ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಇನ್ಫೋಸಿಸ್ ಕಂಪನಿಯಲ್ಲಿದೆ 35 ಸಾವಿರ ಹುದ್ದೆಗಳು

0 0

ಕೊರೋನ ಮಹಾಮಾರಿಯಿಂದ ಆರ್ಥಿಕ ಸಂಕಷ್ಟ ಉಂಟಾಗಿ ಸಾವಿರಾರು ಜನರು ಉದ್ಯೋಗ ಕಳೆದುಕೊಂಡರು. ಕಳೆದ ವರ್ಷದಿಂದ ಶೈಕ್ಷಣಿಕ ಚಟುವಟಿಕೆಗಳೂ ಸರಿಯಾಗಿ ನಡೆಯದ ಕಾರಣದಿಂದ ಕ್ಯಾಂಪಸ್ ಸೆಲೆಕ್ಷನ್ ಎಂಬುದು ಮರೆತೆ ಹೋಗಿದೆ ಹೀಗಾಗಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿ ಕಾಲೇಜಿನಿಂದ ಹೊರಬರುತ್ತಿರುವ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಉದ್ಯೋಗ ಹುಡುಕುವುದೇ ಒಂದು ದೊಡ್ಡ ಸವಾಲಾಗಿದೆ. ಇನ್ ಫೋಸಿಸ್ ಕಂಪನಿಯು ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ ಕಲ್ಪಿಸಿದೆ. ಹಾಗಾದರೆ ಇನ್ ಫೋಸಿಸ್ ನೀಡಿರುವ ಸುವರ್ಣ ಅವಕಾಶದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

ಭಾರತದ ಪ್ರಮುಖ ಐಟಿ ಕಂಪನಿಯಾದ ಬೆಂಗಳೂರಿನ ಇನ್​ಫೋಸಿಸ್​ ಕಂಪನಿಯಲ್ಲಿ ಕೆಲಸ ಮಾಡಬೇಕೆಂಬುದು ಬಹಳಷ್ಟು ಜನರ ಆಸೆ. ಆ ಆಸೆಯೂ ಇದೀಗ ಈಡೇರಲಿದೆ ಹೇಗೆಂದರೆ ಇನ್​ಫೋಸಿಸ್​ ಸದ್ಯದಲ್ಲೇ 35,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. ಲಾಕ್​ಡೌನ್​ ಸಮಯದಲ್ಲಿ ಹಲವು ಕಂಪನಿಗಳು ನಷ್ಟದಲ್ಲಿದ್ದವು ಆದರೆ ಇನ್​ಫೋಸಿಸ್ ಲಿಮಿಟೆಡ್ ಕಂಪನಿ ಮಾತ್ರ ಭಾರೀ ಲಾಭ ಗಳಿಸಿದೆ. ಇನ್​ಫೋಸಿಸ್​ ಸಂಸ್ಥೆಯ ಲಾಭದಲ್ಲಿ ಶೇಕಡಾ 22.7ರಷ್ಟು ಹೆಚ್ಚಳವಾಗಿದ್ದು, ಈ ವರ್ಷ ಇನ್ನೂ ಹೆಚ್ಚಿನ ಪ್ರಾಜೆಕ್ಟ್​ಗಳು ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ 35 ಸಾವಿರ ಪದವೀಧರರನ್ನು ನೇಮಕ ಮಾಡಿಕೊಳ್ಳಲು ಇನ್ ಫೋಸಿಸ್ ಸಂಸ್ಥೆ ನಿರ್ಧರಿಸಿದೆ.

ಇನ್​ಫೋಸಿಸ್ ಮೊದಲ ಕ್ವಾರ್ಟರ್ ಅವಧಿಯಲ್ಲಿ 5,195 ಕೋಟಿ ರೂಪಾಯಿ ಆದಾಯ ಗಳಿಸಿದೆ. ಕಳೆದ ವರ್ಷ 4,233 ಕೋಟಿ ರೂಪಾಯಿ ಆದಾಯ ಗಳಿಸಿತ್ತು. 2022ರ ಆರ್ಥಿಕ ವರ್ಷದ ವೇಳೆಗೆ ಇನ್​ಫೋಸಿಸ್ ಶೇಕಡಾ 14ರಿಂದ 16ರಷ್ಟು ಆದಾಯದ ನಿರೀಕ್ಷೆಯಲ್ಲಿದೆ. ಇನ್​ಫೋಸಿಸ್ ಸಂಸ್ಥೆಯ ಈ ಸಾಧನೆ ಬಗ್ಗೆ ಮಾತನಾಡಿರುವ ಭಾರತದ ಎರಡನೇ ಐಟಿ ಸರ್ವಿಸ್ ಸಂಸ್ಥೆಯಾಗಿರುವ ಇನ್​ಫೋಸಿಸ್ ಡಿಜಿಟಲ್ ವಲಯಕ್ಕೆ ವಿಶ್ವದಾದ್ಯಂತ ಮತ್ತಷ್ಟು ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಮೊದಲು ಟಿಸಿಎಸ್ (TCS) ಕೂಡ 40,000 ಉದ್ಯೋಗಿಗಳನ್ನು ಕಾಲೇಜಿನ ಕ್ಯಾಂಪಸ್ ಗಳಿಂದ ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಈಗ ಇನ್​ಫೋಸಿಸ್ ಕೂಡ ಪದವೀಧರರಿಗೆ ಉದ್ಯೋಗಾವಕಾಶ ನೀಡಲು ಮುಂದಾಗಿದ್ದು ಕೆಲಸ ಹುಡುಕುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ, ಇದರಿಂದ ಸಾವಿರಾರು ಜನರ ಉದ್ಯೋಗದ ಸಮಸ್ಯೆ ದೂರವಾಗಲಿದೆ.

ಇನ್ ಫೋಸಿಸ್ ನಲ್ಲಿ ಕೆಲಸ ಮಾಡಬೇಕು ಎಂಬ ಕನಸನ್ನು ಹೊಂದಿರುವವರು ಈ ಅವಕಾಶವನ್ನು ತಪ್ಪದೇ ಬಳಸಿಕೊಳ್ಳಿ. ಭಾರತದ ಪ್ರಮುಖ ಕಂಪನಿಗಳಲ್ಲಿ ಒಂದಾದ ಇನ್ ಫೋಸಿಸ್ ನಲ್ಲಿ ಉದ್ಯೋಗ ಅವಕಾಶ ಸಿಕ್ಕರೆ ಅನುಕೂಲವಾಗುತ್ತದೆ. ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಅವರ ಕನಸಾದ ಇನ್ ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುವ ಅದೃಷ್ಟ ಈ ಮೂಲಕ ನಿಮ್ಮದಾಗಲಿದೆ. ಈ ಮಾಹಿತಿ ಉಪಯುಕ್ತವಾಗಿದ್ದು ತಪ್ಪದೇ ಎಲ್ಲರಿಗೂ ತಿಳಿಸಿ ನಿರುದ್ಯೋಗ ಮಟ್ಟವು ಕಡಿಮೆಯಾಗುವಲ್ಲಿ ಒಂದು ಹೆಜ್ಜೆ ಇಡೋಣ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.