ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 297 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹೇಗೆ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ಎಲ್ಲಾ ಮಾಹಿತಿಯನ್ನು ನಾವು ಲೇಖನದ ಮೂಲಕ ತಿಳಿದುಕೊಳ್ಳೋಣ.

ಖಾಲಿ ಹುದ್ದೆಗಳ ವಿವರ : ಸಹಾಯಕ ವ್ಯವಸ್ಥಾಪಕರು (ಪ.ವೈ ಕೃ.ಗ) : 50, ಸಹಾಯಕ ವ್ಯವಸ್ಥಾಪಕರು (ವಿತ್ತ) : 03, ಹಿರಿಯ ಪ್ರೊಟೆಕ್ಷನ್ ಆಫೀಸರ್ : 01 , ತಾಂತ್ರಿಕ ಅಧಿಕಾರಿ (ಡಿ.ಟಿ) : 23 , ತಾಂತ್ರಿಕ ಅಧಿಕಾರಿ (ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಷನ್) : 03 , ತಾಂತ್ರಿಕ ಅಧಿಕಾರಿ (ಗುಣನಿಯಂತ್ರಣ) : 04, ಲೆಕ್ಕ ಅಧಿಕಾರಿ : 04, ಆಡಳಿತ ಅಧಿಕಾರಿ : 04, ಕೃಷಿ ಅಧಿಕಾರಿ 2, ಖರೀದಿ ಉಗ್ರಾಣ ಅಧಿಕಾರಿ : 04 , ಮಾರುಕಟ್ಟೆ ಅಧಿಕಾರಿ : 01 , ಸಿಸ್ಟಮ್ಸ್‌ / ಎಂ.ಐ.ಎಸ್ ಅಧಿಕಾರಿ : 2 , ವಿಸ್ತರಣಾಧಿಕಾರಿ ದರ್ಜೆ-3 : 9 ಡೇರಿ ಸೂಪರ್‌ವೈಸರ್ ದರ್ಜೆ-2 : 7 ಆಡಳಿತ ಸಹಾಯಕ ದರ್ಜೆ-2 : 17 ಲೆಕ್ಕ ಸಹಾಯಕ ದರ್ಜೆ-2 : 2 ಕೋ-ಆರ್ಡಿನೇಟರ್ (ಪ್ರೊಟೆಕ್ಷನ್) : 20, ಮಾರುಕಟ್ಟೆ ಸಹಾಯಕ ದರ್ಜೆ-2 : 23, ಕೆಮಿಸ್ಟ್‌ ದರ್ಜೆ-2 : 10 , ಶುಶ್ರೂಷಕಿ ನರ್ಸ್‌ : 1, ಕಿರಿಯ ತಾಂತ್ರಿಕ (ಎಲೆಕ್ಟ್ರಿಕಲ್) : 20, ಕಿರಿಯ ತಾಂತ್ರಿಕ (ಎಲೆಕ್ಟ್ರಾನಿಕ್ ಮೆಕ್ಯಾನಿಕಲ್) : 31, ಕಿರಿಯ ತಾಂತ್ರಿಕ (ರೆಫ್ರಿಜರೇಷನ್) : 15, ಕಿರಿಯ ತಾಂತ್ರಿಕ (ಫಿಟ್ಟರ್ ): 20, ಕಿರಿಯ ತಾಂತ್ರಿಕ-ಬಾಯ್ಲರ್ : 15, ಕಿರಿಯ ತಾಂತ್ರಿಕ (ವೆಲ್ಡರ್) : 05,

ಇನ್ನೂ ಈ ಎಲ್ಲಾ ಹುದ್ದೆಗಳಿಗೆ ವಿದ್ಯಾರ್ಹತೆ ಏನು ಎಂದು ನೋಡುವುದಾದರೆ , ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಪದವಿ ಪಾಸ್‌ ಮಾಡಿರಬೇಕು. ಹಾಗೂ ಇದಕ್ಕೆ ಅರ್ಜಿ ಸಲ್ಲಿಸುವಿದು ಹೇಗೆ? ಎಂದು ನೋಡುವುದಾದರೆ , ಮೇಲಿನ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಜಾಲ ತಾಣ www.bamulnandini.coop ಗೆ ಭೇಟಿ ನೀಡಿ, ಅಗತ್ಯ ಮಾಹಿತಿಗಳು ಮತ್ತು ಅಗತ್ಯ ದಾಖಲೆಗಳ ಸಾಫ್ಟ್‌ಕಾಪಿ ಅಪ್‌ಲೋಡ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ನೇಮಕಾತಿ ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಅಥವಾ ಕೋರಿಯರ್ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಂತಹ ಅರ್ಜಿಗಳನ್ನು ಮಾನ್ಯ ಮಾಡದೇ ಗಣನೆಗೆ ತೆಗೆದುಕೊಳ್ಳದೆ ತಿರಸ್ಕರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 04/01/2021 ಆಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03/02/2021 ಆಗಿರುವುದು. ಈ ಮೇಲಿನ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ ಎಂದರೆ ಹದಿನೆಂಟು ವರ್ಷ ವಯಸ್ಸು ಆಗಿರಲೇಬೇಕು. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯಸ್ಸಾಗಿರಬೇಕು. 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಇನ್ನೂ ಆಯ್ಕೆಯ ಪ್ರಕ್ರಿಯೆ ಹೇಗೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಮೌಖಿಕ ಪರೀಕ್ಷೆಗೆ ಕರೆಯಲಾಗುತ್ತದೆ. ಮೌಖಿಕ ಪರೀಕ್ಷೆಗೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡ 85 ಕ್ಕೆ ಇಳಿಸಿ ಪ್ರಾಪ್ತವಾಗುವ ಅಂಕಗಳನ್ನು ಜೊತೆಗೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಅರ್ಹತೆಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಅರ್ಹತೆಯ ಬಗ್ಗೆ ಒಕ್ಕೂಟದ ನೇಮಕಾತಿ ಪ್ರಾಧಿಕಾರದ ನಿರ್ಣಯವೇ ಅಂತಿಮವಾಗಿರುತ್ತದೆ. ಪರೀಕ್ಷೆಯ ಪ್ರವೇಶ ಪತ್ರ, ದಿನಾಂಕ ಹಾಗೂ ಪರೀಕ್ಷೆಯ ಕಾಲಾವಧಿಯನ್ನೂ ಅರ್ಹ ಅಭ್ಯರ್ಥಿಗಳಿಗೆ ಅಂಚೆ ಮೂಲಕ ಹಾಗೂ ಒಕ್ಕೂಟದ ವೆಬ್‌ಸೈಟ್‌ನಲ್ಲಿ ತಿಳಿಸಲಾಗುವುದು. ಸದರಿ ಮಾಹಿತಿಯನ್ನು ಒಕ್ಕೂಟದ ವೆಬ್‌ ಮೂಲಕ ತಿಳಿಯಲು ಸೂಚಿಸಲಾಗಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!