Gruhalakshmi Schemes New Updates: ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಮದುವೆಯಾಗಿ ಮನೆ ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಗೃಹಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎನ್ನುವ ಉದ್ದೇಶ ಇದಾಗಿದ್ದು, ಈಗಾಗಲೇ ಸುಮಾರು 1.15ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ.

3ನೇ ಕಂತಿನ ಹಣ ಕೂಡ ಮಹಿಳೆಯರನ್ನು ತಲುಪಿದೆ, ಆದರೆ ಸುಮಾರು 5 ರಿಂದ 7 ಲಕ್ಷ ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಬಂದಿಲ್ಲ ಎಂದು ಚಿಂತೆಗೆ ಒಳಗಾಗಿದ್ದಾರೆ. ಅಂಥವರಿಗೆ ಸರ್ಕಾರವೇ ಭರವಸೆ ನೀಡಿದ್ದು, ಶೀಘ್ರದಲ್ಲೇ ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರನ್ನು ತಲುಪುತ್ತದೆ ಎಂದು ತಿಳಿಸಿದೆ. ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಜಮೆಯಾಗಿಲ್ಲ, ಅವರೆಲ್ಲರು ತಮಗೆ ಇನ್ನು ಹಣ ಬಂದಿಲ್ಲ ಎಂದು ಆತಂಕಕ್ಕೆ ಒಳಗಾಗಿದ್ದಾರೆ.

ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬರದೆ ಇರುವುದಕ್ಕೆ ತಾಂತ್ರಿಕ ದೋಷ ಕಾರಣ ಇರಬಹುದು. ಅಥವಾ ಬ್ಯಾಂಕ್ ಅಕೌಂಟ್ ಮಾಹಿತಿ ತಪ್ಪಾಗಿರುವುದು, ekyc ಮಾಡಿಸಿಲ್ಲದೆ ಇರುವುದು, ಆಧಾರ್ ಸೀಡಿಂಗ್ ಆಗಿಲ್ಲದೆ ಇರುವುದು ಹೀಗೆ ಹಲವು ಕಾರಣಗಳಿವೆ. ಆದರೆ ಇನ್ನುಮುಂದೆ ಆ ಸಮಸ್ಯೆಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದೇ ಇರುವ ಹಾಗೆ ಆಗುವುದು ಬೇಡ ಎಂದು ಸರ್ಕಾರ ತೀರ್ಮಾನ ಮಾಡಿದ್ದು, ಹೊಸದೊಂದು ಕ್ರಮವನ್ನು ಜಾರಿಗೆ ತಂದಿದೆ.

ಇದೀಗ ಗೃಹಲಕ್ಷ್ಮಿ ಅದಾಲತ್ ಶುರು ಮಾಡಲಾಗುತ್ತದೆ, ಒಂದು ವೇಳೆ ನಿಮಗೆ ಹಣ ಬರದೇ ಹೋದರೆ ಇಲ್ಲಿಗೆ ಹೋಗಿ ದೂರು ಕೊಡಬಹುದು. ದೂರಿನ ಅನುಸಾರ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ಒಂದು ವೇಳೆ ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿ ಸಮಸ್ಯೆ ಇದ್ದರೆ, ಮನೆಯಲ್ಲಿ ಇನ್ನೊಬ್ಬರು ಮಹಿಳೆ ಇದ್ದರೆ ಅವರ ಬ್ಯಾಂಕ್ ಖಾತೆಗೆ ಹಣ ಬರುತ್ತದೆ, ಅಥವಾ ಮನೆಯಲ್ಲಿ ಮಹಿಳೆಯ ಗಂಡನ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತದೆ.

ಆದರೆ ಮತ್ತೊಬ್ಬ ವ್ಯಕ್ತಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕು ಎಂದರೆ, ಅವರ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು, ಜೊತೆಗೆ ಕೆವೈಸಿ ಆಧಾರ್ ಸೀಡಿಂಗ್ ಆಗಿರಬೇಕು ಎಂದು ಕಡ್ಡಾಯಗೊಳಿಸಲಾಗಿದೆ. ಈ ರೀತಿ ಇದ್ದರೆ, ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿ ನಿಮ್ಮನ್ನು ತಲುಪುತ್ತದೆ.

By AS Naik

Leave a Reply

Your email address will not be published. Required fields are marked *