ಒಂದು ಕಾಲದಲ್ಲಿ ಮನೆ ಮನೆಗೆ ಹೋಗಿ ಹಾಲು ಮಾರುತ್ತಿದ್ದ ಹುಡುಗ ಇಂದು ಕನ್ನಡದ ನಂಬರ್ ಒನ್ ನಟರಾಗಿ ಬೆಳೆದಿದ್ದಾರೆ. ಅವರು ಬೇರೆ ಯಾರೂ ಅಲ್ಲ ನಟ ದರ್ಶನ್. ಅವರ ಜೀವನದ ಕೆಲವು ಸ್ವಾರಸ್ಯಕರ ಘಟನೆಗಳನ್ನು ಈ ಲೇಖನದ ಮೂಲಕ ತಿಳಿಯೋಣ.

ದರ್ಶನ್ ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಾಗಿದ್ದರು ಆದರೂ ಚಿತ್ರರಂಗದಲ್ಲಿ ದರ್ಶನ್ ಅವರ ಚಿಕ್ಕವಯಸ್ಸಿನ ಜೀವನ ಅಷ್ಟೊಂದು ಸುಲಭವಾಗಿರಲಿಲ್ಲ ಅಲ್ಲದೆ ತೂಗುದೀಪ ಶ್ರೀನಿವಾಸ್ ಅವರಿಗೆ ತಮ್ಮ ಮಗ ಚಿತ್ರರಂಗಕ್ಕೆ ಬರುವುದು ಸುತಾರಾಂ ಇಷ್ಟವಿರಲಿಲ್ಲ. ಆದರೆ ದರ್ಶನ್ ಅವರಿಗೆ ಓದು ತಲೆಗೆ ಹತ್ತಲಿಲ್ಲ ಮತ್ತು ಸಿನಿಮಾರಂಗದ ಮೇಲೆ ವ್ಯಾಮೋಹ ಬೆಳೆಯಿತು.

ನಂತರ ಅವರು ಉತ್ತಮ ನಟನಾಗಬೇಕು ಎಂಬ ಮಹದಾಸೆಯಿಂದ ನೀನಾಸಂನಲ್ಲಿ ತರಬೇತಿ ಪಡೆದರು ಆದರೆ ನೀನಾಸಂನಲ್ಲಿ ಅಭ್ಯಾಸ ಮುಗಿಸಿ ಬಂದ ನಂತರ ಅವರಿಗೆ ಅವಕಾಶಗಳು ಕೂಡ ಸಿಗಲಿಲ್ಲ ಆದರೆ ದರ್ಶನ್ ಅವರು ತಮ್ಮ ಕಠಿಣ ಪರಿಶ್ರಮದಿಂದ ಇಂದು ಕನ್ನಡದ ನಂಬರ್ ಒನ್ ಸ್ಟಾರ್ ನಟರಾಗಿ ಬೆಳೆದಿದ್ದಾರೆ. ದರ್ಶನ್ ಅವರು ಮೊದಲಿಗೆ ಮೆಜೆಸ್ಟಿಕ್ ಸಿನಿಮಾದಲ್ಲಿ ನಟಿಸಿದರು. ನಂತರ ಹಲವಾರು ಸಿನಿಮಾಗಳಲ್ಲಿ ನಟಿಸಿದರು ಕೂಡ ಹೆಚ್ಚು ಖ್ಯಾತಿ ತಂದುಕೊಟ್ಟಿದ್ದು ಪ್ರೇಮ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕರಿಯಾ ಸಿನಿಮಾ. ನಂತರ ದರ್ಶನ್ ಅವರು ಪ್ರಸಿದ್ಧರಾಗತೊಡಗಿದರು. ಇಂದು ದೊಡ್ಡ ದೊಡ್ಡ ನಿರ್ದೇಶಕರು ಹಾಗೂ ನಿರ್ಮಾಪಕರು ದರ್ಶನ್ ಅವರೊಂದಿಗೆ ಕೆಲಸ ಮಾಡಬೇಕು ಎಂದು ಕಾಯುತ್ತಿರುತ್ತಾರೆ ಅಲ್ಲದೆ ದರ್ಶನ್ ಅವರು ಕೋಟಿ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ.

ದರ್ಶನ್ ಎಂದರೆ ಅಭಿಮಾನಿಗಳಿಗೆ ಹುಚ್ಚು ಪ್ರೀತಿ. ಸದಾ ಸುದ್ದಿಯಲ್ಲಿರುವ ನಟ ದರ್ಶನ್ ಅವರಿಗೆ ಹಿರಿಯರೆಂದರೆ ಬಹಳ ಗೌರವ. ಇತ್ತೀಚಿಗಷ್ಟೇ ಹಿರಿಯ ನಟಿ ಬಿ ಸರೋಜಾದೇವಿ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದಾರೆ. ಅದೇ ರೀತಿ ಇದೀಗ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದಿದ್ದಾರೆ ಅಷ್ಟೇ ಅಲ್ಲದೆ ಯಾವುದೇ ರೀತಿಯ ಸಹಾಯ ಬೇಕಾದರೂ ಸಂಕೋಚವಿಲ್ಲದೆ ನನ್ನನ್ನು ಕೇಳಿ ಎಂದು ಸಾಲುಮರದ ತಿಮ್ಮಕ್ಕ ಅವರ ಮಗನಿಗೆ ತಿಳಿಸಿದ್ದಾರೆ ಇದು ದರ್ಶನ್ ಅವರ ಅಭಿಮಾನಿಗಳಿಗೆ ಸಂತೋಷವನ್ನು ನೀಡಿದೆ.

ಪರಿಸರ ಪ್ರೇಮಿಯಾಗಿರುವ ದರ್ಶನ್ ಅವರಿಗೆ ಸಾಲುಮರದ ತಿಮ್ಮಕ್ಕ ಎಂದರೆ ಬಹಳ ಪ್ರೀತಿ. ಹೀಗಾಗಿ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾದ ಪರಿಣಾಮ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಗಲೂ ದರ್ಶನ್ ಅವರು ಆಸ್ಪತ್ರೆಗೆ ಭೇಟಿ ನೀಡುವ ಯೋಚನೆ ಮಾಡಿದ್ದರು ಆದರೆ ಶೂಟಿಂಗ್ ನಲ್ಲಿ ತೊಡಗಿದ್ದರು ಆದ್ದರಿಂದ ಈಗ ಸಾಲುಮರದ ತಿಮ್ಮಕ್ಕ ಅವರ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದಿದ್ದಾರೆ. ದರ್ಶನ್ ಅವರು ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು ಅನೇಕ ಗಿಡಮರಗಳನ್ನು ಬೆಳೆಸಿದ್ದಾರೆ ‌ಅವರ ಪರಿಸರ ಪ್ರೇಮಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *