ಖಾಲಿ ಹೊಟ್ಟೆಯಲ್ಲಿ ತುಳಸಿಎಲೆ ತಿನ್ನುವುದರಿಂದ ಆಗುವ 5 ಲಾಭಗಳಿವು ತಿಳಿಯಿರಿ

0 1

ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಪೂಜೆ ಮಾಡುತ್ತಾರೆ, ಭಾರತದಲ್ಲಿ ಅದರಲ್ಲೂ ಹಿಂದೂಗಳು ತುಳಸಿಯನ್ನು ತುಂಬಾ ಪವಿತ್ರವೆಂದು ಭಾವಿಸುವರು. ತುಳಸಿ ಗಿಡದಲ್ಲಿ ದೇವಾನುದೇವತೆಗಳು ನೆಲೆಸಿರುವರು ಎಂದು ಪುರಾಣಗಳು ಕೂಡ ಹೇಳಿವೆ. ಅದೇ ರೀತಿಯಲ್ಲಿ ತುಳಸಿ ಗಿಡವನ್ನು ಪುರಾತನ ಕಾಲದಿಂದಲೂ ಆಯುರ್ವೇದ ದಲ್ಲಿ ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ. ತುಳಸಿ ಎಲೆಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಇದೆ ಎಂದು ಹೇಳಲಾಗುತ್ತದೆ. ಈ ಲೇಖನದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನು ತಿನ್ನುವುದರಿಂದ ಹಾಗೂ ತುಳಸಿ ನೀರು ಕುಡಿದರೆ ಸಿಗುವ ಲಾಭಗಳ ಬಗ್ಗೆ ನಾವು ನಿಮಗೆ ತಿಳಿಸಿಕೊಡಲಿದ್ದೇವೆ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ತುಳಸಿ ಎಲೆಗಳನ್ನು ಪ್ರತಿದಿನವೂ ಸೇವಿಸಿದರೆ ಜೀರ್ಣಕ್ರಿಯೆ ವ್ಯವಸ್ಥೆಯು ಆರೋಗ್ಯವಾಗಿರುವುದು, ಜೊತೆಗೆ ಬಾಯಿಯ ದುರ್ವಾಸನೆ ಮತ್ತು ಇತರ ಸಮಸ್ಯೆಗಳು ನಿವಾರಣೆಯಾಗುವುದು ಹಾಗೂ ಇದು ಪ್ರತಿರೋಧಕ ವ್ಯವಸ್ಥೆ ಬಲಪಡಿಸುವುದು. ತುಳಸಿ ಎಲೆಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ ಸಮೃದ್ಧವಾಗಿರುವುದರಿಂದ ಸೋಂಕಿನ ವಿರುದ್ಧ ಹೋರಾಡುತ್ತದೆ ಹಾಗೂ ವಿಷಕಾರಿ
ಫ್ರೀ ರ್ಯಾಡಿಕಲ್ ನಿಂದ ಆರೋಗ್ಯಕಾರಿ ಅಂಗಾಂಶಗಳನ್ನು ಕಾಪಾಡಲು ಸಹಕರಿಸುತ್ತದೆ ಅದೇ ರೀತಿ ಇದು ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ ಇದರಿಂದ ಉಸಿರಾಟಕ್ಕೂ ಉಪಕಾರಿಯಾಗಿದೆ.

ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಿದರೆ ದೇಹದಲ್ಲಿನ ಪಿಎಚ್ ಮಟ್ಟವನ್ನು ಕಾಪಾಡುವುದು ಮತ್ತು ದೇಹದಲ್ಲಿ ಆಮ್ಲೀಯತೆಯನ್ನು ಕೂಡ ನಿಯಂತ್ರಣದಲ್ಲಿಡುವುದು. ತುಳಸಿ ಎಲೆಗಳಲ್ಲಿ ಇರುವಂತಹ ಅಡಾಪ್ಟೋಜೆನ್ ಎನ್ನುವ ಅಂಶವು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಿದರೆ ಅದರಿಂದ ನರ ವ್ಯವಸ್ಥೆಗೆ ಆರಾಮವಾಗಲು ನೆರವಾಗುವುದು ಮತ್ತು ರಕ್ತ ಸಂಚಾರವು ಸುಧಾರಣೆ ಆಗುತ್ತದೆ. ಪ್ರತೀ ಎರಡು ದಿನಕ್ಕೊಮ್ಮೆ ಐದು ತುಳಸಿ ಎಲೆಗಳನ್ನು ಸೇವಿಸಬೇಕು.
ತುಳಸಿಯಲ್ಲಿ ಸೂಕ್ಷ್ಮಾಣು ವಿರೋಧಿ ಗುಣಗಳು ಇರುವುದರಿಂದ ಸಾಮಾನ್ಯ ಶೀತವನ್ನು ನಿಯಂತ್ರಿಸಬಹುದು.

