ಅಪ್ಪು ನಿಧಾನಕ್ಕೂ ಮುನ್ನ ಕಾರಿನಲ್ಲಿ ನಡೆದ ಘಟನೆಯ ಸತ್ಯಾಂಶ ತಿಳಿಸಿದ ಡ್ರೈವರ್ ಬಾಬು

0 2

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಿಧನರಾಗಿರುವುದು ಎಲ್ಲರಿಗೂ ತುಂಬಾ ಆಶ್ಚರ್ಯದ ವಿಷಯವಾಗಿದೆ ಯಾವಾಗಲೂ ಆರೋಗ್ಯದ ಬಗ್ಗೆ ತಮ್ಮ ದೇಹದ ಬಗ್ಗೆ ಕಾಳಜಿ ವಹಿಸುತ್ತಿದ್ದ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿರುವ ವಿಷಯವನ್ನು ನಂಬುವುದಕ್ಕೆ ಯಾರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಪುನೀತ್ ಅವರ ನಿಧನಕ್ಕೆ ಮೊದಲು ಹದಿನೈದರಿಂದ ಇಪ್ಪತ್ತು ನಿಮಿಷ ಮುನ್ನ ನಿಜಕ್ಕೂ ನಡೆದಿರುವ ಸತ್ಯ ಘಟನೆಯ ಬಗ್ಗೆ ಕಾರು ಚಾಲಕ ಬಿಚ್ಚಿಟ್ಟ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.

ಕರ್ನಾಟಕದ ಕಂದ ಕನ್ನಡದ ಹೂವು ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ಹೇಳಿಕೊಳ್ಳಲಾಗದಷ್ಟು ದುಃಖವನ್ನು ಎಲ್ಲರಿಗೂ ಕೊಟ್ಟಿದ್ದಾರೆ. ಪುನೀತ್ ರಾಜಕುಮಾರ್ ಅವರ ನಿಧನಕ್ಕು ಮೊದಲು ಹದಿನೈದರಿಂದ ಇಪ್ಪತ್ತು ನಿಮಿಷ ಮೊದಲು ನಡೆದ ನೈಜ ಘಟನೆಯನ್ನು ಪುನೀತ್ ಅವರ ಕಾರು ಚಾಲಕ ಸ್ಪಷ್ಟವಾಗಿ ತಿಳಿಸಿದ್ದಾರೆ. ಪುನೀತ್ ಅವರ ನಿಧನದ ವಿಷಯ ತಿಳಿದ ಕೂಡಲೇ ಎಲ್ಲರೂ ಶಾಕ್ ಆಗಿದ್ದರು. ಅಕ್ಟೋಬರ್ ಇಪ್ಪತ್ತೊಂಬತ್ತರ ಬೆಳಿಗ್ಗೆ ಪುನೀತ್ ರಾಜಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆ ಸಮಯದಲ್ಲಿ ಅವರ ಜೊತೆ ಇದ್ದವರು ಕೆಲವೇ ಕೆಲವು ಮಂದಿ ಮಾತ್ರ ಅದರಲ್ಲಿ ಅವರ ಕಾರು ಚಾಲಕ ಬಾಬು ಕೂಡ ಒಬ್ಬರು.

ಪುನೀತ್ ರಾಜ್ ಕುಮಾರ್ ಅವರು ಫಿಟ್ನೆಸ್ ಬಗ್ಗೆ ಬಹಳ ಕಾಳಜಿ ವಹಿಸುತ್ತಿದ್ದ ನಟ. ಪುನೀತ್ ರಾಜಕುಮಾರ್ ಯಾವಾಗಲೂ ಆರೋಗ್ಯದಿಂದಿರುತ್ತಿದ್ದರು ಅವರಿಗೆ ಹೃದಯಾಘಾತ ಆಗಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಅಕ್ಟೋಬರ್ ಇಪ್ಪತ್ತೊಂಬತ್ತರಂದು ಇಡೀ ಕರುನಾಡ ಪಾಲಿಗೆ ಕರಾಳ ದಿನ. ಅಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಕೇಳಿಬಂದಿತ್ತು ಅದಾದನಂತರ ಅವರ ಜೊತೆಯಲ್ಲಿ ಇದ್ದವರು ಕೆಲವೇ ಕೆಲವು ಮಂದಿ. ಅವರಲ್ಲಿ ಕಾರು ಚಾಲಕ ಬಾಬು ಕೂಡ ಒಬ್ಬರು ಅಂದು ನಿಜಕ್ಕೂ ಏನಾಯಿತು ಎಂಬುದನ್ನು ಅವರು ವಿವರಿಸಿದ್ದಾರೆ.

