ಬಹಳಷ್ಟು ಜನರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ, ಇನ್ನು ಕೆಲವರು ಓದು ಮುಗಿಸಿ ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಅನೇಕರು ಸರ್ಕಾರಿ ಉದ್ಯೋಗಕ್ಕಾಗಿ ಪರಿತಪಿಸುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆಗಳೇನು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇನ್ನಿತರ ವಿಷಯವನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಾಸನ ಜಿಲ್ಲೆಯ 07 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು, 24 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ಒಟ್ಟು 31 ಹುದ್ದೆಗಳು ಖಾಲಿ ಇದೆ.

ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ, ಗರಿಷ್ಟ 9 ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಇದರಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದವರನ್ನು ಆಯ್ಕೆ ಮಾಡಲಾಗುತ್ತದೆ.

ಇನ್ನೊಂದು ಹುದ್ದೆಯಾದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ತೇರ್ಗಡೆಯಾಗಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷದ ಒಳಗಿರಬೇಕು. ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇದ್ದು ಅಥವಾ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ಸಹಾಯಕಿ ವಾಸವಾಗಿದ್ದು, ಅಂಗನವಾಡಿ ಕೇಂದ್ರದ ಮೂರು ಕಿಲೋಮೀಟರ್ ವ್ಯಾಪ್ತಿಯೊಳಗೆ ವಾಸಿಸುತ್ತಿದ್ದರೆ

ಅವರು ಎಸ್ಎಸ್ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು ಅಂದರೆ ಅನುಭವ ಹೊಂದಿದ್ದರೆ, 45 ವರ್ಷ ವಯೋಮಿತಿಯ ಒಳಗಿದ್ದರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇಂತಹ ಅಭ್ಯರ್ಥಿಗಳಿದ್ದಲ್ಲಿ ಆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಪ್ರಮೇಯ ಬರುವುದಿಲ್ಲ.

ಸದರಿ ಸಹಾಯಕಿಯನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಸೆಪ್ಟೆಂಬರ್ ತಿಂಗಳಿನ 14 ನೇ ತಾರೀಖಿನಂದು ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ ಅಕ್ಟೋಬರ್ 13 ನೇ ತಾರೀಖಿನಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗ ಕಳೆದುಕೊಂಡು ಉದ್ಯೋಗ ಹುಡುಕಲು ಪರದಾಡುತ್ತಿರುವವರಿಗೆ ತಿಳಿಸಿ ಅರ್ಹ ಅಭ್ಯರ್ಥಿಗಳಾಗಿದ್ದಲ್ಲಿ ತಪ್ಪದೆ ಅರ್ಜಿ ಸಲ್ಲಿಸಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!