ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ 6 ತಿಂಗಳು ಕಳೆಯುತ್ತಿದೆ. ಸುಮಾರು ಮಹಿಳೆಯರಿಗೆ 5 ಕಂತಿನ ಹಣ ಕೂಡ ಬಂದಿದೆ. ಆದರೆ ಇನ್ನೂ ಸಾಕಷ್ಟು ಮಹಿಳೆಯರಿಗೆ ಮೊದಲ 2 ಕಂತುಗಳ ಹಣ ಬಿಟ್ಟು ಇನ್ನೇನು ಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಸರ್ಕಾರ ರೇಷನ್ ಕಾರ್ಡ್, ಬ್ಯಾಂಕ್ ಅಕೌಂಟ್ ಇವುಗಳ ಸಮಸ್ಯೆ ಇರೋದಕ್ಕೆ ಹಣ ಬಂದಿಲ್ಲ ಎಂದು ಹೇಳುತ್ತಿದೆ.

ವಿಚಾರಿಸಲು ಆಹಾರ ಇಲಾಖೆಗೆ ಹೋದರೆ ಅವರಲ್ಲಿ ಮಾಹಿತಿ ಇಲ್ಲ, ಬ್ಯಾಂಕ್ ನಲ್ಲಿ ವಿಚಾರಿಸಿ ಎನ್ನುತ್ತಾರೆ, ಬ್ಯಾಂಕ್ ಗೆ ಹೋದರೆ ನಮಗೆ ಗೊತ್ತಿಲ್ಲ ಆಹಾರ ಇಲಾಖೆಗೆ ಹೋಗಿ ಅಂತ ಹೇಳುತ್ತಾರೆ ಎಂದು ಮಹಿಳೆಯರು ತಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಾ ಇಲ್ವಾ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳೆಯರು ಹೇಳುವ ಪ್ರಕಾರ ಅವರ ಬ್ಯಾಂಕ್ ಅಕೌಂಟ್ ಸರಿಯಾಗಿಯೇ ಇದೆ, ಸರ್ಕಾರದ ಸಮಸ್ಯೆ ಇಂದಲೇ ಹಣ ಬಂದಿಲ್ಲ.

ಹೀಗಾಗಿ ಇದು ಸರ್ಕಾರದ ತೊಂದರೆಯೇ ಎಂದು ಗೊತ್ತಾಗುತ್ತಿದೆ. ಸರ್ಕಾರವು ಈ ಸಮಸ್ಯೆಗಳನ್ನು ಸರಿ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವು ಕೂಡ ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಆಗಿದೆ. ಹಾಗಿದ್ದರೂ ಇನ್ನು ಕೆಲವು ಮಹಿಳೆಯರಿಗೆ ಮೊದಲ ಕಂತಿನ ಹಣ ಕೂಡ ಇನ್ನು ಬಂದಿಲ್ಲ. ಒಂದು ವೇಳೆ ನಿಮಗೂ ಹಣ ಬರದೇ ಪೆಂಡಿಂಗ್ ಇದ್ದರೆ, ಮೊದಲಿಗೆ ನಿಮಗೆ ಹತ್ತಿರ ಇರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ.

ಕಚೇರಿಗೆ ಹೋಗುವಾಗ ನಿಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ, ಬ್ಯಾಂಕ್ ಡೀಟೇಲ್ಸ್, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಸ್ವೀಕೃತಿ ಪತ್ರ ಇದೆಲ್ಲವನ್ನು ತೆಗೆದುಕೊಂಡು ಹೋಗಿ. ನಿಮ್ಮ ಅಪ್ಲಿಕೇಶನ್ ನಲ್ಲಿ ಆಗಿರೋ ತಪ್ಪೇನು? ನಿಮಗೆ ಯಾಕೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎನ್ನುವುದನ್ನು ಇಲಾಖೆಯಲ್ಲೇ ಚೆಕ್ ಮಾಡಿಸಿ. ಸಂಬಂಧಪಟ್ಟ ಸಿಬ್ಬಂದಿಗಳು ನಿಮಗೆ ಸಹಾಯ ಮಾಡುತ್ತಾರೆ..

ಒಮ್ಮೆ ಬ್ಯಾಂಕ್ ಅಕೌಂಟ್ ಇಕೆವೈಸಿ ಆಗಿದ್ಯಾ ಎಂದು ಚೆಕ್ ಮಾಡಿ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ಈ ಮೂರರಲ್ಲಿ ಇರುವ ಮಾಹಿತಿ ಸರಿ ಇದೆಯಾ ಎನ್ನುವುದನ್ನು ಕೂಡ ಚೆಕ್ ಮಾಡಿಕೊಳ್ಳಿ. ಇದೆಲ್ಲವೂ ಸರಿ ಇದ್ದು ನಿಮಗೆ ಇನ್ನು ಬಂದಿಲ್ಲ ಅಂದ್ರೆ, ಸರ್ಕಾರ ಶೀಘ್ರದಲ್ಲೇ ನಿಮ್ಮ ಬ್ಯಾಂಕ್ ಅಕೌಂಟ್ ಗೆ ಬಂದೆ ಬರುತ್ತದೆ. ಈ ರೀತಿಯ ಸಮಸ್ಯೆಗಳಿಂದ ಪೆಂಡಿಂಗ್ ನಲ್ಲಿ ಇರುವ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಖಂಡಿತವಾಗಿ ತಲುಪಲಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Reply

Your email address will not be published. Required fields are marked *