Ultimate magazine theme for WordPress.

ನಟಿ ಅನುಪ್ರಭಾಕರ್ ಅವರ ಸುಂದರ ಕುಟುಂಬದಲ್ಲಿ ಯಾರೆಲ್ಲ ಇದ್ದಾರೆ ನೋಡಿ

0 1

ನಮ್ಮ ಕನ್ನಡ ಚಿತ್ರರಂಗದಲ್ಲಿ ಬಹಳಷ್ಟು ನಟ ನಟಿಯರು ಜನಪ್ರಿಯತೆ ಗಳಿಸಿದ್ದಾರೆ ಅಂತವರ ಸಾಲಿನಲ್ಲಿ ಅನುಪ್ರಭಾಕರ್ ಕೂಡ ಒಬ್ಬರಾಗಿದ್ದಾರೆ. ಅನುಪ್ರಭಾಕರ ಅವರ ಸುಂದರ ಕುಟುಂಬದ ವಿಡಿಯೋವನ್ನೊಮ್ಮೆ ಇಲ್ಲಿ ನೋಡೋಣ.ಚಂದನವನದ ಖ್ಯಾತ ನಟಿಯರಲ್ಲಿ ಅನುಪ್ರಭಾಕರ್ ಕೂಡಾ ಒಬ್ಬರು. ಇವರು ಚಿಕ್ಕ ವಯಸಿನಲ್ಲಿಯೇ ಚಪಲ ಚೆನ್ನಿಗರಾಯ, ಶಾಂತಿ ಕ್ರಾಂತಿ ಚಿತ್ರದಲ್ಲಿ ಅಭಿನಹಿಸಿದ್ದಾರೆ. 1999 ರಲ್ಲಿ ಬಿಡುಗಡೆಗೊಂಡ ಹೃದಯ ಹೃದಯ ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗದ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಇವರು ಡಾ.ವಿಷ್ಣುವರ್ಧನ್ ಅವರ ಜೊತೆಯಲ್ಲಿ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ, ಸಹೋದರಿಯ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.

ಅನು ಪ್ರಭಾಕರ್ ಅವರು ಮಾರ್ಚ್ ೨೦೦೨ರಲ್ಲಿ ನಟಿ ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಅವರನ್ನು ವಿವಾಹವಾದರು.ಇವರ ನಡುವೆ ಭಿನ್ನಾಭಿಪ್ರಾಯಗಳನ್ನು ಉದಾಹರಿಸಿ, ಅನು ಅವರು ಜನವರಿ ೨೦೧೪ರಲ್ಲಿ ವಿಚ್ಛೇದನ ಪಡೆದರು. ನಂತರ ಏಪ್ರಿಲ್ ೨೦೧೬ರಲ್ಲಿ ನಟ ರಘು ಮುಖರ್ಜಿ ಅವರನ್ನು ವಿವಾಹವಾದರು.ಅವರಿಗೆ ನಂದನ ಎಂಬ ಪುತ್ರಿ ಇದ್ದಾರೆ . ಅನು ಅವರ ವಿವಿಧ ಚಿತ್ರಗಳ ಅಭಿನಯಕ್ಕಾಗಿ ಬೆಂಗಳೂರಿನ ಕೊಳದ ಮಠವು ‘ಅಭಿನಯ ಸರಸ್ವತಿ’ ಎಂಬ ಪ್ರಶಸ್ತಿನ್ನು ನೀಡಿ ಗೌರವಿಸಲಾಯಿತು.ಕನ್ನಡ ರಾಜ್ಯ ಸರ್ಕಾರದ ಅತ್ಯುತ್ತಮ ನಟಿ ಪ್ರಶಸ್ತಿ ೨೦೦೦-೦೧ ಮತ್ತು ಸಿನೆಮಾ ಎಕ್ಸ್ ಪ್ರೆಸ್ ಅತ್ಯುತ್ತಮ ನಟಿ ಮುಂತಾದ ಪ್ರಶಸ್ತಿಗಳನ್ನು ಇವರು ಗೆದ್ದಿದ್ದಾರೆ.

ನಟಿ ಅನು ಪ್ರಭಾಕರ್​ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ. ಸದಾ ತಮ್ಮ ಹಾಗೂ ಕುಟುಂಬದ ಕುರಿತಾಗಿ ಅಪ್ಡೇಟ್​ ಕೊಡುವ ಅನು ಪ್ರಭಾಕರ್,​ ಒಂದೇ ಫ್ರೇಮಿನಲ್ಲಿ ಮೂರು ತಲೆಮಾರಿನವರು ಇರುವ ಫೋಟೋ ಹಂಚಿಕೊಂಡಿದ್ದಾರೆ. ನಟಿ ಅನು ಪ್ರಭಾಕರ್​ ತಮ್ಮ ಅಮ್ಮ ಗಾಯತ್ರಿ ಪ್ರಭಾಕರ್​ ಹಾಗೂ ಮಗಳು ನಂದನಾ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಸೆಲೆಬ್ರಿಟಿ ಕುಟುಂಬದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅನುಪ್ರಭಾಕರ್ ಅವರು ಕೆಲವು ಕಿರುತೆರೆ ಕಾರ್ಯಕ್ರಮಗಳನ್ನು ಕೂಡಾ ನಡೆಸಿಕೊಟ್ಟಿದ್ದಾರೆ ಅವುಗಳು ಈ ರೀತಿಯಾಗಿವೆ. ಬಾಳೆ ಬಂಗಾರ, ಹೋಮ್ ಮಿನಿಸ್ಟರ್, ಶ್ರೀಮತಿ ಕರ್ನಾಟಕ ,ಮಂಜು ಮುಸುಕಿದ ಹಾದಿ, ನೂರು ದಿನಗಳು ಮತ್ತು ತ್ರಿವೇಣಿ ಸಂಗಮ. ಇತ್ತೀಚೆಗೆ ಇವರು ತಮ್ಮ ಹುಟ್ಟುಹಬ್ಬದಂದು ಹಂಚಿಕೊಂಡ ಕುಟುಂಬದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು ಅನುಪ್ರಭಾಕರ್ ಹಾಗೂ ರಘು ಮುಖರ್ಜಿ ಇಬ್ಬರ ಅಭಿಮಾನಿಗಳಿಗೂ ಸಂತಸ ತಂದಿದೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.