ಸರ್ಜಾ ಕುಟುಂಬ ಕನ್ನಡ ಚಿತ್ರರಂಗದಲ್ಲಿ ಬಹಳ ಪ್ರಖ್ಯಾತಿಯನ್ನು ಹೊಂದಿದೆ. ಮೊದಲು ಅರ್ಜುನ್ ಸರ್ಜಾ ಅವರು ಕನ್ನಡ ಚಿತ್ರರಂಗದಲ್ಲಿ ಕಾಲಿಟ್ಟರು. ನಂತರದಲ್ಲಿ ಚಿರಂಜೀವಿ ಸರ್ಜಾ ಅವರು ಹಲವಾರು ಸಿನಿಮಾಗಳನ್ನು ಮಾಡಿದರು. ಹಾಗೆಯೇ ಚಿರಂಜೀವಿ ಸರ್ಜಾ ಅವರ ಸಹೋದರ ಧ್ರುವ ಸರ್ಜಾ ಅವರು ಕೂಡ ಒಬ್ಬ ಒಳ್ಳೆಯ ನಾಯಕನಟನಾಗಿ ಹೊರಹೊಮ್ಮಿದ್ದಾರೆ. ಆದರೆ ಈಗ ಚಿರಂಜೀವಿ ಸರ್ಜಾ ಅವರು ಕೇವಲ ನೆನಪು ಮಾತ್ರ. ಅರ್ಜುನ್ ಸರ್ಜಾ ಅವರು ಆಂಜನೇಯ ದೇವಸ್ಥಾನವನ್ನು ಕಟ್ಟಿಸಿದ್ದಾರೆ. ಆದ್ದರಿಂದ ನಾವು ಇಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಇವರು ಪ್ರಸಿದ್ಧ ಕಲಾವಿದರಾದ ಶಕ್ತಿ ಪ್ರಸಾದ್ ರವರ ಮಗ. ಕನ್ನಡ ಚಿತ್ರರಂಗದಲ್ಲಿ ಬಾಲನಟ ಮತ್ತು ನಾಯಕ ನಟರಾಗಿ ಪಾತ್ರ ನಿರ್ವಹಿಸಿದ್ದಾರೆ. ಆದರೆ ಅವಕಾಶಗಳು ಇವರಿಗೆ ತಮಿಳು ಚಿತ್ರರಂಗದಲ್ಲಿ ಹೆಚ್ಚಾಗಿ ದೊರೆತ ಕಾರಣ ಅಲ್ಲಿ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕರಾಗಿ ಹೆಸರು ಗಳಿಸಿದ್ದಾರೆ. ಇವರ ಕನ್ನಡ ಚಲನಚಿತ್ರ ಶ್ರೀ ಮಂಜುನಾಥದಲ್ಲಿ ನಾಯಕ ನಟನಾಗಿ ಸೌಂದರ್ಯ ಜೊತೆ ನಟಿಸಿದ್ದಾರೆ. ಇವರು ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಹೀಗೆ ಹಲವಾರು ಭಾಷೆಗಳಲ್ಲಿ ನಟಿಸಿದ್ದಾರೆ. ನಟ ಅರ್ಜುನ್ ಸರ್ಜಾ ಅವರ ಇಷ್ಟದ ದೇವರು ಹನುಮಂತ ಆಗಿದ್ದಾನೆ.

ಆದ್ದರಿಂದ ತಮಿಳುನಾಡಿನ ಚೆನ್ನೈನ ವಿಮಾನ ನಿಲ್ದಾಣದ ಹತ್ತಿರ ಹನುಮಂತ ಮತ್ತು ಶ್ರೀರಾಮನ  ದೇವಸ್ಥಾನವನ್ನು ಕಟ್ಟಿಸಿದ್ದಾರೆ. ಈ ದೇವಸ್ಥಾನದಲ್ಲಿ ಹನುಮಂತನ ವಿಗ್ರಹ 14ಟನ್ ಭಾರವನ್ನು ಹೊಂದಿದೆ. ಜುಲೈ 1 ಮತ್ತು 2 ನೇ ದಿನಾಂಕದಂದು ಈ ದೇವಸ್ಥಾನದ ಪ್ರತಿಷ್ಠಾಪನೆಯನ್ನು ನಡೆಸಲಾಯಿತು. ಚೆನ್ನೈನಲ್ಲಿ ಪೇಜಾವರದ ಮಠದ ಒಂದು ಶಾಖೆಯಿದೆ. ಸರ್ಜಾ ಕುಟುಂಬ ವಿಶ್ವೇಶ್ವರತೀರ್ಥರ ಕಾಲದಿಂದಲೂ ಈ ಮಠಕ್ಕೆ ಸಂಬಂಧವನ್ನು ಹೊಂದಿದೆ. ಈ ದೇವಸ್ಥಾನದ ಸ್ಥಾಪನೆಗಾಗಿ ಮತ್ತು ಕುಂಬಾಭಿಷೇಕಕ್ಕಾಗಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಕರೆಸಲಾಗಿತ್ತು.

ಅಯೋಧ್ಯೆ ಪ್ರವಾಸದಲ್ಲಿದ್ದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಅರ್ಜುನ್ ಸರ್ಜಾ ಅವರು ತಮಿಳುನಾಡಿಗೆ ಕರೆಸಿ ಕುಂಬಾಭಿಷೇಕ ಮಾಡಿಸಿದ್ದಾರೆ. ಪೇಜಾವರ ಸ್ವಾಮೀಜಿಯವರು ಭಗವಾನ್ ಆಂಜನೇಯ ದೇವರ ಪ್ರತಿನಿಧಿ ಜೇನುತುಪ್ಪವನ್ನು ಅಭಿಷೇಕ ಮಾಡಿದರು. ಹಾಗೆ ಹೂವಿನ ಪಕಳೆಗಳನ್ನು ಅಭಿಷೇಕ ಮಾಡಿದರು. ಹಾಗೆಯೇ ಅವಧೂತ ವಿನಯ್ ಗುರೂಜಿ ಅವರು ಕೂಡ ಈ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಹಾಗೆಯೇ ಸರ್ಜಾ ಅವರ ಇಡೀ ಕುಟುಂಬವೇ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಆಂಜನೇಯ ದೇವರು ಸರ್ಜಾ ಕುಟುಂಬಕ್ಕೆ ಒಳ್ಳೆಯದನ್ನು ಮಾಡಲಿ ಎಂದು ನಾವೆಲ್ಲರೂ ಹಾರೈಸೋಣ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave a Reply

Your email address will not be published. Required fields are marked *