ಕಾಂಗ್ರೆಸ್ ಸರ್ಕಾರವು ರಾಜ್ಯದ ಮಹಿಳೆಯರಿಗೆ, ಮನೆ ನಡೆಸಿಕೊಂಡು ಹೋಗುತ್ತಿರುವ ಗೃಹಲಕ್ಷ್ಮಿಯರಿಗೆ ಸಹಾಯ ಆಗಲಿ ಎಂದು ಜಾರಿಗೆ ತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ ಆಗಿದೆ. ಈ ಯೋಜನೆಯ ಮೂಲಕ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ₹2000 ರೂಪಾಯಿ ಪರಿಹಾರ ಹಣವನ್ನು ನೀಡುವ ಪ್ಲಾನ್ ಹೊಂದಿದೆ ಸರ್ಕಾರ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ 1.17 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅವರ ಪೈಕಿ ಸುಮಾರು 80% ಮಹಿಳೆಯರಿಗೆ ಹಣ ಕೂಡ ತಲುಪುತ್ತಿದೆ.

ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಲ್ಲ, ಅವರ ಬ್ಯಾಂಕ್ ಅಕೌಂಟ್ ನಲ್ಲಿರುವ ಸಮಸ್ಯೆ, ಆಧಾರ್ ಕಾರ್ಡ್ ಸಮಸ್ಯೆ, ರೇಷನ್ ಕಾರ್ಡ್ ನಲ್ಲಿ ತಪ್ಪು ಮಾಹಿತಿ ಈ ಕಾರಣಗಳಿಗೆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇರಬಹುದು. ಈ ಸಮಸ್ಯೆಗಳನ್ನು ಸರಿಪಡಿಸಲು, ಸರ್ಕಾರವು ಗೃಹಲಕ್ಷ್ಮಿ ಅದಾಲತ್, ಗೃಹಲಕ್ಷ್ಮಿ ಕ್ಯಾಂಪೇನ್ ಅನ್ನು ಕೂಡ ನಡೆಸಿತು..

ಇದರಲ್ಲಿ ಲಕ್ಷಾಂತರ ಮಹಿಳೆಯರು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಂಡು, ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯುತ್ತಿದ್ದಾರೆ. ಈಗಾಗಲೇ 5 ಕಂತುಗಳ ಹಣ ಮಹಿಳೆಯರ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದ್ದು, 6ನೇ ಕಂತಿನ ಹಣ ಫೆಬ್ರವರಿ ಎರಡನೇ ವಾರದಲ್ಲಿ ಬಿಡುಗಡೆ ಆಗಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ವೇಳೆ 26,000 ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ತಲುಪುವುದಿಲ್ಲ ಎಂದು ಹೇಳಲಾಗುತ್ತಿದೆ..

ಅದಕ್ಕೆ ಮುಖ್ಯ ಕಾರಣವಿದ್ದು, ಯೋಜನೆಯ ಶುರುವಿನಲ್ಲೇ ಸರ್ಕಾರವು ಒಂದು ಪ್ರಮುಖ ಕಂಡೀಷನ್ ಹಾಕಿತ್ತು.. ಸರ್ಕಾರಿ ಕೆಲಸ ಮಾಡುತ್ತಿರುವವರು, ಟ್ಯಾಕ್ಸ್ ಕಟ್ಟುತ್ತಿರುವವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಹತೆ ಹೊಂದಿರುವುದಿಲ್ಲ ಎಂದು ತಿಳಿಸಿತ್ತು, ಹಾಗಿದ್ದರೂ ಸಹ 80,000 ಸರ್ಕಾರಿ ಕೆಲಸಕ್ಕೆ ಹೋಗುವ, ಟ್ಯಾಕ್ಸ್ ಪಾವತಿ ಮಾಡುವ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.

ಅವರ ಪೈಕಿ 26,000 ಮಹಿಳೆಯರಿಗೆ ತಾಂತ್ರಿಕ ದೋಷಗಳ ಕಾರಣ ಹಣ ಕೂಡ ವರ್ಗಾವಣೆ ಆಗಿದೆ. ಅಂಥ ಮಹಿಳೆಯರಿಗೆ 5 ಕಂತುಗಳ ಹಣ ಸಿಕ್ಕಿದ್ದರು ಸಹ, 6ನೇ ಕಂತಿನ ಹಣ ಸಿಗುವುದಿಲ್ಲ, ಇನ್ನುಮುಂದೆ ಈ ಥರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿ ಸಿಗುವುದಿಲ್ಲ ಎಂದು ಸರ್ಕಾರದಿಂದ ಮಾಹಿತಿ ಸಿಕ್ಕಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By

Leave a Reply

Your email address will not be published. Required fields are marked *