ಗಂಡ ಹೆಂಡತಿ ಅನ್ಯೋನ್ಯವಾಗಿರಲೂ ಚಾಣಿಕ್ಯ ನೀತಿ ಏನ್ ಹೇಳುತ್ತೆ ಗೊತ್ತೇ

0 78

ಆಚಾರ್ಯ ಚಾಣಕ್ಯ ಜೀವನದ ಪ್ರತಿಯೊಂದು ಆಯಾಮಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅವರ ಪ್ರಕಾರ ಗಂಡ ಹೆಂಡತಿಯ ಸಂಬಂಧ ಬಹಳ ಪವಿತ್ರವಾಗಿದೆ ಹಾಗೂ ಅದು ಪ್ರೀತಿ ಮತ್ತು ನಂಬಿಕೆಯಿಂದ ಬಲಗೊಳ್ಳುತ್ತದೆ. ಹಾಗೆಯೇ ಸುಳ್ಳು, ವಂಚನೆಯಿಂದ ಗಂಡ ಹೆಂಡತಿಯ ಸಂಬಂಧ ಹಾಳಾಗುತ್ತದೆ. ಗಂಡ ಹೆಂಡತಿ ಇಬ್ಬರೂ ತಮ್ಮ ಸಂಬಂಧವನ್ನು ಅನ್ಯೋನ್ಯವಾಗಿಟ್ಟುಕೊಳ್ಳಲು ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚಾಣಕ್ಯ ಅವರು ಏನು ಹೇಳಿದ್ದಾರೆ ಎಂಬುದನ್ನು ಈ ಲೇಖನದ ಮೂಲಕ ತಿಳಿಯೋಣ.

ಇಬ್ಬರು ಸೇರಿ ಸಮಸ್ಯೆಯನ್ನು ನಿರ್ವಹಿಸಿದರೆ ಅವರು ಖಂಡಿತವಾಗಿಯೂ ಜೀವನದಲ್ಲಿ ಯಶಸ್ಸು ಗಳಿಸುತ್ತಾರೆ ಎಂದು ಚಾಣಕ್ಯರು ಹೇಳಿದ್ದಾರೆ ಅಲ್ಲದೇ ಅವರ ಮನೆಯಲ್ಲಿ ಸಂತೋಷ, ಶಾಂತಿ ವೃದ್ಧಿಸುತ್ತದೆ ಅದಕ್ಕಾಗಿಯೇ ಈ ಸಂಬಂಧದ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕು. ಜೊತೆಗೆ ಈ ಸಂಬಂಧವನ್ನು ಹೆಚ್ಚು ಗಟ್ಟಿಯಾಗಿರಿಸಿಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಕೆಲವು ವಿಷಯಗಳಲ್ಲಿ ಗಂಡ ಹೆಂಡತಿ ನಡುವೆ ಬಿರುಕು ಮೂಡುತ್ತದೆ ಅದನ್ನು ಹೇಗೆ ನಿಭಾಯಿಸಬೇಕು ಮತ್ತು ಯಾವ ಯಾವ ಕಾರಣದಿಂದಾಗಿ ಗಂಡ-ಹೆಂಡತಿ ನಡುವೆ ಬಿರುಕು ಬಿಡುತ್ತದೆ ಎಂಬುದರ ಕುರಿತಾಗಿ ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಲಾಗಿದೆ.

ಗಂಡ ಹೆಂಡತಿ ಸಂಬಂಧ ಅತ್ಯಂತ ಪವಿತ್ರವಾದದ್ದು. ಇಬ್ಬರೂ ಒಬ್ಬರಿಗೊಬ್ಬರು ಗೌರವವನ್ನು ಕೊಡಬೇಕು ಜೊತೆಗೆ ಗೌರವವನ್ನು ಸಂಪಾದಿಸಬೇಕು ಎಂದು ಚಾಣಕ್ಯರು ಹೇಳುತ್ತಾರೆ. ಗೌರವದ ಕೊರತೆಯು ಇಬ್ಬರ ನಡುವೆ ಜಗಳ, ಉದ್ವಿಗ್ನತೆ ಮತ್ತು ಸಂಬಂಧವನ್ನು ಕೆಡಿಸುತ್ತದೆ. ಹಾಗಾಗಿ ಈ ಸಂಬಂಧವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಒಬ್ಬರಿಗೊಬ್ಬರು ಗೌರವವನ್ನು ನೀಡಬೇಕು ಎಂದು ಚಾಣಕ್ಯ ನೀತಿ ಹೇಳುತ್ತದೆ. ಪರಸ್ಪರ ಇಬ್ಬರೂ ಸಮಾಧಾನದಿಂದ ಮಾತನಾಡುವ ಮೂಲಕ ಯಾವುದೇ ಒಂದು ಸಮಸ್ಯೆಯನ್ನು ಸುಲಭವಾಗಿ ನಿಭಾಯಿಸಬಹುದು. ಪರಿಸ್ಥಿತಿ ಏನೇ ಇದ್ದರೂ ಮಾತನಾಡಿ ಪರಿಹರಿಸಿಕೊಳ್ಳಬೇಕು. ಮಾತು ಬಿಡುವ ಒಂದು ತಪ್ಪು ಸಂಬಂಧವನ್ನು ಹದಗೆಡಿಸುತ್ತದೆ ಎಂದು ಚಾಣಕ್ಯ ನೀತಿ ಹೇಳುತ್ತದೆ.

ಗಂಡ ಹೆಂಡತಿ ಸಂಬಂಧದಲ್ಲಿ ಪ್ರೀತಿಗೆ ವಿಶೇಷ ಸ್ಥಾನವಿದೆ. ಪರಸ್ಪರ ಇಬ್ಬರಲ್ಲಿ ಪ್ರೀತಿಯ ಕೊರತೆ ಇದ್ದಾಗ ಅಶಾಂತಿ ಉಂಟಾಗುತ್ತದೆ. ಇದು ಸಂಬಂಧವನ್ನು ದುರ್ಬಲಗೊಳಿಸುತ್ತದೆ ಹಾಗಾಗಿ ಒಬ್ಬರಿಗೊಬ್ಬರು ಗೌರವ, ವಿಶ್ವಾಸದ ಜೊತೆಗೆ ಪ್ರೀತಿಯನ್ನು ಹಂಚುವುದು ಉತ್ತಮ ಎಂಬುದು ಚಾಣಕ್ಯರ ನೀತಿ ಹೇಳುತ್ತದೆ. ಗಂಡ ಹೆಂಡತಿ ಇಬ್ಬರೂ ಸುಖದಲ್ಲಿ ಜೊತೆ ಇದ್ದಂತೆ ದುಃಖದಲ್ಲಿಯೂ ಜೊತೆ ಇರಬೇಕು ಆಗಲೇ ಸಂಸಾರ ನೌಕೆ ಸರಿಯಾಗಿ ಹೋಗುತ್ತದೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.