ಕೃಷಿ ನಮ್ಮ ದೇಶದ ಮುಖ್ಯ ಕಸುಬಾಗಿದೆ ರೈತನನ್ನು ದೇಶದ ಬೆನ್ನೆಲುಬು ಎಂದು ಕರೆಯುತ್ತಾರೆ. ಕೃಷಿಯ ಅಭಿವೃದ್ಧಿ ಆಗದ ಹೊರತು ದೇಶದ ಅಭಿವೃದ್ಧಿ ಆಗದು, ಅದೆಷ್ಟೊ ಜನರು ಕೃಷಿಯಿಂದ ದೂರ ಉಳಿಯುತ್ತಿದ್ದಾರೆ ಯುವಕರನ್ನು ಕೃಷಿಯತ್ತ ಆಕರ್ಷಿಸಲು ಕೆಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

ಒಂದು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಕೃಷಿಯ ಪಾತ್ರ ದೊಡ್ಡದು ಅದರಲ್ಲೂ ಭಾರತ ದೇಶದ ಶೇಕಡಾ 70 ರಷ್ಟು ಜನ ಕೃಷಿಯನ್ನು ನಂಬಿಕೊಂಡು ಜೀವನ ನಡೆಸುತ್ತಾರೆ ಹೀಗಿರುವಾಗ ಕೃಷಿಯನ್ನು ಮಾಡುವ ರೈತರ ಅಭಿವೃದ್ಧಿ ಕೂಡ ಬಹಳ ಮುಖ್ಯವಾಗಿರುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಬೇರೆ ಬೇರೆ ರಾಜ್ಯ ಸರ್ಕಾರಗಳು ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರುತ್ತದೆ. ಅವುಗಳಲ್ಲಿ ಹೆಚ್ಚು ಪ್ರಚಲಿತದಲ್ಲಿ ಇರುವುದು ಫಸಲ್ ಬೀಮಾ ಯೋಜನೆ.

ಫಸಲ್ ಬೀಮಾ ಯೋಜನೆ ಇದು ರೈತರಿಗೆ ವಿಮಾ ರಕ್ಷಣೆಯ ಜೊತೆಗೆ ಸಹಾಯಧನ ನೀಡುವ ಯೋಜನೆಯಾಗಿದ್ದು ಈ ಹಿಂದೆ ಜಾರಿಯಲ್ಲಿ ಇರುವ ಯೋಜನೆಯಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಿದೆ. ರೈತರಿಗೆ ಸಹಾಯಧನ ನೀಡುವ ಮೂಲಕ ರೈತರ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲಾಗುತ್ತದೆ. ರೈತರು ಕೃಷಿ ಚಟುವಟಿಕೆಗಳನ್ನು ಮಾಡುವಾಗ ಎಲ್ಲ ಸಮಯದಲ್ಲಿ ಉತ್ತಮ ಫಸಲು ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಬಂಡವಾಳ ಹಾಕಿದ್ದು ನಷ್ಟವಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗುತ್ತದೆ ಇದೆ ಕಾರಣಕ್ಕೆ ಫಸಲು ಬಿನ ಯೋಜನೆಯ ಅಡಿಯಲ್ಲಿ ರೈತರಿಗೆ ವಿಮಾ ಸೌಲಭ್ಯ ಒದಗಿಸಲಾಗುತ್ತದೆ.

ಇದನ್ನು ಪಡೆದುಕೊಳ್ಳಲು ಕೆಲವು ಅರ್ಹತಾ ಪಟ್ಟಿ ಹಾಗೂ ಕೆಲವು ದಾಖಲಾತಿಗಳು ಅವಶ್ಯವಾಗಿದೆ. ರೈತರ ಪಹಣಿ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಅಡ್ರೆಸ್ ಪ್ರೂಫ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಪಾಸ್ಪೋರ್ಟ್ ಅಳತೆಯ ಫೋಟೊ ಬೇಕಾಗುತ್ತದೆ.

ಈ ಸೌಲಭ್ಯವನ್ನು ಪಡೆಯಲು ಸರ್ಕಾರದ https://pmfby.gov.in/ ಈ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಒಂದು ಎಕರೆ ಜಮೀನು ಇರುವವರು ಬೀಮಾ ಫಸಲ್ ಯೋಜನೆಯಡಿ ವಿಮಾ ಸೌಲಭ್ಯ ಮತ್ತು ಸಹಾಯಧನ ಪಡೆದುಕೊಳ್ಳಬಹುದಾಗಿದೆ. ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಸಂಭವಿಸಿದರೆ ರೈತರು ವಿಮೆ ಸೌಲಭ್ಯ ಪಡೆಯಬಹುದು. ಈ ಯೋಜನೆಯ ಅಡಿಯಲ್ಲಿ ಇತ್ತೀಚಿಗೆ ಹದಿಮೂರು ಸಾವಿರ ರೂಪಾಯಿ ಸಹಾಯಧನವನ್ನು ಪ್ರಾಕೃತಿಕ ವಿಕೋಪದಿಂದ ಬೆಳೆ ಹಾನಿ ಅನುಭವಿಸಿದ ರೈತರಿಗೆ ವಿತರಣೆ ಮಾಡಲಾಗಿದೆ. ರೈತರಿಗಾಗಿ ಜಾರಿಗೆ ಬಂದ ಬೀಮಾ ಫಸಲ್ ಯೋಜನೆಯ ಪ್ರಯೋಜನವನ್ನು ರೈತರು ಪಡೆಯಬೇಕು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

Leave a Reply

Your email address will not be published. Required fields are marked *