ಕೆಲವು ಕೆಲಸಗಳಿಗೆ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಬೇಕಾದಂತೆ ವಾಸಸ್ಥಳ ದೃಢೀಕರಣ ಪತ್ರ ಕೂಡ ಅವಶ್ಯಕವಾಗಿ ಬೇಕಾಗುತ್ತದೆ. ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಬೇಕು. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಕಂಪ್ಯೂಟರ್ ನಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಹಾಗಾದರೆ ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಕಂಪ್ಯೂಟರ್ ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.

ಜಾಬ್ ಮಾಡುವಾಗ, ಕಾಲೇಜ್ ಹೋಗುವಾಗ, ಲೋನ್ ಪಡೆಯಲು, ಕೃಷಿಗೆ ಸಂಬಂಧಿಸಿದಂತೆ ಇನ್ನೂ ಅನೇಕ ಕೆಲಸಗಳಿಗೆ ರೆಸಿಡೆನ್ಸಿಯಲ್ ಅಥವಾ ವಾಸಸ್ಥಳ ದೃಢೀಕರಣ ಪತ್ರ ಬೇಕಾಗುತ್ತದೆ. ಮೊಬೈಲ್ ಅಥವಾ ಕಂಪ್ಯೂಟರ್ ನಲ್ಲಿ ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು. ಮೊಬೈಲ್ ಅಥವಾ ಕಂಪ್ಯೂಟರ್ ನಲ್ಲಿ ನಾಡಕಛೇರಿ ವೆಬ್ ಸೈಟ್ ಓಪನ್ ಮಾಡಿ ಅಲ್ಲಿ ಎಡಗಡೆ ನ್ಯೂ ರೆಕ್ವೆಸ್ಟ್ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಿದಾಗ ರೆಸಿಡೆನ್ಸ್ ಸರ್ಟಿಫಿಕೇಟ್ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಿದಾಗ ಕನ್ನಡ ಮತ್ತು ಇಂಗ್ಲಿಷ್ ಲ್ಯಾಂಗ್ವೇಜ್ ಗಳಲ್ಲಿ ವಾಸಸ್ಥಳ ಪ್ರಮಾಣ ಪತ್ರ ಯಾವ ಭಾಷೆಯಲ್ಲಿ ಬೇಕೊ ಆ ಭಾಷೆಯನ್ನು ಸೆಲೆಕ್ಟ್ ಮಾಡಬೇಕು.

ನಂತರ ರೇಷನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಎರಡರಲ್ಲಿ ಒಂದನ್ನು ಸೆಲೆಕ್ಟ್ ಮಾಡಿಕೊಂಡು ಅದರ ನಂಬರ್ ಹಾಕಿ ಗೋ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಬೇಕು. ನಂತರ ಒಂದು ಫಾರ್ಮ್ ಓಪನ್ ಆಗುತ್ತದೆ ಅಲ್ಲಿಯೂ ಆಧಾರ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಗಳನ್ನು ಸೆಲೆಕ್ಟ್ ಮಾಡಿದ ನಂತರ ಅರ್ಜಿದಾರನ ಹೆಸರು ತಂದೆಯ ಹೆಸರು ಹಾಕಿದ ನಂತರ ಕೆಳಗಡೆ ಆಧಾರ್ ಕನ್ಸೆಂಟ್ ಫಾರ್ಮ್ ಪ್ರಿಂಟೆಡ್ ಎಂದು ಕಾಣಿಸುತ್ತದೆ ಅದನ್ನು ಸೆಲೆಕ್ಟ್ ಮಾಡಿಕೊಂಡು ಪ್ರಿಂಟ್ ಕನ್ಸೆಂಟ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿದಾಗ ಒಂದು ಒಪ್ಪಿಗೆ ಪತ್ರ ಬರುತ್ತದೆ ಅದನ್ನು ಪ್ರಿಂಟ್ ತೆಗೆದುಕೊಳ್ಳಬಹುದು ಅಥವಾ ಸೇವ್ ಮಾಡಿ ಇಡಬಹುದು. ಪ್ರಿಂಟ್ ತೆಗೆದು ಸ್ಥಳ, ದಿನಾಂಕ ಹಾಕಿ ಒಂದು ಸಿಗ್ನೇಚರ್ ಹಾಕಿ ಇಟ್ಟುಕೊಳ್ಳಬಹುದು.

ನಂತರ ಹಿಂದೆ ಬಂದು ಆಧಾರ್ ಕನ್ಸೆಂಟ್ ಫಾರ್ಮ್ ಪ್ರಿಂಟೆಡ್ ಆಪ್ಷನ್ ಸೆಲೆಕ್ಟ್ ಮಾಡಿರುವುದನ್ನು ಕ್ಯಾನ್ಸಲ್ ಮಾಡಬೇಕು. ನಂತರ ಈ ಫಾರ್ಮ್ ತುಂಬಿರುವುದನ್ನು ಪ್ರಿಂಟ್ ತೆಗೆದು ಆಧಾರ್ ಕಾರ್ಡ್ ಮುಂತಾದ ಕೆಲವು ದಾಖಲಾತಿಗಳನ್ನು ಅಪ್ಲೋಡ್ ಮಾಡಿ 25 ರೂಪಾಯಿಯನ್ನು ಆನ್ಲೈನ್ ಪೇಮೆಂಟ್ ಮಾಡಿ ಸಬ್ಮಿಟ್ ಮಾಡಬೇಕಾಗುತ್ತದೆ. ನಂತರ ವಾಸಸ್ಥಳ ಪ್ರಮಾಣ ಪತ್ರ ಸಿಗುತ್ತದೆ. ಈ ಮಾಹಿತಿಯನ್ನು ತಪ್ಪದೇ ಎಲ್ಲರಿಗೂ ತಿಳಿಸಿ ನಿಮ್ಮ ಕಂಪ್ಯೂಟರ್ ನಲ್ಲಿ ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು. ವಾಸಸ್ಥಳ ಪ್ರಮಾಣ ಪತ್ರ ಎಲ್ಲಾ ಕೆಲಸಕ್ಕೂ ಬೇಕಾಗಿರುವುದರಿಂದ ಎಲ್ಲರೂ ಇದರ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದು ಒಳ್ಳೆಯದು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave a Reply

Your email address will not be published. Required fields are marked *