ಕೋವಿಡ್ ನೈಂಟೀನ್ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬಹಳಷ್ಟು ಜನರನ್ನು ಉದ್ಯೋಗದಿಂದ ತೆಗೆದು ಹಾಕಲಾಗಿತ್ತು. ವ್ಯಾಸಂಗ ಮುಗಿಸಿದವರು ಉದ್ಯೋಗಕ್ಕಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಲ್ಲೆಲ್ಲೂ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಲೆ ಹೋಗುತ್ತಿದೆ ಇಂತಹ ಸಮಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹಾಗಾದರೆ ಉದ್ಯೋಗ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಹೊರಗುತ್ತಿಗೆ ಆಧಾರದ ಮೇಲೆ ಬಾಗಲಕೋಟೆ ಜಿಲ್ಲೆಯ ತಾಲೂಕು ಪಂಚಾಯತಿಯಲ್ಲಿ ನೇಮಕಾತಿಯನ್ನು ಆರಂಭಿಸಲಾಗಿದೆ. ತಾಲೂಕು ಪಂಚಾಯತಿಯಲ್ಲಿ ಆಡಳಿತ ಸಹಾಯಕ ಮತ್ತು ತಾಲೂಕು ಐಇಸಿ ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಪ್ರಕಾರ ವೇತನ ನೀಡಲಾಗುತ್ತದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಲು ಬರುವುದಿಲ್ಲ. ಅರ್ಜಿ ಫಾರ್ಮ್ ಪಡೆದು ಅರ್ಜಿಯನ್ನು ತುಂಬಿ ಅಗತ್ಯ ದಾಖಲಾತಿಗಳನ್ನು ಅಜಯ್ ಸೂಲಿಕೇರಿ ಐಇಸಿ ಜಿಲ್ಲಾ ಪಂಚಾಯತ್ ಆಫೀಸ್ ಬಾಗಲಕೋಟೆ ಅಲ್ಲಿಗೆ ಸೆಪ್ಟೆಂಬರ್ 15 ನೇ ತಾರೀಖಿನ ಒಳಗಡೆ ಸಲ್ಲಿಸಬೇಕು. ಖಾಲಿ ಇರುವ ಹುದ್ದೆಗಳ ಸಂಖ್ಯೆ 10.

ಅಪ್ಲಿಕೇಷನ್ ಸಲ್ಲಿಸಲು ಯಾವುದೆ ರೀತಿಯಲ್ಲಿ ಫಿ ತುಂಬುವ ಅವಶ್ಯಕತೆ ಇರುವುದಿಲ್ಲ. ಬಾಗಲಕೋಟೆಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೆಲವು ಅರ್ಹತೆಗಳು ಇರಬೇಕು. ಅಭ್ಯರ್ಥಿಯು ಬಿಕಾಂ ಡಿಗ್ರಿ ಓದಿರಬೇಕು ಅಥವಾ ಮಾಸ್ಟರ್ ಡಿಗ್ರಿ ಇನ್ ಮಾಸ್ ಕಮ್ಯುನಿಕೇಷನ್ ಮೀಡಿಯಾ ಓದಿರಬೇಕು ಮತ್ತು ಅಭ್ಯರ್ಥಿಗೆ 18 ವರ್ಷ ವಯಸ್ಸಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಅನುಭವ ಇರಬೇಕು ಒಂದು ವೇಳೆ ಅನುಭವ ಇಲ್ಲದೆ ಇದ್ದರೂ ಅರ್ಜಿ ಸಲ್ಲಿಸಬಹುದು.

ಪಂಚಾಯತ್ ನಿಂದ ಪಂಚಾಯತ್ ಕಾರ್ಯದರ್ಶಿ ಮತ್ತು ಎಸ್ ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 6406 ಪೋಸ್ಟ್ ಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸೆಕೆಂಡ್ ಪಿಯುಸಿ ಓದಿರಬೇಕು. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3827 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ರೂಪಾಯಿಯಿಂದ 42 ಸಾವಿರ ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಶೇಕಡ 30ರಷ್ಟು ನೇರ ನೇಮಕಾತಿ ಕೋಟಾದ ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 2179 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ರೂಪಾಯಿಯಿಂದ 42 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲಾ ನಿರುದ್ಯೋಗ ಯುವಕರಿಗೆ ತಿಳಿಸಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *