ಸರ್ಪ ಸುತ್ತು ಸಮಸ್ಯೆಯಿಂದ ಬಳಲುತ್ತಿದ್ದೀರಾ, ಇಲ್ಲಿದೆ ಸುಲಭ ಪರಿಹಾರ

0 289

ಉಷ್ಣಕಾಲದಲ್ಲಿ ವೈರಸ್‌ಗಳಿಂದ ಬಾಧಿಸುವ ಸಮಸ್ಯೆ ಸರ್ಪಸುತ್ತಾಗಿದೆ. ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇರುವಾಗ, ಈ ರೋಗದ ವೈರಾಣು ದೇಹ ಪ್ರವೇಶಿಸಬಹುದು. ಮೊದಲೇ ದೇಹಸ್ಥಿತ ರೋಗಾಣುಗಳ ಪ್ರಭಾವಕ್ಕೆ ಒಳಗಾಗಿದ್ದರೂ ಸರ್ಪಸುತ್ತು ಕಂಡು ಬರುತ್ತದೆ.ತ್ವಚೆ ಮೇಲೆ ಕೆಂಪನೆ ಚಿಕ್ಕಚಿಕ್ಕ ನೀರ್ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು ಪಾರ್ಶ್ವದಲ್ಲಿ ಕಂಡುಬರುತ್ತವೆ.

ಈ ನೀರ್ಗುಳ್ಳೆಗಳು ನರತಂತುಗಳನ್ನು ಬಾಧಿಸುವುದರಿಂದ ಉರಿ, ನವೆ ಊಂಟಾಗುತ್ತವೆ. ನರತಂತುಗಳ ಜಾಲಗಳಲ್ಲಿ ಇವು ಪಸರಿಸುತ್ತವೆ. ಇದನ್ನು ಜನಸಾಮಾನ್ಯರು ಸರ್ಪದ ಚರ್ಮ ಅಥವಾ ಹೆಡೆಯ ರೂಪವನ್ನು ಕಲ್ಪಿಸಿಕೊಂಡು, ಸರ್ಪ ದೋಷದಿಂದ ಬರುವ ಸಮಸ್ಯೆ ಎಂದು ಪರಿಗಣಿಸುತ್ತಾರೆ, ಆದರೆ ಇದಕ್ಕೆ ಮುಖ್ಯ ಕಾರಣ ಏನು ಎಂಬುದನ್ನು ಮುಂದೆ ತಿಳಿಯೋಣ.

ದೇಹದಲ್ಲಿ ಸರ್ಪಸುತ್ತು ಗೋಚರಿಸುವ ಒಂದೆರಡು ವಾರಗಳ ಮೊದಲಿನಿಂದ ವೈರಸ್ ಸೋಂಕು ಕ್ರೀಯಾಶೀಲವಾಗಿರುತ್ತದೆ. ನಂತರ ಸಂಪೂರ್ಣವಾಗಿ ದೇಹದಲ್ಲಿ ಪ್ರಕಟಗೊಳ್ಳುತ್ತವೆ. 2 ರಿಂದ 3 ವಾರಗಳಲ್ಲಿ ನೀರ್ಗುಳ್ಳೆಗಳು ಒಡೆದು, ಕಪ್ಪು ಪದರ ಮೂಡುತ್ತದೆ. ನಂತರ ಅದು ಒಣಗಿ, ಉದುರಿ ಬೀಳುತ್ತದೆ. ಸೋಂಕು ಕ್ರೀಯಾಶೀಲವಾಗಿರುವ ಸಮಯದಲ್ಲಿ ಪೂರಕ ಲಕ್ಷಣಗಳಾಗಿ ಹೊಟ್ಟೆನೋವು, ಚಳಿ, ಜ್ವರ, ತಲೆನೋವು, ಬೆನ್ನುನೋವು, ಸಂಧಿ ನೋವು, ಸುಸ್ತು, ಸ್ನಾಯು ಸೆಳೆತ ಕಾಣಿಸಿಕೊಳ್ಳುತ್ತವೆ.

