ಕಿಚ್ಚನ ಹುಟ್ಟು ಹಬ್ಬಕ್ಕೆ ಕ್ರಿಕೆಟಿಗ ಅನಿಲ್ ಕುಂಬ್ಳೆ ಕಡೆಯಿಂದ ಸಿಕ್ತು ಬಿಗ್ ಸರ್ಪ್ರೈಸ್

0 0

ಕಿಚ್ಚನ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅಭಿಮಾನಿಗಳಿಗೆ ಮತ್ತು ಸ್ವತಃ ಕಿಚ್ಚ ಸುದೀಪ್ ಅವರಿಗೆ ಕ್ರಿಕೆಟ್ ದಿಗ್ಗಜ, ಸ್ಪಿನ್ ಮಾಂತ್ರಿಕ ಸರ್ಪ್ರೈಸ್ ನೀಡಿದ್ದಾರೆ ಅನಿಲ್ ಕುಂಬ್ಳೆ ಸುದೀಪ್ ಹುಟ್ಟುಹಬ್ಬದ ಈ ಕಾಮನ್ ಡಿಪಿ ಯನ್ನು ಅಭಿಮಾನಿಗಳು ತಮ್ಮ ಸೋಷಿಯಲ್ ಮೀಡಿಯಾ ಡಿಪಿಯಾಗಿಸಿಕೊಂಡಿದ್ದಾರೆ. ಈ ಮೂಲಕ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಅವರು ಸ್ಯಾಂಡಲ್‍ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ.

ಇದೆ ಬರುವ ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹುಟ್ಟುಹಬ್ಬಕ್ಕೆ 10 ದಿನ ಮೊದಲೇ ಸಿದ್ಧವಾಗಿರುವ ಫೋಟೋವನ್ನು ಕುಂಬ್ಳೆ ಇಂದು ರಿಲೀಸ್ ಮಾಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಅನಿಲ್ ಕುಂಬ್ಳೆ -ಸುದೀಪ್ ಉತ್ತಮ ಸ್ನೇಹ ಹೊಂದಿದ್ದು ಗೆಳೆಯನ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ರಿಲೀಸ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಇದನ್ನು ಅಭಿಮಾನಿಗಳು ಮೆಚ್ಚಿ ಕೊಂಡಾಡಿದ್ದಾರೆ.

ಬಿಗ್ ಬಾಸ್ ಶೋ ಇತ್ತೀಚೆಗೆ ಅಷ್ಟೇ ಮುಗಿದಿದೆ. ಕೋಟಿಗೊಬ್ಬ 3 ಮತ್ತು ವಿಕ್ರಂ ರೋಣ ಸಾಕಷ್ಟು ನಿರೀಕ್ಷೆಯನ್ನು ಹುಟ್ಟಿಸಿವೆ. ಕೊರೋನಾ ಕಾರಣಕ್ಕೆ ಸ್ಯಾಂಡಲ್ ವುಡ್ ಸಮಸ್ಯೆ ಅನುಭವಿಸುತ್ತಿದ್ದು ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಿದ್ಧವಾಗಿವೆ.

ಫೋಟೋದಲ್ಲಿ ಸುತ್ತಲೂ ಜನರು ನೆರೆದಿರುವ ಕ್ರೀಡಾಂಗಣದ ಮಧ್ಯದಲ್ಲಿ ಕುಳಿತು ತಮ್ಮ ಅಭಿಮಾನಿಗಳ ಮುಂದೆ ಕಿಚ್ಚ ಕೈ ಚಾಚುತ್ತಿರುವಂತೆ ಫೋಟೋವೊಂದನ್ನು ಅದ್ಭುತವಾಗಿ ಎಡಿಟ್ ಮಾಡಲಾಗಿದೆ. ಅಲ್ಲದೆ ಫೋಟೋದಲ್ಲಿ ಬಾದ್ ಷಾ ಎಂದು ಬರೆಯಲಾಗಿದ್ದು, ಈ ಫೋಟೋವನ್ನು ಕುಂಬ್ಳೆ ಸೇರಿದಂತೆ ಹಲವಾರು ಅಭಿಮಾನಿಗಳು ತಮ್ಮ ಟ್ವಿಟ್ಟರ್ ಖಾತೆಗಳ ಮೂಲಕ ಮುಂಚಿತವಾಗಿಯೇ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಹಾಗೂ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಕಾಮನ್ ಡಿಪಿ ಶೇರ್ ಮಾಡಿಕೊಳ್ಳಲು ತುಂಬಾ ಸಂತಸವಾಗುತ್ತಿದೆ.

ಎಂದಿಗೂ ಸ್ಫೂರ್ತಿದಾಯಕವಾಗಿರಿ ಎಂದು ಕುಂಬ್ಳೆ ಫೋಟೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಕಿಚ್ಚ ಕೂಡ ಪ್ರತಿಕ್ರಿಯಿಸಿದ್ದು, ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೇನು ಇರಲು ಸಾಧ್ಯ ಅನಿಲ್ ಕುಂಬ್ಳೆ ಸರ್. ಇದು ನಿಜಕ್ಕೂ ದೊಡ್ಡ ಸರ್ಪ್ರೈಸ್ ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ. ಸುದೀಪ್ ಫೋಟೋ ವೈರಲ್ ಆಗುತ್ತಿದ್ದ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ ಹ್ಯಾಶ್ ಟ್ಯಾಗ್ ಕಿಚ್ಚ ಸುದೀಪ್ ಹಾಗೂ ಕೋಟಿಗೊಬ್ಬ ಅಂತ ಕೆಲ ಕಾಲ ಟ್ರೆಂಡಿಗ್ ನಲ್ಲಿತ್ತು. 

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇದೇ ವರಮಹಾಲಕ್ಷ್ಮಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಎರಡನೇ ಅಲೆಯ ಆತಂಕ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ಚಿತ್ರ ಚಿಡುಗಡೆಯಾಗಲಿಲ್ಲ. ಪರಿಣಾಮ ತೆರಮೇಲೆ ಕಿಚ್ಚನನ್ನು ಕಾಣಲು ತುದಿಗಾಲಲ್ಲಿ ಕಾಯುತ್ತಿದ್ದ ಅಭಿಮಾನಿಗಳಲ್ಲಿ ನಿರಾಸೆ ಉಂಟಾಗಿದೆ. ಈ ಮಧ್ಯೆ ಹಬ್ಬದಂದು ಕಿಚ್ಚ ಫೋಟೋವೊಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ಹಬ್ಬದ ಪ್ರಯುಕ್ತ ಸ್ಟೈಲಿಶ್ ಫೋಟೋ ಶೃ ಮಾಡಿರುವ ಕಿಚ್ಚ, ಬಹಳ ದಿನಗಳ ನಂತರ ವೈಯಕ್ತಿಕವಾಗಿ ಮಾಡಿದ ಫೊಟೋಶೂಟ್ ಎಂದು ಕ್ಯಾಪ್ಷನ್ ಸಹ ಹಾಕಿಕೊಂಡಿದ್ದು, ನೆಚ್ಚಿನ ನಟನ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.