Annabhagya Yojane: ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ

0 129

Annabhagya Yojane In Karnataka: ಹಸಿವು ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಅನ್ನಭಾಗ್ಯ ಯೋಜನೆಗೆ (Annabhagya Yojana)ಸಿಎಂ ಚಾಲನೆ ನೀಡಲಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯನವರು ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಹೇಳಿದ್ದಾರೆ ಇದರ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಬಹುದು.

ಸರ್ಕಾರ ನೀಡಿರುವಂತಹ ಐದು ಯೋಜನೆಯಲ್ಲಿ ಅನ್ನಭಾಗ್ಯವೂ ಒಂದು ಕಾಂಗ್ರೆಸ್ ಸರ್ಕಾರ ನೀಡಿರುವಂತಹ 5 ಗ್ಯಾರೆಂಟಿಯನ್ನು ಜಾರಿಗೆ ತರಲು ಮುಂದಾಗಿದೆ ಆದರೆ ಅನ್ನಭಾಗ್ಯ (Annabhagya Scheme) ಯೋಜನೆಯಲ್ಲಿ ಐದು ಕೆಜಿ ಅಕ್ಕಿಯನ್ನು ನೀಡುವುದಾಗಿ ಹೇಳಿತ್ತು ಆದರೆ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಕಾರಣ ಅಕ್ಕಿಯ ಬದಲು ಹಣವನ್ನು ನೀಡುವುದಾಗಿ ಹೇಳಿದೆ.

ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ

ತಿಂಗಳಿಗೆ 5 ಕೆಜಿ ಅಕ್ಕಿ (5 KG Akki) ನೀಡುವುದಲ್ಲದೆ ಅನ್ನ ಭಾಗ್ಯ ಯೋಜನೆ ಅಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು ಕೆಲವು ಕಾರಣಗಳಿಂದ ಅಕ್ಕಿಯ ಬದಲು ಹಣವನ್ನು ನೀಡುತ್ತೇವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಒಂದು ಕೆಜಿಗೆ 34 ರೂಪಾಯಿಯಂತೆ ನಮೂದಿಸಲಾಗಿದೆ ಹಾಗೂ ಜೂನ್ 1 ರಿಂದ ಹಣ ವಿತರಣೆ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದರು.

ಈ ಅನ್ನ ಭಾಗ್ಯ ಯೋಜನೆ ಕೇವಲ ಬಿಪಿಎಲ್ ಕಾರ್ಡ್ (BPL card) ಹೊಂದಿರುವವರಿಗೆ ಮಾತ್ರ. ಜುಲೈ 1ರಿಂದ ಈ ಪ್ರಕ್ರಿಯೆ ಪ್ರಾರಂಭಗೊಂಡಿದೆ. ರೇಷನ್ ಕಾರ್ಡ್ ನಲ್ಲಿ ಒಬ್ಬ ವ್ಯಕ್ತಿ ಇದ್ದರೆ ಅವನಿಗೆ ಅನ್ನಭಾಗ್ಯ ಯೋಜನೆ ಅಡಿ 170ರೂ ಸಿಗುತ್ತದೆ ಹಾಗೂ ಇಬ್ಬರಿದ್ದರೆ ಅವರಿಗೆ ಅನ್ನಭಾಗ್ಯ ಯೋಜನೆ ಅಡಿ 340ರೂ ಸಿಗುತ್ತದೆ. ಈ ರೀತಿಯಾಗಿ ಹಣ ನೀಡುವುದಾಗಿ ಸಚಿವರು ಹೇಳಿದ್ದಾರೆ.

ಈ ಯೋಜನೆಯು ಬಡತನ ರೇಖೆಯಲ್ಲಿ ಅತ್ಯಂತ ಕೆಳಗಿನ ಸ್ತರದ ಕುಟುಂಬಗಳಿಗಾಗಿ ಮಾಡಿದ್ದಾರೆ. ಸರ್ಕಾರ ನೀಡಿರುವಂತಹ ಸೂಚನೆಯ ಪ್ರಕಾರ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಅನ್ನಭಾಗ್ಯ ಯೋಜನೆ ಅಡಿ ಅಕ್ಕಿ ನೀಡುತ್ತೇವೆ ಎಂದು ಹೇಳಿದ್ದಾರೆ ಏಕೆಂದರೆ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವಂತವರು ಬಡತನದ ರೇಖೆಯಲ್ಲಿ ಇದ್ದವರಾಗಿರುತ್ತಾರೆ ಹಾಗಾಗಿ ಯಾರು ಹಸುವಿನಿಂದ ಬಳಲುಬಾರದು ಎಂದು ಈ ಯೋಜನೆಯ ಉದ್ದೇಶವಾಗಿದೆ. ಇದನ್ನೂ ಓದಿ Post Office Scheme: ಪೋಸ್ಟ್ ಆಫೀಸ್ನ ಈ ಯೋಜನೆಯಡಿ 100 ರೂಪಾಯಿ ಹೂಡಿಕೆ ಮಾಡಿ ಸಾಕು 20 ಲಕ್ಷ ಸಿಗತ್ತೆ

Leave A Reply

Your email address will not be published.