ಮನೆಯಲ್ಲಿದ್ದಾಗ ಪುನೀತ್ ರಾಜಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಾಗ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಆ ಗಟನೆಯ ಸಿಸಿಟಿವಿ ದೃಶ್ಯ ಕೂಡ ಲಭ್ಯವಾಗಿದೆ.ಆ ಸಂದರ್ಭದ ಕುರಿತು ಕಾರುಚಾಲಕ ಬಾಬು ಪ್ರತಿಕ್ರಿಯೆ ನೀಡಿದ್ದಾರೆ.ಪುನೀತ್ ರಾಜಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಾಗ ಐದು ನಿಮಿಷದಲ್ಲಿ ಮನೆಯಿಂದ ಆಸ್ಪತ್ರೆಗೆ ಹೋಗಿದ್ದೆವು ವೈದ್ಯ ರಮಣರಾವ್ ಅವರ ಕ್ಲಿನಿಕ್ಕಿಗೆ ಹೋಗಿದ್ದೆವು.

ಕಾರಿನಲ್ಲಿ ಹೋಗುವಾಗಲೂ ಪುನೀತ್ ರಾಜಕುಮಾರ್ ಅವರು ಮೊಬೈಲ್ನಲ್ಲಿ ಮಾತನಾಡುತ್ತಿದ್ದರು ಭಜರಂಗಿ 2 ಚಿತ್ರದ ರೆಸ್ಪಾನ್ಸ್ ಬಗ್ಗೆ ಫಿಲಂ ಡಿಸ್ಟ್ರಿಬ್ಯೂಟರ್ ಮಂಜುನಾಥ ಅವರ ಜೊತೆ ಮಾತನಾಡುತ್ತಿದ್ದರು ಎಂದು ಬಾಬು ಹೇಳಿದ್ದಾರೆ. ರಮಣರಾವ್ ಅವರ ಆಸ್ಪತ್ರೆಯಿಂದ ಕೇವಲ ಹತ್ತು ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಹೋದೆವು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಪುನೀತ್ ಅವರು ತುಂಬಾ ಸುಸ್ತಾಗಿದ್ದರು ಎಂದು ಬಾಬು ವಿವರಿಸಿದ್ದಾರೆ.

ಅಂದರೆ ನಿಧನರಾಗುವುದಕ್ಕು ಹದಿನೈದರಿಂದ ಇಪ್ಪತ್ತು ನಿಮಿಷ ಮೊದಲು ಪುನೀತ್ ಚೆನ್ನಾಗಿದ್ದರು. ಅಣ್ಣ ಶಿವರಾಜ್ ಕುಮಾರ್ ನಟನೆಯ ಸಿನಿಮಾಗೆ ಯಾವ ರೀತಿಯ ರೆಸ್ಪಾನ್ಸ್ ಸಿಗುತ್ತಿದೆ ಎನ್ನುವುದನ್ನು ಫೋನ್ ಮಾಡಿ ತಿಳಿದುಕೊಳ್ಳುವಷ್ಟರ ಮಟ್ಟಿಗೆ ಅವರು ಆಕ್ಟಿವ್ ಆಗಿದ್ದರು. ಆದರೆ ಏಕಾಏಕಿ ಸಾವು ಸಂಭವಿಸಿರುವುದು ಮಾತ್ರ ವಿಪರ್ಯಾಸ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪುಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು. ಈಗ ಅವರ ಸಮಾಧಿಯ ದರ್ಶನಕ್ಕೂ ಕೂಡ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.