ಮುಖ ಅಥವಾ ಬಾಯಿಯಲ್ಲಾದರೆ ಮುಖ ವಕ್ರತೆ, ಕತ್ತಿನ ಗ್ರಂಥಿ ಊತ, ಕಣ್ಣಲ್ಲಾದರೆ ಕಣ್ಣಿನ ಊತ, ದೃಷ್ಟಿ ದೋಷ, ಕಿವಿಯಲ್ಲಾದರೆ ಶ್ರವಣ ದೋಷ ಕಾಣಿಸಿಕೊಳ್ಳುವುದು. ಸರ್ಪಸುತ್ತು ಆದ ಜಾಗಕ್ಕೆ ಶುದ್ಧ ಜೇನುತುಪ್ಪವನ್ನು ತೆಳ್ಳಗೆ ಲೇಪ ಮಾಡಿದರೆ ನೋವು, ತುರಿಕೆ ಕಡಿಮೆಯಾಗುತ್ತದೆ. ದಾಸವಾಳದ ದಳಗಳನ್ನು ನೀರಲ್ಲಿ ಪೇಸ್ಟ್‌ ಮಾಡಿ ಗುಳ್ಳೆಗಳ ಮೇಲೆ ಲೇಪಿಸಿದರೆ ಉರಿ, ನೋವು ಮತ್ತು ಗುಳ್ಳೆಗಳು ಶಮನವಾಗುತ್ತವೆ. ಹಸುವಿನ ಹಾಲಿಗೆ ಅರಿಶಿನ ಹಾಕಿ ಚೆನ್ನಾಗಿ ಕುದಿಸಿ ರಾತ್ರಿ ಮಲಗುವ ಮುನ್ನ ಸೇವಿಸಿದರೆ ರಕ್ತ ಶುದ್ಧಿಯಾಗಿ ಸರ್ಪಸುತ್ತು ಕಡಿಮೆಯಾಗುತ್ತದೆ.

ಹೊಂಗೆ ಮರದ ತೊಗಟೆ ಪುಡಿಯನ್ನು ನೀರಿನಲ್ಲಿ ಕಲೆಸಿ ಸರ್ಪಸುತ್ತು ಇರುವ ಜಾಗಕ್ಕೆ ಹಚ್ಚಬೇಕು. ಗರಿಕೆ ಹುಲ್ಲನ್ನು ತಣ್ಣನೆಯ ನೀರಿನಲ್ಲಿ ಹರಿದು ಹುಣ್ಣು ಇರುವ ಜಾಗಕ್ಕೆ ೨೦-೩೦ದಿನಗಳು ಹಚ್ಚಬೇಕು. ಆಡುಸೋಗೆ ಎಲೆಯನ್ನು ನೀರಿನಲ್ಲಿ ಹಾಕಿ ಕಾಯಿಸಿ ಆ ನೀರಿನಿಂದ ಸ್ನಾನ ಮಾಡಬೇಕು ಮತ್ತು ಅಕ್ಕಿ ತೊಳೆದ ನೀರಿನಲ್ಲಿ ಅಡಿಕೆಯನ್ನು ಹಾಕಿ ಅರೆದು ಶರೀರಕ್ಕೆ ಲೇಪಿಸಬೇಕು. ಇನ್ನು ರೋಗನಿರೋಧಕ ಶಕ್ತಿ ಹೆಚ್ಚಿಸಲು ಅಮೃತ ಬಳ್ಳಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆರಡು ಬಾರಿಯಂತೆ ಊಟಕ್ಕಿಂತ ಮುಂಚೆ ಸೇವಿಸಬೇಕು, ಮೇಲೆ ತಿಳಿಸಿರುವ ಎಲ್ಲಾ ಹಂತದ ಮಾರ್ಗಗಳನ್ನು ಪಾಲಿಸಿದರೆ ಸರ್ಪಸುತ್ತು ಅಥವಾ ಸುತ್ತಿನಿಂದ ಬಹುಬೇಗ ಗುಣಮುಖ ವಾಗಬಹುದು.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.