ಎಲ್ಲಾ ಬಂದ್ರೂ ಪುನೀತ್ ಪರ್ವ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸುದೀಪ್ ಯಾಕೆ ಬರಲಿಲ್ಲ ಗೊತ್ತಾ, ಇಲ್ಲಿದೆ ಅಸಲಿ ಕಾರಣ

0 0

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರೋ ಹಾಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ ಆಗಿರುವ ಗಂಧದಗುಡಿ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮವನ್ನು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಪುನೀತ್ ಪರ್ವ ಎನ್ನುವ ವಿಶೇಷವಾದ ನಾಮಕರಣವನ್ನು ಕೂಡ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತನಾಮರನ್ನು ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು.

ಈ ಕಾರ್ಯಕ್ರಮಕ್ಕೆ ಸೂರ್ಯ ರಾಕಿಂಗ್ ಸ್ಟಾರ್ ಯಶ್ ಅಖಿಲ್ ಅಕ್ಕಿನೇನೀ ಶರತ್ ಕುಮಾರ್ ಧನಂಜಯ ದುನಿಯಾ ವಿಜಯ್ ರಕ್ಷಿತ್ ಶೆಟ್ಟಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಹಲವಾರು ಖ್ಯಾತನಾಮರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಕಾಶ್ ರಾಜ್ ಅವರು ಅಪ್ಪು ಅವರ ಹೆಸರಿನಲ್ಲಿ ಉಚಿತ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿರುವ ಕುರಿತಂತೆ ಕೂಡ ಮಾಹಿತಿ ನೀಡಿ ಇದರಲ್ಲಿ ಮೆಗಾಸ್ಟಾರ್ ಚಿರಂಜೀವಿ ಸೂರ್ಯ ಹಾಗೂ ಇನ್ನಿತರರು ನೀಡಿದ ಸಹಾಯವನ್ನು ಕೂಡ ನೆನಪಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೇವಿಎನ್ ಪ್ರೊಡಕ್ಷನ್ ಜೊತೆಗೆ ಸೇರಿ ರಾಕಿಂಗ್ ಸ್ಟಾರ್ ಯಶ್ ಅವರು ಉಳಿದ ಎಲ್ಲಾ ಜಿಲ್ಲೆಗಳಿಗೂ ನಾವೇ ನಮ್ಮ ಫೌಂಡೇಶನ್ ಮೂಲಕ ಉಚಿತ ಆಂಬುಲೆನ್ಸ್ ಅನ್ನು ನೀಡುತ್ತೇವೆ ಎಂಬುದಾಗಿ ಕೂಡ ಘೋಷಿಸಿದ್ದಾರೆ.

ಇನ್ನು ಕಾರ್ಯಕ್ರಮದ ಹಲವಾರು ದಿನಗಳಿಗೂ ಮುನ್ನ ಈ ಕಾರ್ಯಕ್ರಮಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಆಗಮಿಸುತ್ತಾರೆ ಎಂಬುದಾಗಿ ಸುದ್ದಿ ಆಗಿತ್ತು. ಆದರೆ ಇಬ್ಬರೂ ಕೂಡ ಈ ಕಾರ್ಯಕ್ರಮಕ್ಕೆ ಬರದೇ ಇರುವುದು ಎಲ್ಲರ ಬೇಸರಕ್ಕೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ಕೆಲವೊಂದು ಮೂಲಗಳ ಪ್ರಕಾರ ಇವರಿಬ್ಬರೂ ಈ ಕಾರ್ಯಕ್ರಮದ ಮೂಲಕ ಆಗುವುದು ಬೇಡ ಎಂಬುದಾಗಿ ನಿರ್ಧರಿಸಿ ಬಂದಿಲ್ಲ ಎಂಬುದಾಗಿ ಹೇಳಲಾಗುತ್ತಿದೆ.

ಇನ್ನು ಕೆಲವು ಸುದ್ದಿಗಳ ಪ್ರಕಾರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಹಲವಾರು ದಿನಗಳ ಹಿಂದೆಯೇ ತಮ್ಮ ಪತ್ನಿಯ ಜೊತೆಗೆ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ವಿದೇಶಕ್ಕೆ ತೆರಳಿದ್ದಾರೆ ಎಂಬುದಾಗಿ ಸುದ್ದಿ ಇದೆ. ಇನ್ನು ದರ್ಶನ್ ರವರ ವಿಚಾರಕ್ಕೆ ಬರುವುದಾದರೆ ಕ್ರಾಂತಿ ಸಿನಿಮಾದ ಚಿತ್ರೀಕರಣ ಅಥವಾ ಬನಾರಸ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಹುಬ್ಬಳ್ಳಿಗೆ ಹೋಗಿದ್ದಾರೆ ಎಂಬುದಾಗಿ ಕೂಡ ಸುದ್ದಿ ಇದೆ. ಅದೇನೇ ಇರಲಿ ಗೆಳೆಯನ ಕೊನೆಯ ಕಾರ್ಯಕ್ರಮಕ್ಕೆ ಜೊತೆಯಾಗಿದ್ದರೆ ನಿಜಕ್ಕೂ ಕೂಡ ಇಡೀ ಕರ್ನಾಟಕವೇ ಖುಷಿ ಪಡುತ್ತಿತ್ತು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

Leave A Reply

Your email address will not be published.