SSLC ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

0 4

ಕರ್ನಾಟಕ ಅಂಚೆ ಇಲಾಖೆಯಿಂದ 2021 ರ ನೇಮಕಾತಿಗಾಗಿ ಇತ್ತೀಚಿನ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ ಇದೊಂದು ಹೊಸ ಜಾಬ್ ಆಗಿದೆ. ಅಂದರೆ ಇನ್ನೂ ಯಾವುದೇ ನೇಮಕಾತಿ ನಡೆದಿರುವುದಿಲ್ಲ. ಈ ಒಂದು ಕರ್ನಾಟಕ ಅಂಚೆ ಇಲಾಖೆಯ ಕೆಲಸಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಇದಕ್ಕೆ ಬೇಕಾದ ದಾಖಲೆಗಳು ಏನೂ? ಈ ಎಲ್ಲಾ ಮಾಹಿತಿಯ ಕುರಿತು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಮೊದಲಿಗೆ ಯಾರೆಲ್ಲ ಇದಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಏನೂ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆ ಹತ್ತನೇ ತರಗತಿ ತೇರ್ಗಡೆ ಆಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇತ್ತೀಚಿನ ಭಾವ ಚಿತ್ರದ ಜೊತೆಗೆ ಸ್ವವಿವರಗಳನ್ನು ತುಂಬಿ , ಶೈಕ್ಷಣಿಕ ಪ್ರಮಾಣ ಪಾತ್ರದ ನಕಲು ಪ್ರತಿಗಳೊಂದಿಗೆ ಕರ್ನಾಟಕ ಅಂಚೆ ಇಲಾಖೆ ಕರೆದ ಈ ಹೊಸ ಕೆಲಸದ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಇನ್ನು ನೇರ ಸಂದರ್ಶನ ನಡೆಯುವ ಸ್ಥಳ ಎಲ್ಲಿ ಎಂದು ನೋಡುವುದಾದರೆ, K C ಪಾರ್ಕ್ ಹತ್ತಿರದ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯ ಇಲ್ಲಿ ಜುಲೈ ೧೬ ರಂದು ಬೆಳಗ್ಗೆ ೧೧ ಗಂಟೆಗೆ ಸಂದರ್ಶನದಲ್ಲಿ ಪಾಲ್ಗೊಳ್ಳಲು ತಿಳಿಸಲಾಗಿದೆ.

ಇನ್ನು ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳ ವಯೋಮಿತಿ ಎಷ್ಟು ಎಂದು ನೋಡುವುದಾದರೆ , ಕನಿಷ್ಠ ಹದಿನೆಂಟು ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ ಐವತ್ತು ವರ್ಷದ ಒಳಗೆ ಇರಬೇಕು. ಕೆಲಸ ಇರುವುದು ಧಾರವಾಡ ಅಂಚೆ ಕಚೇರಿಯಲ್ಲಿ ಆಗಿರುತ್ತದೆ. ಧಾರವಾಡ ವಿಭಾಗದ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಅಗತ್ಯ ಇರುವ ಪ್ರತಿನಿಧಿಗಳನ್ನು ನೇರವಾಗಿ ಸಂದರ್ಶನ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಕೆಲಸಕ್ಕೆ ಮಾಜಿ ಸೈನಿಕರು , ನಿರುದ್ಯೋಗಿಗಳು , ಸ್ವಯಂ ಉದ್ಯೋಗ ನಿರತ ಉದ್ಯೋಗಿಗಳು , ಮಹಿಳಾಮಂಡಲ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ನಿವೃತ್ತ ಪ್ರಧಾನ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅವರು ಮಾಡಿದ ವ್ಯವಾಹಾರಕ್ಕೆ ಸಂಬಂಧಿಸಿದ ಹಾಗೆ ಕಮೀಶನ್ ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಗದಿತ ವೇತನ ಇರುವುದಿಲ್ಲ. ಇದಕ್ಕೆ ಆಯ್ಕೆ ಆಗುವ ಅಥವಾ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಮಾ ಕಂಪನಿ ಮತ್ತು ಸಂಘ ಸಂಸ್ಥೆಗಳಲ್ಲಿ ಏಜೆಂಟ್ ಆಗಿರಬಾರದು. ಅರ್ಜಿ ಸಲ್ಲಿಸಿ ಆಯ್ಕೆ ಆದಂತಹ ಅಭ್ಯರ್ಥಿಗಳು ೫,೦೦೦ ರೂಪಾಯಿ ಹಣವನ್ನು ಭದ್ರತಾ ಠೇವಣಿಯಾಗಿ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ನೀಡಬೇಕಾಗುತ್ತದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಂಚೆ ಇಲಾಖೆಯ ಮೇಲಧಿಕಾರಿಗಳ ಬಳಿ ಮಾಹಿತಿ ಪಡೆದುಕೊಳ್ಳಬಹುದು. ಹಾಗೆ ಸಂದರ್ಶನ ನಡೆಯುವ ದಿನಾಂಕ ಇದೆ ತಿಂಗಳ ೧೬ ರಂದು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.