ಕೃಷಿ ಮಾಡುವ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಸಾಲ ಪಡೆಯಬೇಕು ಆದರೆ ಸಾಲ ಪಡೆಯುವುದು ಸುಲಭವಲ್ಲ ಅಲ್ಲದೆ ಸಾಲಕ್ಕೆ ಅಧಿಕ ಬಡ್ಡಿದರ ಕೊಡಬೇಕಾಗುತ್ತದೆ. ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯುವ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.

ರೈತರ  ಕೃಷಿ ಚಟುವಟಿಕೆ ಮಾಡಲು 3 ಲಕ್ಷ ರೂಪಾಯಿಯವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ಸಿಗುತ್ತದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳ ಮೂಲಕ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರ ಹಾಗೂ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಸಾಲಕ್ಕೆ ಇರುವ ಕೆಲವು ಷರತ್ತುಗಳನ್ನು ಸರ್ಕಾರ ಸಡಿಲಗೊಳಿಸಿದೆ. ಇದಕ್ಕಿಂತ ಮುಂಚಿತವಾಗಿ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬೇಕಾದರೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕೆಲವು ಷರತ್ತುಗಳನ್ನು ಸಡಿಲಗೊಳಿಸಿದೆ.

ಶೂನ್ಯ ಬಡ್ಡಿದರದಲ್ಲಿ ರೈತರಿಗೆ ನೀಡಲಾಗುವ ಸಾಲಕ್ಕೆ ಇದಕ್ಕಿಂತ ಮುಂಚಿತವಾಗಿ ಒಂದು ಕುಟುಂಬಕ್ಕೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುತ್ತಿತ್ತು. ಈಗ ಈ ಷರತ್ತನ್ನು ಸಡಿಲಗೊಳಿಸಲಾಗಿದೆ. ಒಂದು ಕುಟುಂಬಕ್ಕೆ ಬದಲಾಗಿ ಈಗ ಕುಟುಂಬದ ಒಬ್ಬ ವ್ಯಕ್ತಿಗೆ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುವುದು. ರೈತರು ಎರಡು ಸಂಘಗಳ ಕಾರ್ಯವ್ಯಾಪ್ತಿಯಲ್ಲಿ ಬೇರೆ ಬೇರೆ ಭೂಮಿ ಹೊಂದಿದ್ದರೆ ಅಥವಾ ಭೂಮಿ ಮತ್ತು ವಾಸಸ್ಥಳ ವಿವಿಧ ಸಂಘಗಳ ವ್ಯಾಪ್ತಿಯಲ್ಲಿದ್ದರೆ ಯಾವ ಸಂಘದ ವ್ಯಾಪ್ತಿಯಲ್ಲಿ ವಾಸವಿರುತ್ತಾನೆಯೊ ಆ ಸಂಘದಲ್ಲಿ ಪಡೆದ ಸಾಲಗಳಿಗೆ ಮಾತ್ರ ಬಡ್ಡಿ ಸಹಾಯಧನ ಅನ್ವಯವಾಗುತ್ತಿತ್ತು. ಇದೀಗ ಈ ಷರತ್ತನ್ನು ಸಡಿಲಗೊಳಿಸಿ ಎರಡು ಸಹಕಾರ ಸಂಘಗಳಲ್ಲಿ ಸಾಲ ಪಡೆದಿದ್ದಲ್ಲಿ ಒಂದು ಸಂಘದಲ್ಲಿ ಮಾತ್ರ ರಿಯಾಯಿತಿ ಬಡ್ಡಿದರವನ್ನು  ಪಡೆಯಬಹುದು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ರೈತರು ಸಾಲ ಪಡೆಯಬಹುದು. ಈ ಬ್ಯಾಂಕಿನಲ್ಲಿ ರೈತರಿಗೆ 3 ಲಕ್ಷರೂಪಾಯಿವರೆಗೆ ಸಾಲ ನೀಡಲಾಗುವುದು. ಕೃಷಿ ಚಟುವಟಿಕೆಗಾಗಿ ಅಲ್ಪಾವಧಿ ಬೆಳೆ ಸಾಲವನ್ನು 3 ಲಕ್ಷ ರೂಪಾಯಿವರೆಗೆ ನೀಡಲಾಗುವುದು. ಅದೆ ರೀತಿ ಇತರೆ ಪಶುಸಂಗೋಪನೆ ಹಾಗೂ ಮೀನುಗಾರಿಕೆಗಾಗಿ 2 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.

ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬೇಕಾದರೆ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗಳಲ್ಲಿ ಸದಸ್ಯತ್ವ ಹೊಂದಿರಬೇಕು. ರೈತರು ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ನಿಗದಿತ ನಮೂನೆಗಳಲ್ಲಿ ಸಂಘಗಳಿಗೆ ಅರ್ಜಿ ಸಲ್ಲಿಸಬೇಕು. ಕೆಲವು ಷರತ್ತುಗಳನ್ನು ರೈತರು ಪಾಲಿಸಬೇಕು ರೈತರು ಪಹಣಿ ಮೇಲೆ ಬೇರೆ ಬ್ಯಾಂಕುಗಳಲ್ಲಿ ಸಾಲ ಪಡೆದಿರಬಾರದು.

ರೈತ ವಾಸವಿರುವ ಸ್ಥಳದ ಸಂಘ ಅಥವಾ ಭೂಮಿ ಹೊಂದಿರುವ ಸ್ಥಳದ ಸಂಘ ಈ ಮೂರರಲ್ಲಿ ಯಾವುದಾದರೊಂದು ಸಂಘದ ವ್ಯಾಪ್ತಿಯಲ್ಲಿ  ಮಾತ್ರ ಸಾಲ ಪಡೆಯಬೇಕು. ಒಂದು ಜಿಲ್ಲೆ ಅಥವಾ ತಾಲೂಕಿನ ಹೋಬಳಿಯಲ್ಲಿರುವ ರೈತರು ಇನ್ನೊಂದು ಜಿಲ್ಲೆಯ ಹೋಬಳಿಯಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯುವಂತಿಲ್ಲ. ಪಹಣಿಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಇತ್ತೀಚಿನ ಫೋಟೊ  ಹೊಂದಿರಬೇಕು. ವಿಶೇಷವಾಗಿ ರೈತರು ಸಂಘದ ಸದಸ್ಯರಾಗಿರಬೇಕು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಸಹಕಾರ ಕೇಂದ್ರಬ್ಯಾಂಕುಗಳ ಮೂಲಕ ಸಾಲವನ್ನು ರೈತರಿಗೆ ಕೃಷಿ ಚಟುವಟಿಕೆಗೆ ಮಾತ್ರ ನೀಡಲಾಗುವುದು ಇತರೆ ಉದ್ದೇಶಗಳಿಗೆ ನೀಡಲಾಗುವುದಿಲ್ಲ. ಕೃಷಿಗೆ ಸಂಬಂಧಿಸಿದ ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ, ಜೇನುಸಾಕಾಣಿಕೆ, ಕೋಳಿಸಾಕಾಣಿಕೆ ಸೇರಿದಂತೆ ಇನ್ನಿತರ ಕೃಷಿ ಚಟುವಟಿಕೆಗೆ ಸಾಲ ನೀಡಲಾಗುವುದು. ಕೃಷಿ ಚಟುವಟಿಕೆಯೊಂದಿಗೆ ಟ್ರ್ಯಾಕ್ಟರ್, ಟಿಲ್ಲರ್, ಸ್ಪಿಂಕ್ಲರ್, ಹೈನುಗಾರಿಕೆ ಘಟಕಗಳಿಗೆ 10 ಲಕ್ಷ ರೂಪಾಯಿವರೆಗೆ ಶೇಕಡಾ 3% ಬಡ್ಡಿ ದರದಲ್ಲಿ ಮಧ್ಯಮಾವಧಿಸಾಲ ನೀಡಲಾಗುವುದು. 

ಸಾಲ ಪಡೆದವರಿಗೆ ನೇರವಾಗಿ ಅವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು. ವಾಹನ ಖರೀದಿ, ಮನೆ ಖರೀದಿ, ಪ್ಲಾಟ್ ಖರೀದಿ ಸೇರಿದಂತೆ ಕೃಷಿ ಹೊರತುಪಡಿಸಿ ಇನ್ನಿತರ ಚಟುವಟಿಕೆಗಳಿಗೆ ಈ ಸಾಲ ಅನ್ವಯವಾಗುವುದಿಲ್ಲ. ಬ್ಯಾಂಕಿನಿಂದ ಪಡೆದುಕೊಂಡ ಸಾಲವನ್ನು ಅವಧಿಯೊಳಗೆ ಮರುಪಾವತಿ ಮಾಡಿದಲ್ಲಿ ಪಡೆದುಕೊಂಡ ಸಾಲಕ್ಕೆ ಬಡ್ಡಿ ಇರುವುದಿಲ್ಲ. ಅವಧಿ ಮೀರಿದ ನಂತರ ಸಾಲಕ್ಕೆ ಬಡ್ಡಿ ವಿಧಿಸಲಾಗುವುದು. ರೈತರು ಸಾಲ ಪಡೆಯಲು ಈ ಎಲ್ಲಾ ಅಂಶಗಳನ್ನು ಪಾಲಿಸಬೇಕಾಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

Leave a Reply

Your email address will not be published. Required fields are marked *