ಪುನೀತ್ ರಾಜಕುಮಾರ ಅವರು ಇದ್ದಕಿದ್ದಂತೆ ಹೃದಯಾಘಾತದಿಂದ ನಿಧನರಾದರು ಇದರಿಂದ ಇಡಿ ಕರುನಾಡು ದುಃಖಿತವಾಗಿತ್ತು. ಅವರ ಅಂತಿಮದರ್ಶನಕ್ಕೆ 25ಲಕ್ಷಕ್ಕೂ ಅಧಿಕ ಅಭಿಮಾನಿಗಳು ಆಗಮಿಸಿದ್ದರು. ಇಂತಹ ಸಂದರ್ಭದಲ್ಲಿ ಪುನೀತ್ ರಾಜಕುಮಾರ ಅವರ ಸಾವಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಯಾವ ಗತಿ ಬಂತು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಅಕ್ಟೋಬರ್ 29 ನೇ ತಾರೀಖಿನಂದು ಹೃದಯಾಘಾತದಿಂದ ಸಾವನ್ನಪ್ಪಿದ ನಮ್ಮೆಲ್ಲರ ಪ್ರೀತಿಯ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿಯನ್ನು ಬೆಂಗಳೂರು ಪೊಲೀಸರು ನವೆಂಬರ್ ಒಂದನೇ ತಾರೀಖಿನಂದು ಬಂಧಿಸಿದ್ದಾರೆ. ಎಣ್ಣೆ ಕುಡಿದ ನಂತರ ಪುನೀತ್ ರಾಜಕುಮಾರ್ ಅವರ ಸಮಾಧಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇವೆ ಎಂದು ಕಿಡಿಗೇಡಿಯೊಬ್ಬ ಕಾರಿನಲ್ಲಿ ಕುಳಿತು ಮದ್ಯದ ಬಾಟಲ್ ಹಿಡಿದುಕೊಂಡ ಪೊಟೋವನ್ನು ಪೋಸ್ಟ್ ಮಾಡಿದ್ದನು. ಈ ಫೋಟೋವನ್ನು ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅಪ್ಲೋಡ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜನರಿಗೆ ಮನುಷ್ಯತ್ವ ಇಲ್ಲವಾ, ಪುನೀತ್ ಬಗ್ಗೆ ಇಂತಹ ಮನಸ್ಥಿತಿ ಏನಿದು ಎಂದು ಪ್ರಶ್ನಿಸಿದ ಸಾನ್ವಿ ಕರ್ನಾಟಕ ಸರ್ಕಾರ ಒಳ್ಳೆಯ ನಿರ್ಧಾರವನ್ನು ಮಾಡಿದೆ ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ವಾಸವಾಗಿರುವವರು ಸ್ವಲ್ಪ ಪ್ರಜ್ಞಾವಂತಿಕೆಯನ್ನು ತೋರಿಸಿ ಎಂದು ಚಾಟಿ ಬೀಸಿದರು. ಕಿಡಗೇಡಿ ಹಾಕಿರುವ ಪೋಸ್ಟ್ ಬಯಲಾಗುತ್ತಿದ್ದಂತೆ ಅವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಕನ್ನಡಿಗರು ಆಗ್ರಹಿಸಿದ್ದರು.

ಪೊಲೀಸರಿಗೆ ಈ ವಿಚಾರ ತಿಳಿದು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಖಚಿತ ಪಡಿಸಿದ್ದಾರೆ. ಅಕ್ಟೋಬರ್ 29 ನೇ ತಾರೀಖಿನಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಿಧನ ಹೊಂದಿರುವ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿತ್ತು.

ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆಯಲು 25 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಕಂಠೀರವ ಸ್ಟೇಡಿಯಂ ಆವರಣದಲ್ಲಿ ಭಾಗವಹಿಸಿದ್ದರು. ಅಪ್ಪು ಅವರ ಅಂತ್ಯಸಂಸ್ಕಾರ ನಡೆಯುವ ಸಮಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯಬಾರದೆಂದು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಬಾರ್ ಮತ್ತು ಪಬ್ ಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿತ್ತು.

ಯಾವುದೆ ಅಹಿತಕರ ಘಟನೆ ನಡೆಯಲು ಆಸ್ಪದ ಕೊಡಬೇಡಿ, ಪುನೀತ್ ರಾಜಕುಮಾರ್ ಅವರನ್ನು ಅತ್ಯಂತ ಗೌರವ ಪೂರ್ವಕವಾಗಿ ಹಾಗೂ ಶಾಂತಿಯುತವಾಗಿ ಕಳುಹಿಸಿಕೊಡಲು ಸಹಕರಿಸಿ ಎಂದು ಅಭಿಮಾನಿಗಳಲ್ಲಿ ಹೇಳಲಾಗಿತ್ತು. ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಅಭಿಮಾನಿಗಳು ತಾಳ್ಮೆಯನ್ನು ಕಳೆದುಕೊಳ್ಳಬಾರದು ಕುಡಿತದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾದರೆ ನಿಯಂತ್ರಣ ಮಾಡುವುದು ಕಷ್ಟ ಎಂಬ ಕಾರಣಕ್ಕಾಗಿ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಬಾರ್ ಗಳನ್ನು ಬಂದ್ ಮಾಡಿಸಿತ್ತು.

ಉತ್ತರ ಭಾರತದ ಕೆಲವರು ಕೀಳು ಮನಸ್ಥಿತಿಯನ್ನು ಪ್ರದರ್ಶನ ಮಾಡಿದ್ದಾರೆ. ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ಕೆಲವರು ಎಣ್ಣೆಗಾಗಿ ಅಲೆದಾಡಿದ್ದಾರೆ ಕೊನೆಗೂ ಅವರಿಗೆ ಬಿಯರ್ ಬಾಟಲ್ ಸಿಕ್ಕಿದೆ ಅದನ್ನು ಕಾರಿನಲ್ಲಿ ಹಿಡಿದುಕೊಂಡು ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ

ಅಲ್ಲದೆ ಪುನೀತ್ ರಾಜಕುಮಾರ್ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿದರ ಪರಿಣಾಮ ಇದೀಗ ಕಿಡಿಗೇಡಿ ಕಂಬಿ ಹಿಂದೆ ಬಿದ್ದಿದ್ದಾನೆ. ಕನ್ನಡಿಗರಿಗೆ ಅದರಲ್ಲೂ ಒಬ್ಬ ಮೇರು ನಟನಿಗೆ ನಿಂದಿಸಿದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ನಿದರ್ಶನವಾಗಿದೆ. ಜನರು ಪ್ರಜ್ಞಾವಂತಿಕೆಯನ್ನು ಮರೆಯದೆ ವರ್ತಿಸಬೇಕು.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *