ ಮಾಡುತ್ತಿದ್ದಾರೆ. ಈ ಶೋನಲ್ಲಿ ನಡೆದಿರುವ ಒಂದು ಆಪ್ತ ಘಟನೆಯ ವಿಡಿಯೋವನ್ನು ಅನುಶ್ರೀ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಹುಬೇಡಿಕೆಯ ಈ ನಿರೂಪಕಿ ಎಂದರೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೂ ಅಚ್ಚುಮೆಚ್ಚು. ಪ್ರಸ್ತುತ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಕಾರ್ಯಕ್ರಮ ಕೂಡ ಅನುಶ್ರೀ ಅವರಿಂದಾಗಿ ಕಳೆ ಕಟ್ಟಿದೆ. ಈ ಶೋನಲ್ಲಿ ಶಿವರಾಜ್​ಕುಮಾರ್​ ಜಡ್ಜ್​ ಆಗಿದ್ದಾರೆ. ಶಿವಣ್ಣನಿಂದ ಅನುಶ್ರೀಗೆ ಈಗ ಒಂದು ಗಿಫ್ಟ್​ ಸಿಕ್ಕಿದೆ. ಆ ಉಡುಗೊರೆ ಸಿಕ್ಕಿದ್ದಕ್ಕೆ ಅವರು ಹಿರಿಹಿರಿ ಹಿಗ್ಗುತ್ತಿದ್ದಾರೆ. ಆ ಗಿಫ್ಟ್​ ಬೇರೇನೂ ಅಲ್ಲ. ಸ್ವತಃ ಶಿವಣ್ಣ ಧರಿಸಿದ್ದ ಜಾಕೆಟ್​. ಈ ಉಡುಗೊರೆ ಪಡೆದ ಕ್ಷಣ ಹೇಗಿತ್ತು ಎಂಬುದನ್ನು ವಿಡಿಯೋ ಸಮೇತ ವಿವರಿಸಿದ್ದಾರೆ ಅನುಶ್ರೀ. ಆ ವಿಡಿಯೋ ಈಗ ವೈರಲ್​ ಆಗಿದೆ.
ಅನುಶ್ರೀ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಅದರ ಜೊತೆಗೆ ಅವರು ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ. ‘ಇದು ಯಾವ ಜನ್ಮದ ಪುಣ್ಯ? ಕಳೆದ ವಾರ ಡಿಕೆಡಿ ಶೂಟ್ ವೇಳೆ ಹೇಳಿದೆ ಅಣ್ಣ ಜಾಕೆಟ್ ಸಕ್ಕತ್ ಆಗಿದೆ ಅಂತ. ಆಯ್ತು ಬಿಡಮ್ಮ ನಿಂಗೆ ಕೊಡ್ತೀನಿ ಅಂದ್ರು. ಸುಮ್ನೆ ಹೇಳಿರ್ತಾರೆ ಅಂದ್ಕೊಂಡೆ ನಾನು. ಆದ್ರೆ ಎಷ್ಟೇ ಆದ್ರೂ ಅಣ್ಣಾವರ ರಕ್ತ ಅಲ್ವಾ? ಆಕಾಶ ನೋಡದ ಕೈ, ಪ್ರೀತಿ ಹಂಚಿದ ಕೈಗಳು ಅವು. ಹೊರಡುವ ಮುನ್ನ. ಜಾಕೆಟ್ ಬಿಚ್ಚಿ ಅದರ ಮೇಲೆ ‘With lots of love to dearest friend Anu’ ಅಂತ ಬರೆದು ಸಹಿ ಹಾಕಿ, ತಮ್ಮ ಕೈಯಾರೆ ಜಾಕೆಟ್ ತೊಡಿಸಿ, ಮತ್ತೊಮ್ಮೆ ಮಮತೆ ಮೆರೆದ ಮುತ್ತಣ್ಣ. ಶಿವಣ್ಣ.. ನಿಮ್ಮ ರೂಪದಲ್ಲಿ ನಮ್ಮ ಪರಮಾತ್ಮನನ್ನು ಕಾಣ್ತಿದೀವಿ. ಮತ್ತೊಮ್ಮೆ ಧನ್ಯವಾದಗಳು ಸರ್’ ಎಂದು ಅನುಶ್ರೀ ಬರೆದುಕೊಂಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 71 ಸಾವಿರಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಕಮೆಂಟ್​ಗಳ ಮೂಲಕ ನೂರಾರು ಮಂದಿ ಮೆಚ್ಚುಗೆ ಸೂಚಿಸಿದ್ದಾರೆ. ‘ನೀವು ತುಂಬಾ ಲಕ್ಕಿ’ ಎಂದು ಎಲ್ಲರೂ ಕಮೆಂಟ್​ ಮಾಡಿದ್ದಾರೆ. ಪ್ರಸ್ತುತ ಶಿವರಾಜ್​ಕುಮಾರ್​ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿದ ‘ಬೈರಾಗಿ’ ಸಿನಿಮಾ ಜುಲೈ 1ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್​ ಮತ್ತು ಡಾಲಿ ಧನಂಜಯ್​ ಕೂಡ ನಟಿಸಿದ್ದಾರೆ. ವಿಜಯ್​ ಮಿಲ್ಟನ್​ ನಿರ್ದೇಶನ ಮಾಡಿದ್ದು, ಕೃಷ್ಣ ಸಾರ್ಥಕ್​ ಅವರು ನಿರ್ಮಾಣ ಮಾಡಿದ್ದಾರೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.