ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ 2 ಮಕ್ಕಳು ಫ್ಯಾಮಿಲಿ ಹೇಗಿದೆ ನೋಡಿ

0 1

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇರುತ್ತದೆ. ಹಾಗಾದರೆ ಬಸವರಾಜ ಬೊಮ್ಮಾಯಿ ಅವರ ಕುಟುಂಬಸ್ಥರ ಬಗ್ಗೆ ಹಾಗೂ ಅವರ ರಾಜಕೀಯ ಜೀವನದ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು 1960 ಜನವರಿ 28ರಂದು ಹುಬ್ಬಳ್ಳಿಯಲ್ಲಿ ಜನಿಸಿದ್ದಾರೆ, ಇವರಿಗೆ ಈಗ 61 ವರ್ಷ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿ ಅವರ ಪುತ್ರರೆ ಬಸವರಾಜ ಬೊಮ್ಮಾಯಿ. ಎಸ್ ಆರ್ ಬೊಮ್ಮಾಯಿ ಅವರು ಕರ್ನಾಟಕದ 11ನೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಬಸವರಾಜ ಬೊಮ್ಮಾಯಿ ಅವರು ಮೆಕ್ಯಾನಿಕಲ್ ಬಿಇ ಓದಿದ್ದಾರೆ. ಸ್ವಲ್ಪ ದಿನಗಳ ಕಾಲ ಅವರು ಟಾಟಾ ಕಂಪನಿಯಲ್ಲಿ ಕೆಲಸ ಮಾಡಿದ್ದರು. ಬಸವರಾಜ ಬೊಮ್ಮಾಯಿ ಅವರ ಹೆಂಡತಿಯ ಹೆಸರು ಚೆನ್ನಮ್ಮ, ಅವರಿಗೆ ಭರತ ಎಂಬ ಮಗನಿದ್ದಾನೆ. ಭರತ ಅಮೆರಿಕಾದಲ್ಲಿ ಡಿಗ್ರಿ ಮುಗಿಸಿ ಬಸವರಾಜ ಬೊಮ್ಮಾಯಿ ಅವರು ಸ್ಥಾಪಿಸಿದ ಅಶ್ವಥ್ ಎನರ್ಜಿ ಕಂಪನಿಯನ್ನು ನೋಡಿಕೊಳ್ಳುತ್ತಿದ್ದಾರೆ. ಭರತ್ ಅವರು ತಮ್ಮ ತಂದೆ ಹಾಗೂ ತಾತನ ದಾರಿಯಲ್ಲಿ ನಡೆಯುವ ಆಸೆ ಇದೆ ಎಂದು ಹೇಳಿಕೊಂಡಿದ್ದಾರೆ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಅದಿತಿ ಎಂಬ ಮಗಳಿದ್ದಾಳೆ, ಅವಳು ಬೆಂಗಳೂರಿನಲ್ಲಿ ಡಿಗ್ರಿ ಓದುತ್ತಿದ್ದಾಳೆ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದರ ಬಗ್ಗೆ ಅವರ ಕುಟುಂಬಸ್ಥರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ. ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2008ರಿಂದ ಸತತ ಮೂರು ಬಾರಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಜಲಸಂಪನ್ಮೂಲ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಎರಡು ವರ್ಷದಿಂದ ಗ್ರಹ, ಕಾನೂನು, ಸಂಸದೀಯ ವ್ಯವಹಾರ ಖಾತೆಯನ್ನು ನಿರ್ವಹಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸುವಾಗ ಪಕ್ಷದ ನಾಯಕ ಮೋದಿ, ಅಮಿತ್ ಶಾ, ಯಡಿಯೂರಪ್ಪನವರು ನಿರೀಕ್ಷೆ ಇಟ್ಟಿದ್ದಾರೆ ನಾನು ಅದನ್ನು ಈಡೇರಿಸುತ್ತೇನೆ. ಜನರಿಗೋಸ್ಕರ ಜನಪರ ಆಡಳಿತವನ್ನು ನಡೆಸಿ ಕರ್ನಾಟಕವನ್ನು ಉನ್ನತಮಟ್ಟದ ರಾಜ್ಯವನ್ನಾಗಿ ರೂಪಿಸುತ್ತೇನೆ ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿದ್ದಾರೆ. ಒಟ್ಟಾರೆಯಾಗಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನಡೆಸಲಿ ಎಂದು ಆಶಿಸೋಣ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.