Yuva Nidhi Yojane 2023: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕರ್ನಾಟಕದ ನೂತನ ಸಿಎಂ, ಡಿಸಿಎಂ 20 ಮೇ ರಂದು ಪ್ರಮಾಣಚವನ ಸ್ವೀಕಾರದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳನ್ನು ಮಾಡುವ ಆಶ್ವಾಸನೆ ಕೊಟ್ಟಿತ್ತು. ಕಂಠೀರವ ಸ್ಟೇಡಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ. 5 ಗ್ಯಾರಂಟಿ ಆಶ್ವಾಸನೆಗಳು, ಇಂದು ಕಾನೂನಾಗಲಿದೆ. ಈ ಯೋಜನೆಯ ಅಡಿಯಲ್ಲಿ ಪದವಿ ಪಡೆದು ನಿರುದ್ಯೋಗಿಗಳಾಗಿರುವ (Yuva Nidhi Yojane) ಯುವಕರಿಗೆ ಪ್ರತಿ ತಿಂಗಳು ₹3000 ಹಣ ಸರ್ಕಾರವು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತದೆ.

ಈ ಯೋಜನೆಯ ಪ್ರಕಾರ 2023 ,2022, 2021 & 2020 ರಲ್ಲಿ ಪಾಸಾಗಿ ಉದ್ಯೋಗ ಇಲ್ಲದೆ ಇರುವ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ವರೆಗೆ ರೂ.3000/- ಕೊಡುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮತ್ತು ಡಿಪ್ಲೋಮಾ ಮುಗಿಸಿದವರಿಗೆ ರೂ. 1500/- ರೂಪಾಯಿ ಅವರಿಗೂ ಕೂಡಾ 02 ವರ್ಷದವರೆಗೆ ಕೊಡಲು ತೀರ್ಮಾನಿಸಿದ್ದಾರೆ.

ಈ ವರ್ಷ ಮುಗಿಯುವ ಎಲ್ಲಾ ರೀತಿಯ ಪದವಿಧರರಿಗೂ ಇದು ಅನುಸರಿಸುತ್ತದೆ. ಉದಾಹರಣೆಗೆ M.sc, M.A, M.com, B.A, B.Sc, B.com, MBBS, PHD, BE, ಹೀಗೆ ಅನೇಕ ಪದವಿಗಳು. ಇವರಿಗೆ ಎರಡು ವರ್ಷಗಳ ವರೆಗೆ ₹3000/- ರೂ. ಕೊಡುವುದಾಗಿ ಕಾಂಗ್ರೆಸ್ ಸರ್ಕಾರ ತಿಳಿಸಿದೆ. ಆನ್ಲೈನ್ ಮೂಲಕ ಅರ್ಜಿ ಡೌನ್ಲೋಡ್ ಮಾಡಿಕೊಂಡು ಅದಕ್ಕೆ ಬೇಕಾಗಿರುವ ಎಲ್ಲಾ ದಾಖಲಾತಿಗಳನ್ನು ನೋಡಿಕೊಂಡು ನೀವು ಕೂಡ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು.

ನಿಮ್ಮ ಆಧಾರ್ ಕಾರ್ಡಿ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಲಿಂಕ್ ಆಗಿರಬೇಕು. ನಿಮ್ಮ ಅರ್ಜಿ ನೊಂದಣಿ ಮಾಡಿಕೊಂಡ ನಂತರ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಇರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಆದ ಕಾರಣ ನೀವು ಕೂಡ ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಪರಿಶೀಲಿಸಿಕೊಳ್ಳಿ.

ನಿಮ್ಮ ಆಧಾರ ಯಾವುದಾದರೂ ಒಂದು ಬ್ಯಾಂಕ್ ಖಾತೆಗೆ ಲಿಂಕ್ ಆಗಿರುತ್ತದೆ ಅದಕ್ಕೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ನೀವು ಆಧಾರ್ ಕಾರ್ಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬಹುದು. ಜೂನ್ 01 ರಿಂದ ವಿದ್ಯಾರ್ಥಿಗಳಿಗೆ & ಎಲ್ಲರಿಗೂ ಸಂಪೂರ್ಣ ಉಚಿತ ಉಪಹಾರ ದೊರೆಯಲಿದೆ ಎಂದು ಹೇಳಿದ್ದಾರೆ. 200 units electricity free: ಜುಲೈ 1 ರಿಂದ ಇಂತಹ ಮನೆಗಳಿಗೆ ಮಾತ್ರ ಉಚಿತ ವಿದ್ಯುತ್ ಸಿಗಲಿದೆ

Leave a Reply

Your email address will not be published. Required fields are marked *