ಮೂಲವ್ಯಾಧಿ ಬಂದರೆ ಆಹಾರಕ್ರಮದಿಂದ ಗುಣಪಡಿಸಬಹುದು. ಅದರಲ್ಲೂ ಈ ಕೆಳಗಿನ ಆಹಾರಗಳನ್ನು ಸೇವಿಸಿದರೆ ಮೂಲವ್ಯಾಧಿ ಗುಣಮುಖವಾಗಲು ಸಹಕಾರಿಯಾಗಿದೆ.

ಲೋಳೆರಸದ ತಿರುಳನ್ನು ಒಂದು ಚಮಚದಷ್ಟು ದಿನಕ್ಕೆ ಮೂರು ಬಾರಿ ಸೇವಿಸಬೇಕು. ಜೇನು ಮತ್ತು ಅದರ ಅರ್ಧದಷ್ಟು ಹರಳೆಣ್ಣೆ ಸೇರಿಸಿ ಸೇವಿಸಿದರೆ ಮೂಲವ್ಯಾಧಿ ಉಪಶಮನವಾಗುವುದು. ನಂತರ ಮಲುಗುವ ಮುನ್ನ ಒಂದು ಚಮಚ ಏಲಕ್ಕಿ ಮತ್ತು ಬಾಳೆ ಹಣ್ಣು ತಿನ್ನಬೇಕು. ಲೋಳೆಸರದ ತಿರುಳಿಗೆ ಹರಳೆಣ್ಣೆ ಬೆರೆಸಿ ರಾತ್ರಿ ಹೊತ್ತು ಮತ್ತು ಬೆಳಿಗ್ಗೆ ಮಲವಿಸರ್ಜನೆಯ ಮುಂಚೆ ಮತ್ತು ನಂತರದ ಸಮಯದಲ್ಲಿ ಹಚ್ಚಿದರೆ ಮಲವಿಸರ್ಜನೆಗೆ ಕಷ್ಟವಾಗುವುದಿಲ್ಲ. ಇದರಿಂದ ನೋವು ಉಂಟಾಗುವುದಿಲ್ಲ.

ಹಾಲಿನಲ್ಲಿ ಒಣ ಖರ್ಜೂರ ಅಥವಾ ಉತ್ತುತ್ತೆಯನ್ನು ರಾತ್ರಿಯಲ್ಲಿ ನೆನೆಯಿಟ್ಟು ಬೆಳಗ್ಗೆ ತಿನ್ನಬೇಕು. ಒಂದು ಈರುಳ್ಳಿಯನ್ನು ಪೇಸ್ಟ್ ರೀತಿ ಮಾಡಿ ಅದನ್ನು ಸಿಹಿ ಮಜ್ಜಿಗೆಯಲ್ಲಿ ಬೆರೆಸಿ ಊಟದ ನಂತರ ಕುಡಿಯಬೇಕು. ಮೂಲಂಗಿ ಸೊಪ್ಪಿನ ರಸಕ್ಕೆ ಚಿಟಿಕೆಯಷ್ಟು ಸೈಂಧವ ಲವಣ ಸೇರಿಸಿ ಪ್ರತಿದಿನ ಎರಡು ಬಾರಿಯಂತೆ ಎರಡರಿಂದ ಮೂರು ವಾರ ಕುಡಿದರೆ ಮೂಲವ್ಯಾಧಿ ಗುಣವಾಗುವುದು. ಮೂಲಂಗಿ ರಸವನ್ನು ಮತ್ತು ಮಜ್ಜಿಗೆಯಲ್ಲಿ ಬೆರೆಸಿ ಕುಡಿಯುವುದು ಕೂಡ ಒಳ್ಳೆಯದು.ಸುವರ್ಣ ಗೆಡ್ಡೆಯನ್ನು ಸಿಪ್ಪೆ ತೆಗೆದು ಒಣಗಿಸಿ ಕುಟ್ಟಿ ಪುಡಿ ಮಾಡಿ, ಆ ಪುಡಿಯನ್ನು ಪ್ರತಿ ದಿನ ಒಂದು ಚಮಚದಂತೆ ಜೇನುತುಪ್ಪಬೆರೆಸಿ ತಿನ್ನುವುದು ಒಳ್ಳೆಯದು. ಹುಣಸೆ ಹಣ್ಣಿನ ಮರದ ಚಿಗುರು ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ತುಳಸಿ ಬೀಜದ ಪುಡಿ 10 ಗ್ರಾಂ ಮತ್ತು ಒಂದು ಚಮಚ ಬೆಣ್ಣೆ ಬೆರೆಸಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು. ಈರುಳ್ಳಿಯನ್ನು ಚಿಕ್ಕದಾಗಿ ಕತ್ತರಿಸಿ ಅದನ್ನು ತುಪ್ಪದಲ್ಲಿ ಹುರಿದು ಅನ್ನದೊಂದಿಗೆ ಸೇವಿಸಬೇಕು. ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸಬೇಕು.ಸೌತೆಕಾಯಿ ರಸವನ್ನು ಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು.

ನಾಲ್ಕು ಚಮಚ ಕೊತ್ತಂಬರಿಯನ್ನು ನಾಲ್ಕು ಲೋಟ ನೀರು ಹಾಕಿ ಕುದಿಸಿ ಹಾಲು ಮತ್ತು ಸಕ್ಕರೆ ಹಾಕಿ ಟೀ ಬದಲು ಕುಡಿಯುವುದು ಒಳ್ಳೆಯದು. ಆಗ ತಾನೇ ಕರೆದ ಹಾಲಿಗೆ ಸ್ವಲ್ಪ ನಿಂಬೆ ಹಣ್ಣಿನ ರಸ ಹಾಕಿ ಕುಡಿದರೆ ಮೂಲವ್ಯಾಧಿ ಗುಣಮುಖವಾಗುವುದು. ಮೂಲವ್ಯಾಧಿ ಇರುವವರು ದಿನವೂ ಮಲಗುವ ಮುನ್ನ ಏಲಕ್ಕಿ ಪುಡಿಯೊಂದಿಗೆ ಬಾಳೆಹಣ್ಣನ್ನು ಸೇವಿಸುವುದರಿಂದ ಗುಣವಾಗುತ್ತದೆ. ಮಾವಿನ ಗೊರಟ ಸಂಗ್ರಹಿಸಿ ನೆರಳಲ್ಲಿ ಒಣಗಿಸಿ ಪುಡಿಮಾಡಿ ಇಡುತ್ತಾರೆ. ಈ ಪುಡಿ ಆಯುರ್ವೇದ ಅಂಗಡಿಯಲ್ಲೂ ಸಿಗುತ್ತದೆ. ಅದರ ಪುಡಿಯನ್ನು ದಿನಕ್ಕೆ ಎರಡು ಚಮಚದಂತೆ ಮುಂಜಾನೆ ಮತ್ತು ಸಂಜೆ ಜೇನಿನೊಡನೆ ಸೇವಿಸಿ. ರಕ್ತಸ್ರಾವವಿದ್ದ ಮೂಲವ್ಯಾಧಿಗೆ ನೇರಳೆ ಹಣ್ಣು ಬಹಳ ಒಳ್ಳೆಯದು. ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಮೂಲವ್ಯಾಧಿ ಗುಣವಾಗುವುದು.

ಮೂಲಂಗಿಯನ್ನು ತುರಿದು ಮೊಸರಿನಲ್ಲಿ ಕಲೆಸಿ ಸ್ವಲ್ಪ ಉಪ್ಪು ಹಾಗೂ ನಿಂಬೆರಸ ಬೆರೆಸಿ ಒಗ್ಗರಣೆ ಕೊಟ್ಟು, ಈ ಪದಾರ್ಥವನ್ನು ಅನ್ನದ ಜೊತೆ ತಿನ್ನುವುದು ಒಳ್ಳೆಯದು. ಮೂಲಂಗಿಯನ್ನು ಅರೆದು ಪೇಸ್ಟ್ ಮಾಡಿ ಹಾಲಿನಲ್ಲಿ ಮಿಶ್ರ ಮಾಡಿ ಅದನ್ನು ಗುದದ್ವಾರದ ಸುತ್ತಲೂ ಹಚ್ಚಿದರೆ ಊತ ಕಡಿಮೆ ಆಗುತ್ತದೆ. ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಗಿಡವನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚ ಪುಡಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ ಒಳ್ಳೆಯದು. ತ್ರಿಫಲಾ ಕಷಾಯ ಮೂಲವ್ಯಾಧಿ ಗುಣಪಡಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ಎಂಟು ಲೋಟ ನೀರು ದಿನಕ್ಕೆ ಕುಡಿಯುವುದು ಕಡ್ಡಾಯ. ನೀರು ಕಡಿಮೆ ಕುಡಿಯುವವರಿಗೇ ಮಲಬದ್ಧತೆ ಆಗುತ್ತದೆ.ಬಿಲ್ವಪತ್ರದ ರಸವನ್ನು ನಿತ್ಯ ಸೇವಿಸುವುದು ಕೂಡ ಮೂಲವ್ಯಾಧಿಗೆ ಪರಿಣಾಮಕಾರಿಯಾದ ಔಷಧಿಯಾಗಿದೆ.

ಮೂಲವ್ಯಾಧಿ ಕಾಯಿಲೆಗೆ ಮದರಂಗಿ ಎಲೆಗಳು ಮನೆಯ ಮದ್ದಿನಲ್ಲೇ ರಾಮ ಬಾಣ. ಮದರಂಗಿ ಎಲೆಗೆ ಅರ್ಧ ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ಪ್ರಮಾಣದಲ್ಲಿ ನೀರನ್ನು ಬೆರಸಿ ದಿನ ಮುಂಜಾನೆ ಕುಡಿದರೆ ಮೂಲವ್ಯಾಧಿ ಸಮಸ್ಯೆ ಗುಣವಾಗುತ್ತದೆ ಹಾಗೂ ರಕ್ತದ ಕೊರತೆ ನಿವಾರಣೆ ಆಗುತ್ತದೆ.

Leave a Reply

Your email address will not be published. Required fields are marked *