ಭೂಪಾಲ್ ರಾಜ್ಯದ ನಾಯಗಾಂವ್ ಎಂಬ ಹಳ್ಳಿಯಲ್ಲಿ ಒಬ್ಬ ರೈತ ತಾನು ಸಾಕಿದ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ದೂರು ನೀಡಿದ್ದಾನೆ. ಎಮ್ಮೆಯ ವಿರುದ್ಧ ನೀಡಿದ ದೂರಿನ ಬಗ್ಗೆ ಈ ಲೇಖನದಲ್ಲಿ ನೋಡೋಣ.

ಪೊಲೀಸರ ಬಳಿ ರೈತರೊಬ್ಬರು ಎಮ್ಮೆಯ ಜೊತೆಗೆ ದೂರು ನೀಡುತ್ತಿರುವುದು ಹಾಗೂ ಪೊಲೀಸರ ಸಹಾಯ ಕೇಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಬುಲಾಲ್ ಜಾತವ್ ರೈತ ಅವರು ನಾಯಗಾಂವ್ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಎಮ್ಮೆ ಹಾಲು ಕರೆಯಲು ಅನುವು ಮಾಡಿಕೊಡುತ್ತಿಲ್ಲ ಎಂದು ಅವರು ದೂರು ನೀಡಿರುವ ಬಗ್ಗೆ ಪೊಲೀಸ್ ಅಧಿಕಾರಿ ಅರವಿಂದ್ ಶಾ ಪಿಟಿಐಗೆ ಹೇಳಿಕೆ ನೀಡಿದ್ದಾರೆ.

ರೈತ ಕೊಟ್ಟ ದೂರಿನಲ್ಲಿ ಆ ಎಮ್ಮೆಯ ಮೇಲೆ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂದು ಹೇಳಿರುವ ಬಗ್ಗೆ ಕೂಡ ಉಲ್ಲೇಖಿಸಲಾಗಿದೆ. ಕೆಲವು ಗ್ರಾಮಸ್ಥರ ಪ್ರಕಾರ ಎಮ್ಮೆಯ ಮೇಲೆ ವಶೀಕರಣ ಮಂತ್ರ ಪ್ರಯೋಗ ಮಾಡಲಾಗಿದೆ. ರೈತ ದೂರು ನೀಡಿ ನಾಲ್ಕು ಗಂಟೆಯ ನಂತರ ಮತ್ತೆ ಪೊಲೀಸ್ ಠಾಣೆಯ ಮುಂದೆ ಹಾಜರಾಗಿದ್ದಾರೆ ಆಗ ಅವರು ಎಮ್ಮೆಯನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ಬಗ್ಗೆಯೂ ಪೊಲೀಸರು ಹೇಳಿಕೆ ಕೊಟ್ಟಿದ್ದಾರೆ.

ಸಹಾಯ ಕೇಳಿ ದೂರು ನೀಡಲು ಬಂದಿದ್ದ ರೈತನಿಗೆ ಹಳ್ಳಿಯ ಪಶು ವೈದ್ಯರ ಬಳಿ ತೆರಳಲು ಹೇಳಿದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಳಿಕ ರೈತ ತನ್ನ ಎಮ್ಮೆಯ ಜೊತೆಗೆ ಮತ್ತೆ ಠಾಣೆಗೆ ಬಂದಿದ್ದಾರೆ. ಎಮ್ಮೆಯು ಹಾಲು ಕೊಡಲು ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿ ಅವರು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಎಮ್ಮೆಯ ಕಾರಣಕ್ಕೆ ಪೊಲೀಸರ ಬಳಿ ದೂರು ಕೊಟ್ಟಿರುವುದು ಇದೆ ಮೊದಲಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *