ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿನಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನುರಿತ ಶಿಲ್ಪಿಗಳಿಂದ ದೇವಾಲಯ ನಿರ್ಮಿಸಲಾಗಿದೆ. ಆಂಧ್ರಪ್ರದೇಶದ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿರುವ ಜಗನ್‍ಮೋಹನ್ ರೆಡ್ಡಿ ಅವರಿಗೆ ಬಹಳ ನಿಷ್ಠರಾಗಿರುವ ಶಾಸಕ ಮಧುಸೂದನ್ ರೆಡ್ಡಿ ಅವರು ಚಿತ್ತೂರು ಜಿಲ್ಲೆಯ ಶ್ರೀ ಕಾಳಹಸ್ತಿ ಪಟ್ಟಣದಲ್ಲಿ ಈ ದೇವಾಲಯ ನಿರ್ಮಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಗೌರವ ಸೂಚಕಾರ್ಥ ಹಾಗೂ ವೈಎಸ್‍ಆರ್ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಈ ದೇವಾಲಯ ನಿರ್ಮಿಸಲಾಗಿದೆ ಎಂದು ಮಧುಸೂದನ್ ಹೇಳಿದ್ದಾರೆ. ಜಗನ್ನಣ್ಣ ನಾರತ್ನಳ ನಿಲಯಂ ಎಂದು ಕರೆಯಲ್ಪಡುವ ಈ ಬೃಹತ್ ದೇವಾಲಯದಲ್ಲಿ 9 ಸ್ತಂಭಗಳಿದ್ದು, ಇದು ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಒಂಬತ್ತು ಕಲ್ಯಾಣ ಯೋಜನೆಗಳನ್ನು ಚಿತ್ರಿಸುತ್ತವೆ.

YSRP ಯ ಶಾಸಕ ಬಿ. ಮಧುಸೂಧನ್ ರೆಡ್ಡಿ ತಮ್ಮ ಗೌರವವನ್ನು ಪ್ರದರ್ಶಿಸಲು ಮತ್ತು ಸರ್ಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಾಲಯವನ್ನು ನಿರ್ಮಿಸಿರುವುದಾಗಿ ತಿಳಿಸಿದ್ದು, ಈ ದೇವಾಲಯವನ್ನು ಕರ್ನಾಟಕ ಹಾಗೂ ತಮಿಳುನಾಡಿನ ಕೆಲವು ತಜ್ಞರು ವಿನ್ಯಾಸಗೊಳಿಸಿರುವುದಾಗಿ ಹೇಳಿದ್ದಾರೆ.

ಈ ಕುರಿತಂತೆ ಬಿ. ಮಧುಸೂಧನ್ ರೆಡ್ಡಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನಮ್ಮ ಜಗನ್ನಣ್ಣ, ಬಡ ಜನರ ಕುಟುಂಬಗಳಿಗೆ ಸಂತಸ ತರುವ ದೇವರು ಎಂದು ಹೇಳಿದ್ದು, ಹೊಸದಾಗಿ ನಿರ್ಮಿಸಲಾಗಿರುವ ದೇವಾಲಯದ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಅನೇಕರು ನಾನು ಜಗನ್ ಮೋಹನ್ ರೆಡ್ಡಿಯವರು ನಾರತ್ನಳ ನಿಲಯವನ್ನು ಏಕೆ ಕಟ್ಟಿದ್ದೇನೆ ಎಂದು ಟೀಕಿಸಬಹುದು. ಆದರೆ ಬ್ರಿಟಿಷರ ಪ್ರತಿಮೆಗಳನ್ನು ಗೋದಾವರಿ ನದಿಯ ಅಣೆಕಟ್ಟಿನಲ್ಲಿ ನಿರ್ಮಿಸಲಾಗಿದೆ. ಹೀಗಾಗಿ ಜನರಿಗೆ ಒಳ್ಳೆಯದನ್ನು ಮಾಡುವ ವ್ಯಕ್ತಿಯ ಪ್ರತಿಮೆಯನ್ನು ನಿರ್ಮಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಜಗನ್‍ರವರು ಜಾರಿಗೊಳಿಸಿರುವ ನವ ರತ್ನಗಳ ಯೋಜನೆ ರಾಜ್ಯದ ಆರು ಕೋಟಿ ಜನಸಂಖ್ಯೆಯಲ್ಲಿ 5 ಕೋಟಿ ಜನರಿಗೆ ಪ್ರಯೋಜನವಾಗುತ್ತಿದೆ.

ಇಂತಹ ಬೃಹತ್ ಯೋಜನೆ ಭಾರತದಲ್ಲಿ ಎಲ್ಲಿಯೂ ಇಲ್ಲ. ಅದಕ್ಕಾಗಿಯೇ ನಾನು ಇದನ್ನು ನಿರ್ಮಿಸಿದ್ದೇನೆ ಎಂದು ತನ್ನ ಕೆಲಸವನ್ನು ಮಧುಸೂಧನ್ ರೆಡ್ಡಿ ಸಮರ್ಥಿಸಿಕೊಂಡಿದ್ದು, ಮನೆಯ ಮೇಲ್ಭಾಗದ ಮಿರರ್ ಹಾಲ್‍ನಲ್ಲಿ ಜಗನ್ ಮೋಹನ್ ರೆಡ್ಡಿಯವರ ಪ್ರತಿಮೆ ಹಾಗೂ ಫೋಟೋಗಳನ್ನು ಇಡಲಾಗಿದೆ. ಇದು ಆಗಸ್ಟ್ 20ರಂದು ಉದ್ಘಾಟನೆಯಾಗಲಿದೆ. ಅಲ್ಲದೇ ಕೇಂದ್ರ ಫಲಕವನ್ನು ಆಂಧ್ರಪ್ರದೇಶದ ನಕ್ಷೆಯೊಂದಿಗೆ ಕೆತ್ತಲಾಗಿದೆ.

ಜೊತೆಗೆ ಜಗನ್ ರೆಡ್ಡಿ, ವೈಎಸ್‌ಆರ್‌ಪಿಸಿಯ ಧ್ವಜ ಮತ್ತು ಪಕ್ಷದ ಚಿಹ್ನೆ ನವ ರತ್ನಗಳನ್ನು ಬೆಳ್ಳಿ ಹಾಗೂ ಚಿನ್ನದಿಂದ ಮಾಡಲ್ಪಟ್ಟಿದೆ. ದೇವಾಲಯಕ್ಕೆ ಭೇಟಿ ನೀಡುವವರಿಗೆ ಜಗನ್ ಮೋಹನ್ ರೆಡ್ಡಿ ಮಾಡಿದ ಕಲ್ಯಾಣ ಯೋಜನೆಗಳ ತಿಳಿಸುವ ಕಿರು ಪುಸ್ತಕವನ್ನು ನೀಡಲಾಗುತ್ತದೆ ಎಂದಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *