ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ. ಆದ್ದರಿಂದ ನಾವು ಇಲ್ಲಿ ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರತಿನಿಧಿತ್ವ ಹೊಂದಿರುವುದಿಲ್ಲ. ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ. ಈ ಮೀಸಲಾತಿ ಸೂತ್ರವನ್ನು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ವರ್ಗಗಳಿಗೆ ಭಾರತದ ಸಂಸತ್ತಿನಲ್ಲೂ ಪಾರ್ಲಿಮೆಂಟ್ ಆಫ್ ಇಂಡಿಯಾದಲ್ಲಿಯೂ ಪ್ರತಿನಿಧಿತ್ವ ವಹಿಸಲು ನೀಡಿದೆ. ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಮತ್ತು ಇನ್ನಿತರ ಸೌಲಭ್ಯಕ್ಕಾಗಿ 27% ಮೀಸಲಾತಿ ನೀಡಿದೆ. ಆಯಾ ರಾಜ್ಯಗಳು ತಮಗೆ ಅನುಕೂಲಕರ ಪ್ರಮಾಣದಲ್ಲಿ ಕೋಟಾವನ್ನು ನಿಗದಿ ಮಾಡಿಕೊಳ್ಳಬಹುದು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನೇಕ ಯೋಜನೆಗಳನ್ನು ಸರ್ಕಾರವು ಜಾರಿಗೆ ತಂದಿದೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮ ಯೋಜನೆಗಳಡಿ ಶಿಕ್ಷಣಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.ಅವಳಿ ನಗರದಲ್ಲಿ ವಾಸಿಸುತ್ತಿರುವ ಐಐಟಿ, ಡಿಪ್ಲೊಮಾ ಅಥವಾ ವೃತ್ತಿಪರ ಕೋರ್ಸ್‌ ಅನ್ನು ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿರುವ ವಿದ್ಯಾರ್ಥಿಗಳಿಗೆ 20 ಸಾವಿರ, ಟೂಲ್ ಕಿಟ್ ಖರೀದಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನಕ್ಕೆ ತರಬೇತಿ ಪಡೆಯವ ವಿದ್ಯಾರ್ಥಿಗಳಿಗೆ 30 ಸಾವಿರ ನೀಡುತ್ತಿದೆ. ಶೌಚಾಲಯ ನಿರ್ಮಾಣಕ್ಕೆ 20 ಸಾವಿರ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಎಸ್ ಟಿ ಮತ್ತು ಎಸ್‌ಸಿ ಹೆಣ್ಣು ಮಕ್ಕಳಿಗೆ ಬ್ಯೂಟಿಷನ್‌ ಕಿಟ್ ಖರೀದಿಗೆ 25 ಸಾವಿರ ನೀಡುತ್ತಿದೆ.

ವಾಹನ ತರಬೇತಿ ಹಾಗೂ ಚಾಲನಾ ಪರವಾನಗಿ ಹೊಂದಿದ ನಿರುದ್ಯೋಗಿ ಯುವಕರಿಗೆ ರಿಕ್ಷಾ ಖರೀದಿಗೆ 50 ಸಾವಿರ ಒದಗಿಸುತ್ತದೆ. ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ ಫಲಾನುಭವಿಗಳಿಗೆ ಮನೆ ದುರಸ್ತಿಗೆ 50 ಸಾವಿರ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗೆ 50 ಸಾವಿರ ಸಹಾಯಧನ ನೀಡಲಾಗುವುದು. ಪಾಲಿಕೆ ವಲಯ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಮೇ 3ರ ಸಂಜೆ 5ರೊಳಗೆ ವಲಯ ಕಚೇರಿಗಳಿಗೆ ಸಲ್ಲಿಸಬೇಕು. ಹೀಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶಿಕ್ಷಣಕ್ಕಾಗಿ ಮತ್ತು ಜೀವನಕ್ಕಾಗಿ ಉತ್ತಮ ಯೋಜನೆಗಳನ್ನು ಸರ್ಕಾರವು ನೀಡಿದೆ.

Leave a Reply

Your email address will not be published. Required fields are marked *