ಅರಬ್ಬೀ ಸಮುದ್ರದಲ್ಲಿ ಹವಾಮಾನ ಬದಲಾವಣೆಯ ಕಾರಣ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಜಾಸ್ತಿ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜನವರಿ 9ರ ವರೆಗು ಯೆಲ್ಲೋ ಅಲರ್ಟ್ ಮಾಡಲಾಗಿದ್ದು, ಈಗಾಗಲೇ ರಾಜ್ಯ ರಾಜಧಾನಿಯಾದ ಬೆಂಗಳೂರು, ಮೈಸೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಶೀತ ಗಾಳಿ ಜಾಸ್ತಿಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ 22 ಜಿಲ್ಲೆಗಳು ಈ ವೇಳೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಲಾಗಿದೆ.

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣದ ಒಳಗಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಎದುರಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತಿದೆ. ಕರಾವಳಿ ಹಾಗೂ ಒಳಗಿರುವ ಜಿಲ್ಲೆಗಳಲ್ಲಿ ಭಾರಿ ಮಳೆ ಉಂಟಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಿಕ್ಕಮಗಳೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಕಲಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯ ಮಳೆ, ಮೋಡ ಕವಿದ ವಾತಾವರಣ ಇರಲಿದೆ, ರಾತ್ರಿ ವೇಕೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ 18℃, ಗರಿಷ್ಠ 26℃ ಟೆಂಪರೇಚರ್ ಇರಲಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಕಾರಣ ನಮ್ಮ ರಾಜ್ಯದಲ್ಲಿ ದಿಢೀರ್ ಮಳೆ ಶುರುವಾಗಿದೆ. ನಮ್ಮ ರಾಜ್ಯ ಅರಬ್ಬೀ ಸಮುದ್ರಕ್ಕೆ ಹತ್ತಿರದಲ್ಲಿದೆ, ಪ್ರಸ್ತುತ ಅಲ್ಲಿ ಸುಳಿಗಾಳಿ ಹೆಚ್ಚಾಗಿದೆ. ಚಳಿ ಶೀತ ಜಾಸ್ತಿ ಇರುವುದರಿಂದ ಮಳೆ ಜಾಸ್ತಿಯಾಗಿದೆ.

ಕಳೆದ ವರ್ಷ ನಮ್ಮ ರಾಜ್ಯದಲ್ಲಿ ಸರಿಯಾಗಿ ಮಳೆ ಇಲ್ಲದ ಕಾರಣ ರೈತರಿಗೆ ಸಮಸ್ಯೆ ಉಂಟಾಗಿತ್ತು. ಆದರೆ ಈ ವರ್ಷ ಆ ರೀತಿ ಆಗುವುದಿಲ್ಲ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ. 2024ರಲ್ಲಿ ಮಾರ್ಚ್ ನಲ್ಲಿ ಮುಂಗಾರು ಶುರುವಾಗಲಿದ್ದು, ಮಳೆ ಉತ್ತಮವಾಗಿ ಇರಲಿದೆ. ರೈತರಿಗೂ ಅನುಕೂಲ ಆಗಲಿದೆ ಎಂದು ತಿಳಿದುಬಂದಿದೆ.

By

Leave a Reply

Your email address will not be published. Required fields are marked *