Ration Card New Updates In Karnataka: ಈಗ ನಮ್ಮ ರಾಜ್ಯದ ಜನತೆಗೆ ಬಹಳ ಮುಖ್ಯವಾಗಿ ಬೇಕಾಗಿರುವುದು ಬಿಪಿಎಲ್ ರೇಷನ್ ಕಾರ್ಡ್. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ವಿಶೇಷವಾಗಿ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಸೌಲಭ್ಯಗಳನ್ನು ಪಡೆಯುವುದಕ್ಕೆ ಬಿಪಿಎಲ್ ರೇಷನ್ ಕಾರ್ಡ್ ಬಹುಮುಖ್ಯವಾಗಿ ಬೇಕಾಗುತ್ತದೆ. ಆಧಾರ್ ಕಾರ್ಡ್ ಗೆ ಇರುವಷ್ಟೇ ಪ್ರಾಮುಖ್ಯತೆ ರೇಷನ್ ಕಾರ್ಡ್ ಗೆ ಇದೆ ಎಂದರೆ ತಪ್ಪಲ್ಲ.

ಅದರೆ ವಿಧಾನಸಭೆ ಚುನಾವಣೆ ನಡೆಯುವುದಕ್ಕಿಂತ ಮೊದಲೇ ಬಿಪಿಎಲ್ ಕಾರ್ಡ್ ಗಾಗಿ ಸುಮಾರು 2 ರಿಂದ 3 ಲಕ್ಷ ಅರ್ಜಿ ಸಲ್ಲಿಕೆ ಆಗಿದೆ. ಆದರೆ ಎಲೆಕ್ಷನ್ ವೇಳೆ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದನ್ನು ನಿಲ್ಲಿಸಲಾಗಿತ್ತು. ಆದರೆ ಈಗಾಗಲೇ ಅರ್ಜಿ ಹಾಕಿರುವ ಜನರು ತಮಗೆ ರೇಷನ್ ಕಾರ್ಡ್ ಸಿಗದೆ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆಯಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ.

ಹಾಗಾಗಿ ಜನರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ಆದಷ್ಟು ಬೇಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನು ಸರ್ಕಾರ ಕೂಡ ಜನರು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹತೆ ಇರುವ ಎಲ್ಲರಿಗೂ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಸರ್ಕಾರ ಕೂಡ ತಿಳಿಸಿದೆ. ಇನ್ನು ಶೀಘ್ರದಲ್ಲೇ 7000 ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಹಾಗೆಯೇ ಅಧಿಕಾರಿಗಳು ಅರ್ಜಿ ಹಾಕಿರುವವರ ಮನೆಗೆ ಬಂದು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದರೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಈಗ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಕಾರಣ ಸರ್ಕಾರ ರೇಷನ್ ಕಾರ್ಡ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿದೆ. ಹೊಸ ಅರ್ಜಿಗಳನ್ನು ಕೂಡ ಸ್ವೀಕರಿಸುತ್ತಿಲ್ಲ. ಮೊದಲೇ ಅರ್ಜಿ ಸಲ್ಲಿಸಿರುವವರ ವಿಚಾರಕ್ಕೆ ಎಲ್ಲವನ್ನು ಪರಿಶೀಲಿಸಿ, 100% ಎಲ್ಲವೂ ಸರಿ ಇದೆ ಎಂದರೆ ಮಾತ್ರ ಅಂಥವರಿಗೆ ರೇಶನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.

3 ಲಕ್ಷ ರೇಷನ್ ಕಾರ್ಡ್ ಅರ್ಜಿಗಳು ಸರ್ಕಾರದ ಬಳಿ ಇದ್ದು, ಅವುಗಳನ್ನು ಕೂಲಂಕುಷವಾಗಿ ಪರಿಶೀಲನೇ ನಡೆಸುವ ಕೆಲಸ ನಡೆಯುತ್ತಿದೆ. ಆದರೆ ಈಗಿರುವ ಅರ್ಜಿಗಳನ್ನು ಪರಿಶೀಲಿಸಿ ರೇಷನ್ ಕಾರ್ಡ್ ವಿತರಣೆ ಪೂರ್ತಿಯಾಗಿ ಮುಗಿಯುವವರೆಗೂ ಹಿಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ನಡೆಯುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಜನರ ಅಪ್ಲಿಕೇಶನ್ ಗಳನ್ನು ಪರಿಶೀಲನೆ ನಡೆಸಿ, ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *