ನಗುಮೊಗದಿಂದಲೆ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಕನ್ನಡ ಚಿತ್ರರಂಗದ ಅದ್ಭುತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಯಾರೂ ಕಲ್ಪನೆ ಮಾಡಲು ಸಾಧ್ಯವಾಗದಂತ ರೀತಿಯಲ್ಲಿ ಅಕ್ಟೋಬರ್ 29 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾದರು. ಪುನೀತ್ ಅವರ ಮಕ್ಕಳು ಅವರಂತೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದಾರೆ. ಪುನೀತ್ ಅವರ ಮೊದಲ ಮಗಳು ಧೃತಿ ಅವರಿಗೆ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರೆ ಮೂಲಕ ಸಮಾಧಾನದ ಮಾತುಗಳನ್ನು ಆಡಿದ್ದಾರೆ ಅವರ ಮಾತುಗಳನ್ನು ಈ ಲೇಖನದ ಮೂಲಕ ತಿಳಿಯೋಣ.

ಪುನೀತ್ ರಾಜಕುಮಾರ್ ಅವರು ನಮ್ಮನ್ನು ಬಿಟ್ಟು ಈಗಾಗಲೆ 11 ದಿನಗಳು ಕಳೆದುಹೋಗಿವೆ. ಪುನೀತ್ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಅವರು ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು ಮರಣಹೊಂದಿದ 11ನೆ ದಿನ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಇಡಿ ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡಿ ದೇಶದಲ್ಲಿ ಇದುವರೆಗೂ ಯಾರ ಪುಣ್ಯಸ್ಮರಣೆದಿನವು ಸೇರದಷ್ಟು ಜನ ಪುನೀತ್ ಅವರ ಪುಣ್ಯಸ್ಮರಣೆ ದಿನ ಸೇರಿದ್ದರು.

ಪುನೀತ್ ಅವರ ಮೊದಲ ಮಗಳು ಧೃತಿ ಅವರು ತಮ್ಮ ಪ್ರತಿಭೆಯಿಂದ ಸ್ಕಾಲರ್ ಶಿಪ್ ಪಡೆದು ವಿದೇಶದಲ್ಲಿ ಓದುತ್ತಿದ್ದಾರೆ. ಅವರಿಗೆ ವಿದ್ಯಾಭ್ಯಾಸದ ಮೇಲೆ ಹೆಚ್ಚು ಆಸಕ್ತಿ ಇದೆ. ಪುನೀತ್ ಅವರ ಸಾವಿನ ಸುದ್ದಿ ಕೇಳಿ ಹಠಾತ್ತನೆ ವಿದೇಶದಿಂದ ಧೃತಿ ಅವರು ಬಂದು ಅಪ್ಪನ ಅಂತಿಮ ದರ್ಶನ ಪಡೆದು ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಮುಗಿಸಿ ಪುನಃ ವಿದೇಶಕ್ಕೆ ಹಿಂದಿರುಗಿದ್ದಾರೆ.

ಧೃತಿ ಅವರು ವಿದೇಶಕ್ಕೆ ಹೋಗುವ ಮುನ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಧೃತಿ ಅವರಿಗೆ ಕರೆ ಮಾಡಿ ಪುಟ್ಟಿ ನೀನು ತಲೆ ಕೆಡಿಸಿಕೊಳ್ಳಬೇಡ, ನಿನ್ನ ಜೊತೆ ರಾಜ್ ಕುಟುಂಬ ಮಾತ್ರವಲ್ಲದೆ ಇಡಿ ಕನ್ನಡ ಚಿತ್ರರಂಗವಿದೆ. ನಾವು ಕೂಡ ದೊಡ್ಮನೆಯಿಂದಲೆ ಬೆಳೆದು ಬಂದಿದ್ದೇವೆ. ದೊಡ್ಮನೆ ಹೆಸರನ್ನು ನೀನು ಕೂಡ ನಿನ್ನ ತಂದೆಯಂತೆಯೆ ವಿಶ್ವಮಟ್ಟಕ್ಕೆ ಕೊಂಡೊಯ್ಯಬೇಕು.

ನಿನಗೆ ಸಿನಿಮಾ ರಂಗಕ್ಕೆ ಬರಲು ಆಸಕ್ತಿ ಇಲ್ಲದಿದ್ದರೆ ವಿದ್ಯಾಭ್ಯಾಸವನ್ನು ಮುಗಿಸಿ ಬೇರೆ ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿನ್ನ ತಂದೆಯ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯಬೇಕು. ಆ ದೇವರು ನಿನಗೆ ಶಕ್ತಿ ಕೊಡಲಿ ನಿನ್ನ ಮುಂದಿನ ಭವಿಷ್ಯಕ್ಕೆ ಯಾವುದೆ ರೀತಿಯಲ್ಲಿ ಸಹಾಯ ಬೇಕಾದರೂ ಇಡಿ ಕನ್ನಡ ಚಿತ್ರರಂಗ ನಿನಗೆ ಬೆಂಬಲ ನೀಡುತ್ತದೆ ಎಂದು ತಮ್ಮ ಮನದಾಳದ ಮಾತುಗಳನ್ನು ಹೇಳಿದ್ದಾರೆ. ಧೃತಿ ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸೋಣ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *