ಡ್ರ್ಯಾಗನ್ ಫ್ರೂಟ್ ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ.  ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ. ನೋಡಲು ಮುಳ್ಳಾಗಿರುತ್ತದೆ. ಹೊರ ಭಾಗ ಗುಲಾಬಿ ಬಣ್ಣ ಹಾಗೂ ಒಳಗಡೆ ಬಿಳಿ ಜೊತೆ ಕಪ್ಪು ಚುಕ್ಕಿಯ ಬೀಜಗಳಿರುತ್ತವೆ. ಪ್ರತಿಯೊಂದು ಹಣ್ಣುಗಳು ಅದರದೇ ಆದ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಹೊಂದಿವೆ. ಹಾಗೆಯೇ ಈ ಡ್ರಾಗನ್ ಫ್ರೂಟ್ ತಿಂದರೆ ಕೂಡ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಆದ್ದರಿಂದ ನಾವು ಇಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಡ್ರ್ಯಾಗನ್ ಫ್ರೂಟ್ ಇದು ಭಾರತೀಯ ಹಣ್ಣು ಅಲ್ಲ. ಆದರೆ ಈ ಹಣ್ಣು ಡಯಟ್  ಮಾಡುವವರಿಗೆ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಮಾಡುವವರಿಗೆ ಸಿಕ್ಕಾಪಟ್ಟೆ ಫೆವರೇಟ್ ಎಂದು ಹೇಳಬಹುದು. ದೇಹದಲ್ಲಿರುವ ಅನಗತ್ಯ ಕೊಬ್ಬುಗಳನ್ನು ಇದು ಕರಗಿಸುತ್ತದೆ. ಹೃದಯಕ್ಕೆ ಹರಿಯುವ ರಕ್ತವನ್ನು ಈ ಹಣ್ಣು ಶುದ್ಧೀಕರಿಸುತ್ತದೆ. ಡ್ರ್ಯಾಗನ್ ಫ್ರೂಟ್ ನಲ್ಲಿ ಫೈಬರ್ ಅಂಶ ಹೆಚ್ಚಿದ್ದು ಮಲಬದ್ಧತೆ ಅಥವಾ ಅಜೀರ್ಣ ಸಮಸ್ಯೆಯನ್ನು ನಿವಾರಿಸಬಲ್ಲದು. ವಯಸ್ಸಾಗುತ್ತಿದ್ದಂತೆ ಮುಖದ ಚರ್ಮ ಸುಕ್ಕು ಸಾಮಾನ್ಯವಾಗಿರುತ್ತದೆ. ಆದರೆ ಅದನ್ನು ತಪ್ಪಿಸುವ ಶಕ್ತಿ ಡ್ರ್ಯಾಗನ್ ಫ್ರೂಟ್ ಗೆ ಇದೆ. ತ್ವಚೆಯ ಸೌಂದರ್ಯ ಹೆಚ್ಚಿಸುವಲ್ಲಿಯೂ ಈ ಫ್ರೂಟ್ ಮುಖ್ಯ ಪಾತ್ರವಹಿಸುತ್ತದೆ.

ಈ ಹಣ್ಣನ್ನು ಬೆರಕಣಿಕೆಯಷ್ಟು ಜಾಗದಲ್ಲಿ ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. ಇದನ್ನು ರಷ್ಯಾ ಮತ್ತು ಜಪಾನ್ ಗಳಲ್ಲಿ ಬೆಳೆಯಲಾಗುತ್ತದೆ. ಇದು ಮೂಲತಃ ಅಮೆರಿಕಕ್ಕೆ ಸೇರಿದೆ. ಇದಕ್ಕೆ ಮಾರುಕಟ್ಟೆಯಲ್ಲಿ ಒಂದು ಹಣ್ಣಿಗೆ 100 ರಿಂದ 120 ರೂಪಾಯಿಗಳು ಇವೆ. ಬೆಂಗಳೂರಿನಲ್ಲಿ ವಿದೇಶದಿಂದ ಆಮದು ಮಾಡಿಕೊಂಡು ಮಾರಾಟ ಮಾಡಲಾಗುತ್ತದೆ. ಹಾಗೆಯೇ ನಮ್ಮ ದೇಶದಲ್ಲಿ ಪಂಜಾಬ್ ಮತ್ತು ಮಹಾರಾಷ್ಟ್ರಗಳಲ್ಲಿ ಈ ಬೆಳೆಯನ್ನು ಬೆಳೆಯುತ್ತಾರೆ. ಆದರೆ ಬೇಡಿಕೆಗೆ ಅನುಗುಣವಾಗಿ ಇದನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗೆಯೇ ಇದನ್ನು ಬೆಳೆಯುವ ಆಸಕ್ತಿ ಇರುವವರು ಹತ್ತಿರದಲ್ಲಿ ಇರುವ ಕೃಷಿ ಇಲಾಖೆಯನ್ನು ಸಂಪರ್ಕ ಮಾಡಿ ಮಾಹಿತಿಯನ್ನು ಪಡೆಯಬಹುದು.

ಅಲ್ಲಿಂದ ಗಿಡಗಳನ್ನು ತಂದು ಹತ್ತು ಅಡಿ ಉದ್ದ ಮತ್ತು ಹತ್ತು ಅಡಿ ಅಗಲ ಅಂತರದಲ್ಲಿ ನೆಡಲಾಗುತ್ತದೆ. ಹತ್ತು ಅಡಿಗಳಿಗೆ ಒಂದು ಕಂಬವನ್ನು ಇಟ್ಟು ಅದರ ನಾಲ್ಕು ದಿಕ್ಕಿಗೆ ಬುಡದಲ್ಲಿ ಗಿಡಗಳನ್ನು ನೆಡಲಾಗುತ್ತದೆ. ನೆಟ್ಟ 15ತಿಂಗಳಿಗೆ ಇದು ಹಣ್ಣು ಬಿಡಲು ಶುರುವಾಗುತ್ತದೆ. ನಂತರದಲ್ಲಿ ಸುಮಾರು 25ವರ್ಷಗಳತನಕ ಆದಾಯವನ್ನು ಪಡೆಯಬಹುದು. ಮೊದಲ ವರ್ಷ ಸ್ವಲ್ಪ ನಷ್ಟವಾದರೂ ನಂತರದಲ್ಲಿ ಲಾಭದಾಯಕ ಎಂದು ಹೇಳಬಹುದು. ಒಂದು ಎಕರೆಗೆ 8 ರಿಂದ 10ಲಕ್ಷ ಆದಾಯವನ್ನು ಪಡೆಯಬಹುದು. ಆದರೆ ನಿಮ್ಮ ವಾತಾವರಣಕ್ಕೆ ಈ ಬೆಳೆ ಸೂಕ್ತವಿದೆಯೋ ಇಲ್ಲವೋ ಎಂದು ತಿಳಿದುಕೊಂಡು ಬೆಳೆಯನ್ನು ಬೆಳೆಯಬೇಕು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave a Reply

Your email address will not be published. Required fields are marked *