ಸಂಚಾರಿ ವಿಜಯ್ ಕುರಿತು ಮೇಘನಾರಾಜ್ ಭಾವನಾತ್ಮಕ ಪತ್ರ

0 2

ಸ್ಯಾಂಡಲ್‍ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ನಿಧನ ಸದ್ಯ ಇಡೀ ಚಿತ್ರರಂಗವನ್ನೇ ದಂಗು ಬಡಿಸಿದೆ. ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದ ನಟನನ್ನು ಕಳೆದುಕೊಂಡ ಸ್ಯಾಂಡಲ್‍ವುಡ್ ಜನರು ಅವಕ್ಕಾಗಿದ್ದಾರೆ. ಎಲ್ಲರ ಹಾಗೆಯೇ ನಟಿ ಮೇಘನಾ ರಾಜ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೂ ನಟ ಸಂಚಾರಿ ವಿಜಯ್ ಅವರ ಕುರಿತಾಗಿ ಒಂದು ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ಮೇಘನಾ ರಾಜ್ ಸಂಚಾರಿ ವಿಜಯ್ ಅವರ ಬಗ್ಗೆ ಭಾವನಾತ್ಮಕವಾಗಿ ಏನೆಂದು ಬರೆದಿರಬಹುದು ಎನ್ನುವುದನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣ ಇಡೀ ಚಿತ್ರರಂಗವೇ ಕಣ್ಣೀರು ಹಾಕುವಂತೆ ಮಾಡಿತ್ತು. ಚಿರಂಜೀವಿ ಸರ್ಜಾ ಅವರ ಮರಣವಾದಾಗ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ಕೂಡ ಕಣ್ಣೀರು ಸುರಿಸಿದ್ದರು. ಇಂದಿಗೂ ಅಭಿಮಾನಿಗಳು ಒಂದಲ್ಲ ಒಂದು ವಿಚಾರದಲ್ಲಿ ಚಿರುವನ್ನು ಪದೇ ಪದೇ ನೆನಪು ಮಾಡಿಕೊಳ್ಳುತ್ತಿರುತ್ತಾರೆ. ಚಿರು ತೀರಿಕೊಂಡ ಹಲವು ದಿನಗಳ ಬಳಿಕ ಮೇಘನಾ ರಾಜ್ ಅವರು ಚಿರು ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದರು. ಇದಕ್ಕೆ ಅಂದು ಪ್ರತಿಕ್ರಿಯಿಸಿದ್ದ ವಿಜಯ್, ನಾವೆಲ್ಲರೂ ನಿಮ್ಮ ಜೊತೆ ಇದ್ದೇವೆ, ದೇವರು ಕೂಡ ನಮ್ಮ ಜೊತೆ ಇದ್ದಾರೆ ಎಂದು ಹೇಳುವ ಮೂಲಕ ಮೇಘನಾ ಬೆನ್ನಿಗೆ ನಿಂತಿದ್ದರು. ಆದರೆ ಇಂದು ವಿಜಯ್ ಕೂಡ ನಮ್ಮನ್ನು ಅಗಲಿದ್ದಾರೆ. ಹೀಗಾಗಿ ವಿಜಯ್ ಅವರ ಈ ಮಾತನ್ನು ಇಂದು ಮೇಘನಾ ನೆನಪಿಸಿಕೊಂಡಿದ್ದಾರೆ.

ಸಂಚಾರಿ ವಿಜಯ್ ಹಾಗೂ ಮೇಘನಾ ರಾಜ್ ಇಬ್ಬರೂ ಒಳ್ಳೆಯ ಸ್ನೇಹಿತರಾಗಿದ್ದರು. ಇವರಿಬ್ಬರೂ ಅಲ್ಲಮ್ಮ ಎಂಬ ಚಿತ್ರದಲ್ಲಿ ಒಂದೇ ತೆರೆ ಹಂಚಿಕೊಂಡಿದ್ದರು. ಚಿರು ನಿಧನವಾದಾಗ ಮೇಘನಾ ಅವರಿಗೆ ವಿಜಯ್ ಸಮಾಧಾನ ಹೇಳಿದ್ದರು. ವಿಜಯ್ ಮೇಘನಾ ಸಮಾಧಾನ ಮಾಡಿ ಟ್ವೀಟ್ ಮಾಡಿದ ಒಂದು ವರ್ಷಕ್ಕೆ ಸರಿಯಾಗಿ ಸಂಚಾರಿ ವಿಜಯ್ ಅವರು ಕೂಡಾ ಎಲ್ಲರನ್ನೂ ಅಗಲಿದ್ದಾರೆ. ಸಂಚಾರಿ ವಿಜಯ್ ಅವರ ಹಳೆಯ ಪೋಸ್ಟನ್ನು ಶೇರ್ ಮಾಡಿಕೊಂಡು ಮೇಘನಾ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿ ಬಿಟ್ಟು ಹೋಗಿದ್ದಿರಾ ಎಂದು ಬರೆದುಕೊಂಡಿದ್ದಾರೆ. ತಾವು ಬರೆದಿರುವ ಬರಹಕ್ಕೆ ವಿಜಯ್ ಪ್ರತಿಕ್ರಿಯೇ ಮಾಡಿದ್ದನ್ನು ಇನ್ ಸ್ಟಾ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿರುವ ಮೇಘನಾ ರಾಜ್ ಅವರು, ದೇವರು ನಿಜವಾಗಲೂ ಕ್ರೂರಿ ಅನಿಸುತ್ತಿದೆ ಒಳ್ಳೆಯವರಿಗೆ ಹೆಚ್ಚು ಕಾಲ ಸಮಯವಿಲ್ಲ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.