ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲ್ಲಖೆಯಲ್ಲಿನ 6406 ಹುದ್ದೆಗಳ ಮಾಹಿತಿ ಇಲ್ಲಿದೆ

0 5

ಕರ್ನಾಟಕ ಗ್ರಾಮೀಣಾ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲ್ಲಿ ಖಾಲಿ ಇರುವಂತಹ ಒಟ್ಟೂ 6406 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಗ್ರಾಮ ಪಂಚಾಯತಿ ಸೆಕ್ರೆಟರಿ ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸಂಬಂಧಿಸಿ ಮಹತ್ವದ ಸೂಚನೆ ಬಂದಿದ್ದು ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಗ್ರಾಮ ಪಂಚಾಯತಿ ಸೆಕ್ರೆಟರಿ ಮತ್ತು ರೂರಲ್ ಡೆವಲಪ್ಮೆಂಟ್ ಅಸಿಸ್ಟೆಂಟ್ ಗ್ರೇಡ್ 2 ಈ ಹುದ್ದೆಗಳಲ್ಲಿ ಒಟ್ಟೂ 3827 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟೂ ಹುದ್ದೆಗಳಲ್ಲಿ ಶೇಕಡಾ 25 ರಷ್ಟು ಅಭ್ಯರ್ಥಿಗಳನ್ನು ಫ್ರೇಶರ್ಸ್ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು ಹಾಗೂ ಉಳಿದ ಶೇಕಡಾ 75 ರಷ್ಟು ಅಭ್ಯರ್ಥಿಗಳನ್ನು ಈಗಾಗಲೇ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಅಕೌಂಟೆಂಟ್, ಕ್ಲರ್ಕ್ ಟೈಪಿಸ್ಟ್ ಈ ಹುದ್ದೆಗಳಲ್ಲಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಮತ್ತು ಇವರಿಗೆ ನೀಡುವ ಮಾಸಿಕ ವೇತನ 21,400 ರಿಂದ 42,000 ರುಪಾಯಿಯವರೆಗೇ ಮಾಸಿಕ ವೇತನ ನೀಡಲಾಗುವುದು.

ಅಭ್ಯರ್ಥಿಗಳ ವಿದ್ಯಾರ್ಹತೆ ನೋಡುವುದಾದರೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು PUC ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಹಾಗೂ ಬೇಸಿಕ್ ಕಂಪ್ಯೂಟರ್ ಸರ್ಟಿಫಿಕೇಟ್ ಕೂಡಾ ಹೊಂದಿರಬೇಕು. ಈಗಾಗಲೇ ಸೇವೆಯಲ್ಲಿದ್ದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರೆ ಅಂತಹ ಅಭ್ಯರ್ಥಿಗಳು PUC ಮುಗಿಸಿರಬೇಕು ಹಾಗೂ ಇಲಾಖೆಯಲ್ಲಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿರಬೇಕು.

ಇನ್ನೂ ಸೆಕೆಂಡ್ ಡಿವಿಷನ್ ಅಕೌಂಟ್ ಅಸಿಸ್ಟೆಂಟ್ [SDAA] . ಈ ಹುದ್ದೆಯಲ್ಲಿ ಒಟ್ಟೂ 2579 ಹುದ್ದೆಗಳು ಖಾಲಿ ಇವೆ. ಇವರಿಗೂ ಕೂಡಾ ನೀಡುವ ಮಾಸಿಕ ವೇತನ 21,400 ರಿಂದ 42,000 ರುಪಾಯಿಯವರೆಗೇ ಮಾಸಿಕ ವೇತನ ನೀಡಲಾಗುವುದು. ಈ ಹುದ್ದೆಗಳಿಗೆ ಶೇಕಡಾ ಐವತ್ತರಷ್ಟು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು. ಇನ್ನುಳಿದ ಶೇಕಡಾ ಐವತತರಷ್ಟು ಅಭ್ಯರ್ಥಿಗಳನ್ನು ಈಗಾಗಲೇ ಸೇವೆಯಲ್ಲಿ ಇರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.

ಅಭ್ಯರ್ಥಿಗಳ ವಿದ್ಯಾರ್ಹತೆ ನೋಡುವುದಾದರೆ, PUC ನಲ್ಲಿ ಕಾಮರ್ಸ್ ವಿಭಾಗದಲ್ಲಿ ಓದಿರಬೇಕು. ಹಾಗೇ ಅದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಹಾಗೂ ಬೇಸಿಕ್ ಕಂಪ್ಯೂಟರ್ ಸರ್ಟಿಫಿಕೇಟ್ ಕೂಡಾ ಹೊಂದಿರಬೇಕು. ಇವಿಷ್ಟು ತಿದ್ದುಪಡಿಯ ಆದೇಶ ಆಗಿದ್ದು, ಇದರ ನೇಮಕಾತಿ ಪ್ರಕ್ರಿಯೆಯು ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಆರಂಭ ಆಗಲಿದೆ. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ. video credit Spardha Deepa

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.