ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣ ವಾರ್ತೆಯನ್ನು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್ ನಿಧನದಿಂದ ಅವರ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಅವರು ಮೃತಪಟ್ಟು ಒಂದೂವರೆ ತಿಂಗಳು ಕಳೆಯುತ್ತಾ ಬಂದರೂ ನೋವು ಎಂಬುದು ಕಿಂಚಿತ್ತೂ ಕಡಿಮೆ ಆಗುತ್ತಿಲ್ಲ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ.

ಬೇರೆ ರಾಜ್ಯಗಳಲ್ಲೂ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸುವ ಕಾರ್ಯ ನಡೆದಿದೆ. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಪರಭಾಷೆಯಲ್ಲಿರುವ ಅಭಿಮಾನಿಗಳು ಕೂಡ ಪುನೀತ್ ಅವರನ್ನು ನೆನೆಯುತ್ತಿದ್ದಾರೆ. ಅವರ ಮೇಲಿನ ಅಭಿಮಾನವನ್ನು ನಾನಾ ರೀತಿಯಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಕೆಲವರು ಪುನೀತ್ ದಾರಿಯಲ್ಲಿ ಸಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಆಂಧ್ರ ಪ್ರದೇಶದಲ್ಲಿ ಪುನೀತ್ ಅವರ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ, ಅಲ್ಲಿನ ಶಿಲ್ಪಿಗಳಿಗೆ ಸಾಕಷ್ಟು ಆರ್ಡರ್ಗಳು ಬರುತ್ತಿವೆ.

ಪುನೀತ್ ರಾಜ್ಕುಮಾರ್ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ. ಎಲ್ಲಾ ಏರಿಯಾಗಳಲ್ಲಿ ಪುನೀತ್ ಪ್ರತಿಮೆ ಸ್ಥಾಪಿಸಲು ಆಸಕ್ತಿ ತೋರಿದ್ದಾರೆ. ಮೊದಲು ಪುನೀತ್ ರಾಜಕುಮಾರ್ ಅವರು ನಮ್ಮನ್ನ ಅಗಲಿದ ಸಂದರ್ಭದಲ್ಲಿ ಸಹ ಧಾರವಾಡದ ಕಲಾವಿದರೊಬ್ಬರು ಪುನೀತ್ ಪ್ರತಿಮೆ ರಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದರು.

ಅಷ್ಟೇ ಅಲ್ಲದೆ ಪುನೀತ್ ಅವರಿಗೆ ಧಾರವಾಡ ನಾಗರಿಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಪುನೀತ್ ಅಭಿಯನದ ಕೊನೆಯ ಚಿತ್ರ ಯುವರತ್ನ ಧಾರವಾಡ ನಗರದಲ್ಲಿ ಚಿತ್ರಿಕರಣಗೊಂಡಿತ್ತು. ಈ ಹಿನ್ನೆಲೆ ಕೆಸಿಡಿ ಕಾಲೇಜ್ ಆವರಣದಲ್ಲಿ ಕೂಡಾ ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದ್ದರು.

ಕಲಾವಿದ ಮಂಜುನಾಥ ಹಿರೇಮಠ ಪುನೀತ್ ರಾಜಕುಮಾರ ಅವರ ಮಣ್ಣಿನ ಪ್ರತಿಮೆ ತಯಾರಿಸಿದ್ದರು. ಇದನ್ನೇ ಕಾಲೇಜ್ ಎದುರುಗಡೆ ಇಟ್ಟು ವಿದ್ಯಾರ್ಥಿಗಳು, ಕಲಾವಿದರು, ಕನ್ನಡ ಹೋರಾಟಗಾರರು, ವಿವಿಧ ನಾಗರಿಕರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇನ್ನು ಯುವರತ್ನ ಸಿನೆಮಾ ಶೂಟಿಂಗ್ ವೇಳೆ ಪುನೀತ್ ಓಡಾಡಿದ್ದ ಜಾಗದಲ್ಲೇ ಪ್ರತಿಮೆಯಿಟ್ಟು ಶ್ರದ್ಧಾಂಜಲಿ ಅರ್ಪಿಸಲಾಗಿತ್ತು.

ಇದೇ ರೀತಿಯಾಗಿ ಈಗ ಆಂಧ್ರ ಪ್ರದೇಶದಲ್ಲೂ ಈ ರೀತಿ ಮಾಡಲಾಗುತ್ತಿದೆ. ಇಲ್ಲಿನ ಗುಂಟೂರು ಜಿಲ್ಲೆಯ ತೆನಾಲಿ ಜಿಲ್ಲೆಯ ಶಿಲ್ಪಿ ಕಾಟೂರಿ ವೆಂಕಟೇಶ್ವರರಾವ್ ಅವರಿಗೆ ಪುನೀತ್​ ಪ್ರತಿಮೆ ನಿರ್ಮಾಣಕ್ಕೆ ಭಾರೀ ಆರ್ಡರ್​ಗಳು ಬರುತ್ತಿವೆ. ವೆಂಕಟೇಶ್ವರ್​ ಅವರು ಮಕ್ಕಳಾದ ರವಿಚಂದ್ರನ್ ಮತ್ತು ಶ್ರೀ ಹರ್ಷಲಾ ಜತೆ ಸೇರಿ 3ಡಿ ಪ್ರಿಂಟಿಂಗ್ ತಂತ್ರಜ್ಞಾನದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ತಯಾರಿಸುತ್ತಿದ್ದಾರೆ.

ಅಭಿಮಾನಿಗಳ ಆಸೆಯಂತೆ 3ಡಿ ತಂತ್ರಜ್ಞಾನದಿಂದ ಮೂರ್ತಿಗಳ ತಯಾರಿಕೆ ಆರಂಭವಾಗಿದೆ. ಈ ತಂತ್ರಜ್ಞಾನದಿಂದ 3 ಇಂಚುಗಳಿಂದ ಹಿಡಿದು 100 ಅಡಿವರೆಗೆ ಮೂರ್ತಿಗಳನ್ನು ತಯಾರಿಸಬಹುದು. ಇದರಿಂದ ಸಿದ್ಧಪಡಿಸಿದ ಮೂರ್ತಿಗಳು ತುಂಬಾನೇ ಅದ್ಭುತವಾಗಿ ಮೂಡಿ ಬರುತ್ತವೆ.  ಈಗ ಪುನೀತ್​ ಅವರ ಪ್ರತಿಮೆ ನಿರ್ಮಾಣಕ್ಕೆ ಸಾಕಷ್ಟು ಆರ್ಡರ್​ ಬರುತ್ತಿದ್ದು, ಇವರು ಹಗಲು ರಾತ್ರಿ ಎನ್ನದೇ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಗ್ರಾಹಕರ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದಾರೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!