Gruhalakshmi Schemes New Updates: ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಮದುವೆಯಾಗಿ ಮನೆ ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಗೃಹಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎನ್ನುವ ಉದ್ದೇಶ ಇದಾಗಿದ್ದು, ಈಗಾಗಲೇ ಸುಮಾರು 1.15ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ.

3ನೇ ಕಂತಿನ ಹಣ ಕೂಡ ಮಹಿಳೆಯರನ್ನು ತಲುಪಿದೆ, ಆದರೆ ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಬಂದಿಲ್ಲ ಎಂದು ಚಿಂತೆಗೆ ಒಳಗಾಗಿದ್ದಾರೆ. ಅಂಥವರಿಗೆ ಸರ್ಕಾರವೇ ಭರವಸೆ ನೀಡಿದ್ದು, ಶೀಘ್ರದಲ್ಲೇ ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರನ್ನು ತಲುಪುತ್ತದೆ ಎಂದು ತಿಳಿಸಿದೆ. ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಜಮೆಯಾಗಿಲ್ಲ, ಅವರೆಲ್ಲರು ತಮಗೆ ಇನ್ನು ಹಣ ಬಂದಿಲ್ಲ ಎಂದು ಆತಂಕಕ್ಕೆ ಒಳಗಾಗಿದ್ದಾರೆ.

ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬರದೆ ಇರುವುದಕ್ಕೆ ತಾಂತ್ರಿಕ ದೋಷ ಕಾರಣ ಇರಬಹುದು. ಅಥವಾ ಬ್ಯಾಂಕ್ ಅಕೌಂಟ್ ಮಾಹಿತಿ ತಪ್ಪಾಗಿರುವುದು, ekyc ಮಾಡಿಸಿಲ್ಲದೆ ಇರುವುದು, ಆಧಾರ್ ಸೀಡಿಂಗ್ ಆಗಿಲ್ಲದೆ ಇರುವುದು ಹೀಗೆ ಹಲವು ಕಾರಣಗಳಿವೆ. ಆದರೆ ಇನ್ನುಮುಂದೆ ಆ ಸಮಸ್ಯೆಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದೇ ಇರುವ ಹಾಗೆ ಆಗುವುದು ಬೇಡ ಎಂದು ಸರ್ಕಾರ ತೀರ್ಮಾನ ಮಾಡಿದ್ದು, ಹೊಸದೊಂದು ಕ್ರಮವನ್ನು ಜಾರಿಗೆ ತಂದಿದೆ.

ಅದೇನು ಎಂದರೆ, ಒಂದು ವೇಳೆ ಮಹಿಳೆಯರು ಏನೇ ಮಾಡಿದರೂ ಕೂಡ ಬ್ಯಾಂಕ್ ಅಕೌಂಟ್ ಸಮಸ್ಯೆ ಸರಿ ಹೋಗುತ್ತಿಲ್ಲ ಎಂದರೆ, ಮನೆಯ ಎರಡನೇ ಮುಖ್ಯ ಸದಸ್ಯ ಅಂದರೆ ಮಹಿಳೆಯ ಗಂಡನ ಖಾತೆಗೆ ಹಣ ವರ್ಗಾವಣೆ ಮಾಡುವುದಾಗಿ ಹೊಸ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲಾ ಮಹಿಳೆಯರನ್ನು ತಲುಪುವ ಹಾಗೆ ಮಾಡಲಾಗುತ್ತಿದೆ.

ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ತಲುಪದೇ ಇರುವ ಮಹಿಳೆಯರಿಗೆ ಒಂದೇ ಸಾರಿ 3 ಕಂತಿನ ಹಣವು ಬರಲಿದೆ. ಹಾಗೆಯೇ ಸರ್ಕಾರದ ಎಲ್ಲಾ ಯೋಜನೆಗಳ ಹಣ ನಿಮ್ಮ ಖಾತೆಗೆ ಬಂದಿದ್ಯಾ ಎಂದು ಚೆಕ್ ಮಾಡುವುದಕ್ಕೆ ಡಿಬಿಟಿ ಕರ್ನಾಟಕ ಎನ್ನುವ ಆಪ್ ಬಿಡುಗಡೆ ಮಾಡಲಾಗಿದ್ದು, ಈ ಆಪ್ ಇನ್ಸ್ಟಾಲ್ ಮಾಡಿ, ಆಧಾರ್ ಕಾರ್ಡ್ ನಂಬರ್ ಹಾಗೂ ಫೋನ್ ನಂಬರ್ ಮೂಲಕ ಓಟಿಪಿ ಪಡೆದು ಲಾಗಿನ್ ಆಗಿ ನಿಮ್ಮ ಡಿಬಿಟಿ ಸ್ಟೇಟಸ್ ಚೆಕ್ ಮಾಡಬಹುದು.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By

Leave a Reply

Your email address will not be published. Required fields are marked *