ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಾ, ನಿಮಗಾಗಿ ಇಲ್ಲಿದೆ ಸಿಹಿ ಸುದ್ದಿ

0 15

ನಮ್ಮ ದೇಶದಲ್ಲಿ ನಾವು ಯಾವುದೇ ಒಂದು ಯೋಜನೆಯ ಫಲಾನುಭವಿ ಆಗಬೇಕೆಂದರೆ ಅದಕ್ಕೆ ಪಡಿತರ ಚೀಟಿ ಅವಶ್ಯಕವಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೆ ಪಡಿತರ ಚೀಟಿ ಬಹಳ ಅವಶ್ಯಕ. ಹಾಗಾಗಿ ಪ್ರತಿಯೊಬ್ಬರಿಗೂ ಪಡಿತರ ಚೀಟಿ ಎನ್ನುವುದು ಬಹಳ ಮುಖ್ಯವಾಗಿದೆ. ನಾವಿಂದು ನಿಮಗೆ ಯಾರು ಯಾರು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು ಅವರಿಗೆ ಒಂದು ಸಿಹಿ ಸುದ್ದಿ ತಿಳಿಸುತ್ತಿದ್ದೇವೆ. ಅದೇನೆಂದರೆ ಕರ್ನಾಟಕ ರಾಜ್ಯ ಸರ್ಕಾರ ಮತ್ತೆ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ತೀರ್ಮಾನವನ್ನು ತೆಗೆದುಕೊಂಡಿದೆ.

ತುಂಬಾ ಜನ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು ಅದು ಯಾವಾಗ ಸಿಗುತ್ತದೆ ಎಂಬ ಆತಂಕ ಎಲ್ಲರನ್ನು ಕಾಡುತ್ತಿತ್ತು ಅಂಥವರಿಗೆ ಇದು ಒಂದು ಸಿಹಿಸುದ್ದಿ ಎಂದು ಹೇಳಬಹುದು. ರಾಜ್ಯ ಸರ್ಕಾರ ಮತ್ತೆ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ನಿರ್ಧಾರವನ್ನು ತೆಗೆದುಕೊಂಡಿದೆ ಈಗಾಗಲೇ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರಿಗೆ ಯಾವಾಗ ಅಪ್ರುವಲ್ ಸಿಗುತ್ತದೆ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ.

ಕರ್ನಾಟಕ ರಾಜ್ಯ ಸರ್ಕಾರ ಜನರಿಗೆ ಮತ್ತೆ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ನಿರ್ಧಾರವನ್ನು ತೆಗೆದುಕೊಂಡಿದೆ. ನಿಮಗೆಲ್ಲ ತಿಳಿದಿರುವಂತೆ ಈ ಮುಂಚೆ ಹಲವಾರು ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿದ್ದವು ಯಾಕೆಂದರೆ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವವರಲ್ಲಿ ಬಹಳಷ್ಟು ಜನರು ಸರ್ಕಾರಿ ಕೆಲಸ ಮಾಡುತ್ತಿದ್ದರು ಜೊತೆಗೆ ಕೆಲವರ ಆದಾಯ ಒಂದು ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿಗೆ ಇತ್ತು.

ಈ ಒಂದು ಕಾರಣದಿಂದಾಗಿ ಅನೇಕ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿದ್ದವು. ಆದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಮತ್ತೆ ಹೊಸ ಪಡಿತರ ಚೀಟಿಗಳನ್ನು ನೀಡಲು ನಿರ್ಧಾರ ತೆಗೆದುಕೊಂಡಿದ್ದು ನಗರ ಪ್ರದೇಶದಲ್ಲಿ ಶೇಕಡ ಐವತ್ತರಷ್ಟು ಹೊಸ ಪಡಿತರ ಚೀಟಿಯನ್ನು ನೀಡಬಹುದು ಎಂದು ನಿರ್ಧಾರವನ್ನು ತೆಗೆದುಕೊಂಡಿದೆ.

ನಿಮಗೆಲ್ಲ ತಿಳಿದಿರುವ ಹಾಗೆ ಸರ್ಕಾರ ಹೊಸ ಪಡಿತರ ಚೀಟಿಯನ್ನು ನೀಡುವುದನ್ನು ತಡೆಹಿಡಿದು ಈಗಾಗಲೇ ಒಂದು ವರ್ಷವಾಗಿದೆ. ಆದರೆ ಈಗ ನಿಧಾನವಾಗಿ ಆದ್ಯತೆಯ ಮೇರೆಗೆ ಕೆಲವೊಂದು ಭಾಗಗಳಲ್ಲಿ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಅನೇಕ ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು ಅವುಗಳ ಪರಿಶೀಲನೆಯನ್ನು ಮಾಡಿ ಅವುಗಳನ್ನು ಅಪ್ರುವ್ ಮಾಡಲಾಗುವುದು ಎಂದು ತಿಳಿಸಲಾಗಿದೆ. ನಿಮಗೆ ಯಾವ ರೀತಿಯಾಗಿ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಎಂದರೆ ಈಗಾಗಲೇ ಅರ್ಜಿ ಸಲ್ಲಿಸಿರುವವರಲ್ಲಿ ಪಡಿತರ ಚೀಟಿಯನ್ನು ಪಡೆಯುವುದಕ್ಕೆ ಯಾರು ಅರ್ಹತೆಯನ್ನು ಹೊಂದಿದ್ದಾರೆ ಅಂಥವರ ಹೆಸರನ್ನು ಪಟ್ಟಿ ಮಾಡಲಾಗುತ್ತದೆ ನಂತರ ಅದನ್ನು ಸಬ್ಮಿಟ್ ಮಾಡಿ ನಂತರದಲ್ಲಿ ಅವರಿಗೆ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.

ಹೊಸ ಪಡಿತರ ಚೀಟಿಯನ್ನು ಪಡೆಯುವ ಸಲುವಾಗಿ ಅನೇಕ ಜನರು ಅರ್ಜಿಯನ್ನು ಸಲ್ಲಿಸಿದ್ದು ಆ ಕಾರಣದಿಂದ ಸರ್ಕಾರ ಹೊಸ ಪಡಿತರ ಚೀಟಿಯನ್ನು ವಿತರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ ನೀವು ಸ್ವಲ್ಪ ಸಮಯಗಳ ವರೆಗೆ ಕಾಯಬೇಕಾಗುತ್ತದೆ. ನೀವು ಕೂಡ ಹೊಸ ಪಡಿತರ ಚೀಟಿಯನ್ನು ಪಡೆಯುವುದಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರೆ ಅದಕ್ಕಾಗಿ ಸ್ವಲ್ಪ ಸಮಯದವರೆಗೆ ಕಾಯಬೇಕಾಗುತ್ತದೆ. ಸರ್ಕಾರ ಹೊಸ ಪಡಿತರ ಚೀಟಿಯನ್ನು ವಿತರಣೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದರಿಂದ ಅರ್ಜಿ ಸಲ್ಲಿಸಿರುವವರಿಗೆ ಇದು ಖುಷಿಯ ವಿಚಾರವಾಗಿದೆ ನೀವು ಈ ಮಾಹಿತಿಯನ್ನು ನಿಮ್ಮ ಪರಿಚಯದವರಿಗೆ ಸ್ನೇಹಿತರಿಗೆ ತಿಳಿಸಿರಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.