ತುಳಸಿ ಎಲೆಗಳು ಇಮ್ಯೂನ್ ಮಾಡ್ಯೂಲೇಟರ್ ಆಗಿ ಕೆಲಸ ಮಾಡುವುದು, ಇದರಿಂದ ದೇಹದ ಪ್ರತಿರೋಧಕ ಶಕ್ತಿಯು ಸುಧಾರಣೆ ಆಗುತ್ತದೆ. ವೈರಸ್ ಮತ್ತು ಬ್ಯಾಕ್ಟೀರಿಯಾಗಳು ಉಂಟು ಮಾಡುವ ಹಾನಿಕಾರಕ ರೋಗದ ವಿರುದ್ಧ ಇದು ಹೋರಾಡುವುದು ಮತ್ತು ಆರೋಗ್ಯಕಾರಿ ಪ್ರತಿರೋಧಕ ಅಂಗಾಂಶಗಳನ್ನು ಇದು ನಿರ್ಮಾಣ ಮಾಡುವುದು. ತುಳಸಿ ಎಲೆಗಳಲ್ಲಿ ಯುಜೆನಾಲ್, ಕ್ಯಾರಿಯೋಫಿಲೀನ್ ಮತ್ತು ಮೀಥೈಲ್ ಯುಜೆನಾಲ್ ಎನ್ನುವ ಸಾರಭೂತ ತೈಲವಿದೆ. ಈ ಅಂಶಗಳು ಮೇಧೋಜೀರಕ ಗ್ರಂಥಿಯ ಅಂಗಾಂಶಗಳು ಇನ್ಸುಲಿನ್ ಜಮೆ ಮಾಡಲು ಮತ್ತು ಬಿಡುಗಡೆಗೊಳಿಸಲು ನೆರವಾಗುವುದು. ಇನ್ಸುಲಿನ್ ಸೂಕ್ಷ್ಮತೆಯಿಂದಾಗಿ ದೇಹದಲ್ಲಿ ರಕ್ತದ ಸಕ್ಕರೆ ಮಟ್ಟವು ಕಡಿಮೆ ಆಗುವುದು ಮತ್ತು ಮಧುಮೇಹವನ್ನು ನಿವಾರಣೆ ಮಾಡುವುದು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಿದರೆ ಕಿಡ್ನಿ ಕಲ್ಲುಗಳು ಕೂಡ ನಿವಾರಣೆ ಆಗುವುದು. ಕಿಡ್ನಿಯಲ್ಲಿ ಕ್ಯಾಲ್ಸಿಯಂ ಆಕ್ಸಲೇಟ್ ನಿರ್ಮಾಣವಾಗುವುದನ್ನು ತಡೆಯುವುದು.
ತುಳಸಿ ಎಲೆಗಳಲ್ಲಿ ಇರುವಂತಹ ಯುಜೆನಾಲ್ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಟ್ಟು ಹೃದಯವನ್ನು ರಕ್ಷಿಸುವುದು.  ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಿದರೆ ಅದರಿಂದ ಹೊಟ್ಟೆಯ ಅಸಿಡಿಟಿ, ಮಲಬದ್ಧತೆ ಇತ್ಯಾದಿಗಳನ್ನು ನಿವಾರಣೆ ಮಾಡುವುದು.

ತುಳಸಿ ಎಲೆಗಳಲ್ಲಿ ಕ್ಯಾನ್ಸರ್ ವಿರೋಧಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಈ ಅಂಶಗಳು ಬಾಯಿ ಮತ್ತು ಸ್ತನ ಕ್ಯಾನ್ಸರ್ ಬೆಳವಣಿಗೆ ಆಗದಂತೆ ತಡೆಯುವುದು. ಗಡ್ಡೆಗಳಿಗೆ ರಕ್ತ ಸರಬರಾಜು ಆಗುವುದನ್ನು ರಕ್ತನಾಳಗಳಿಗೆ ಕಡಿಮೆ ರಕ್ತ ಪೂರೈಕೆ ಮಾಡುವ ಮೂಲಕ ತಡೆಯುವುದು. ತುಳಸಿ ಎಲೆಗಳಲ್ಲಿ ಕ್ಯಾಂಪೇನ್, ವಿಟಮಿನ್ ಸಿ, ಸಿನೋಲ್ ಮತ್ತು ಯುಜೆನಾಲ್ ಶ್ವಾಸಕೋಶದ ಸೋಂಕನ್ನು ಹಾಗೂ ಕ್ಷಯ ರೋಗ ಕಾಯಿಲೆಯನ್ನು ನಿಯಂತ್ರಿಸುತ್ತದೆ.

ಹೀಗೆ ಹಲವಾರು ರೀತಿಯ ಜನರ ಕಾಯಿಲೆಗಳಿಗೆ ಮನೆಯ ಮದ್ದಾಗಿ ನಮ್ಮಲ್ಲಿರುವ ತುಳಸಿ ಗಿಡವನ್ನು ಉಪಯೋಗಿಸಬಹುದು ಹಾಗೂ ಸೌಂದರ್ಯ ವರ್ಧಕವಾಗಿನು ಉಪಯುಕ್ತವಾಗಿದೆ.

Leave A Reply

Your email address will not be published.